ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಬಳ್ಳಾರಿಯಲ್ಲಿ ಎನ್ಐಎ ಅಧಿಕಾರಿಗಳಿಂದ ಶಂಕಿತನ ಬಂಧನ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಬಳ್ಳಾರಿಯಲ್ಲಿ ಎನ್ಐಎ ಅಧಿಕಾರಿಗಳಿಂದ ಶಂಕಿತನ ಬಂಧನ

ನ್ಯೂಸ್ ಆ್ಯರೋ : ದೇಶದಾದ್ಯಂತ ಸುದ್ದಿಯಾಗಿದ್ದಾ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ಬಾಂಬರ್ ಜೊತೆ ಸಂಪರ್ಕ ಹೊಂದಿದ್ದ ಎನ್ನಲಾದ ಶಂಕಿತನೊಬ್ಬನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಸಾಂದರ್ಭಿಕ ಸಾಕ್ಷ್ಯ ಹಾಗೂ ಅನುಮಾಸ್ಪದ ಕಾರಣಗಳಿಂದಾಗಿ ಬಳ್ಳಾರಿ ಮೂಲದ ಶಬ್ಬೀರ್ ನನ್ನು ವಶಕ್ಕೆ ಪಡೆದ ಎನ್ಐಎ ಅಧಿಕಾರಿಗಳು ಆತನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ.

ರಾಜ್ಯದಲ್ಲಿ ಇದುವರೆಗೂ ಕುಕ್ಕರ್ ಹಾಗೂ ಟಿಫಿನ್ ಬಾಕ್ಸ್ ಬಾಂಬ್ಗಳನ್ನು ಸ್ಪೋಟಿಸಲಾಗಿತ್ತು. ಆದರೆ, ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಿಸಿರುವುದು ಸಿಲ್ವರ್ ಪ್ಲಾಸ್ಟಿಕ್ ಬಾಂಬ್ ಆಗಿರುವುದು ವಿಶೇಷವಾಗಿದೆ. ಇದೇ ಮೊದಲ ಬಾರಿಗೆ ಹೊಸ ಮಾದರಿಯ ಬಾಂಬ್ ಸ್ಪೋಟಿಸಿರುವುದರಿಂದ ಬಾಂಬರ್ ಐಸಿಸ್ ಉಗ್ರರ ಅಣತಿ ಮೇರೆಗೆ ಈ ಕೃತ್ಯ ನಡೆಸಿದ್ದಾನೆ ಎನ್ನುವುದು ತಿಳಿದುಬಂದಿದೆ.

ಐಸಿಸ್ ಉಗ್ರ ಸಂಘಟನೆಯಿಂದ ಪ್ರೇರಿಪಿತಗೊಂಡಿದ್ದ ಬಾಂಬರ್ ಆ ಸಂಘಟನೆಯಿಂದ ತರಬೇತಿ ಪಡೆದ ನಂತರವೇ ರಾಮೇಶ್ವರಂ ಕೆಫೆಯಲ್ಲಿ ಸಿಲ್ವರ್ ಪ್ಲಾಸ್ಟಿಕ್ ಮಾದರಿಯ ಬಾಂಬ್ ಸ್ಪೋಟಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಾಂಬ್ ಸ್ಪೋಟಕ್ಕೂ ಮುನ್ನ ಬಾಂಬರ್ ಶಿವನಸಮುದ್ರ, ಗುಂಡ್ಲುಪೇಟೆ, ತಮಿಳುನಾಡಿನ ಕೃಷ್ಣಗಿರಿ ಹಾಗೂ ಕೇರಳ ಗಡಿಭಾಗದ ಅರಣ್ಯಪ್ರದೇಶಗಳಲ್ಲಿ ತರಬೇತಿ ಪಡೆದಿರುವುದು ತನಿಖೆ ವೇಳೆ ಬಯಲಾಗಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ಐಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಶಂಕಿತ ಬಾಂಬರ್ ಆಂಧ್ರಪ್ರದೇಶದ ತಿರುಪತಿ ಅಥವಾ ಹೈದ್ರಾಬಾದ್ ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದ್ದು, ಆತನ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *