ಲೋಕಸಭಾ ಚುನಾವಣೆಗೆ ನಾಳೆಯೇ ದಿನಾಂಕ ಘೋಷಣೆ – ಚುನಾವಣಾ ಆಯೋಗದಿಂದ ಮಾಹಿತಿ, ನಾಳೆಯಿಂದಲೇ ನೀತಿ ಸಂಹಿತೆ ಜಾರಿ…!!

ಲೋಕಸಭಾ ಚುನಾವಣೆಗೆ ನಾಳೆಯೇ ದಿನಾಂಕ ಘೋಷಣೆ – ಚುನಾವಣಾ ಆಯೋಗದಿಂದ ಮಾಹಿತಿ, ನಾಳೆಯಿಂದಲೇ ನೀತಿ ಸಂಹಿತೆ ಜಾರಿ…!!

ನ್ಯೂಸ್ ಆ್ಯರೋ : ದೇಶಾದ್ಯಂತ ಲೋಕಸಭಾ ಚುನಾವಣೆಗೆ ಸರ್ವ ರಾಜಕೀಯ ಪಕ್ಷಗಳು ಗೆಲುವಿನ ತಂತ್ರ ಹೆಣೆಯಲು ಸಜ್ಜಾಗಿರುವಂತೆ ಲೋಕಸಭಾ ಚುನಾವಣೆಯ ವೇಳಾಪಟ್ಟಿಯ ಘೋಷಣೆಗೆ ಮುಹೂರ್ತ ನಿಗದಿಯಾಗಿದೆ‌. ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದ್ದು, ಈ ಪ್ರಕಟಣೆಯನ್ನು ಇಸಿಐನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗವು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದೆ. ಇದನ್ನು ಇಸಿಐನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಎಂದು ಇಸಿಐ ತಿಳಿಸಿದೆ.

ಕಳೆದ ಬಾರಿ 2019 ರಲ್ಲಿ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯಿತು. ಕಳೆದ ಬಾರಿ ಮಾರ್ಚ್ 10ರಂದು ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಘೋಷಿಸಿತ್ತು. ಏಪ್ರಿಲ್ 11 ರಂದು ಮೊದಲ ಹಂತದ ಮತದಾನ ನಡೆದಿದ್ದರೆ, ಮೇ 19 ರಂದು ಕೊನೆಯ ಹಂತದ ಮತದಾನ ನಡೆದಿತ್ತು. ಮೇ 23ರಂದು ಫಲಿತಾಂಶ ಹೊರಬಿದ್ದಿತ್ತು. ಆ ಚುನಾವಣೆಯ ಸಮಯದಲ್ಲಿ, ದೇಶದಲ್ಲಿ 91 ಕೋಟಿಗೂ ಹೆಚ್ಚು ಮತದಾರರಿದ್ದರು, ಅದರಲ್ಲಿ 67 ಪ್ರತಿಶತದಷ್ಟು ಜನರು ಮತ ಚಲಾಯಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮೂರನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವ ನಿರೀಕ್ಷೆಯಲ್ಲಿದೆ ನಾಳೆ ಯಾವುದೇ ಹೊಸ ನೀತಿ ನಿರ್ಧಾರಗಳನ್ನು ಘೋಷಿಸದಂತೆ ಅಧಿಕಾರದಲ್ಲಿರುವ ಸರ್ಕಾರವನ್ನು ನಿರ್ಬಂಧಿಸುವ ಮಾದರಿ ನೀತಿ ಸಂಹಿತೆ, ಘೋಷಣೆಯಾದ ತಕ್ಷಣ ಜಾರಿಗೆ ಬರುತ್ತದೆ.

Related post

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…
ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮೀ..?

ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ…

ನ್ಯೂಸ್ ಆರೋ: ಕೋಲ್ಕತ್ತಾದ ಐತಿಹಾಸಿಕ ಮೈದಾನವಾಗಿರುವ ಈಡನ್ ಗಾರ್ಡನ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯ ನಡೆಯಲಿದೆ. ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಪಂದ್ಯವನ್ನು ನೋಡಲು ಕಾತುರರಾಗಿದ್ದಾರೆ. ಕೆಕೆಆರ್…

Leave a Reply

Your email address will not be published. Required fields are marked *