ವಿಧಾನ ಪರಿಷತ್ ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸಲು ಏ.23 ಕಡೆ ದಿನ

ವಿಧಾನ ಪರಿಷತ್ ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸಲು ಏ.23 ಕಡೆ ದಿನ

ನ್ಯೂಸ್ ಆ್ಯರೋ : ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಕಿರಿಯ ಸಹಾಯಕರು ಮತ್ತು ಕಂಪ್ಯೂಟರ್​ ಸಹಾಯಕರು ಸೇರಿದಂತೆ ಒಟ್ಟು 28 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆ ವಿವರ:
ಸೀನಿಯರ್ ಪ್ರೋಗ್ರಾಮರ್ – 2
ಜೂನಿಯರ್ ಪ್ರೋಗ್ರಾಮರ್ – 2
ಜೂನಿಯರ್ ಕನ್ಸೋಲ್ ಆಪರೇಟರ್ – 4
ಕಂಪ್ಯೂಟರ್ ಆಪರೇಟರ್ – 4
ಸಹಾಯಕರು – 3
ಕಿರಿಯ ಸಹಾಯಕರು – 8
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು -5

ವಿದ್ಯಾರ್ಹತೆ:
ಸೀನಿಯರ್ ಪ್ರೋಗ್ರಾಮರ್ – ಸಿಎಸ್, ಐಎಸ್ ಅಥವಾ ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ನಲ್ಲಿ ಇಂಜಿನಿಯರಿಂಗ್ ಪದವಿ. ಸಂಬಂಧಿತ ಕ್ಷೇತ್ರದಲ್ಲಿ ಎರಡು ವರ್ಷದ ಅನುಭವ
ಜೂನಿಯರ್ ಪ್ರೋಗ್ರಾಮರ್ ಸಿಎಸ್, ಐಎಸ್ ಅಥವಾ ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ನಲ್ಲಿ ಇಂಜಿನಿಯರಿಂಗ್ ಪದವಿ. ಸಂಬಂಧಿತ ಕ್ಷೇತ್ರದಲ್ಲಿ ಎರಡು ವರ್ಷದ ಅನುಭವ
ಜೂನಿಯರ್ ಕನ್ಸೋಲ್ ಆಪರೇಟರ್ ಸಿಎಸ್, ಐಎಸ್ ಅಥವಾ ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ನಲ್ಲಿ ಇಂಜಿನಿಯರಿಂಗ್ ಪದವಿ. ಸಂಬಂಧಿತ ಕ್ಷೇತ್ರದಲ್ಲಿ ಒಂದು ವರ್ಷದ ಅನುಭವ
ಕಂಪ್ಯೂಟರ್ ಆಪರೇಟರ್ ಬಿಸಿಎ ಅಥವಾ ಸಿಎಸ್, ಎಲೆಕ್ಟ್ರಾನಿಕ್ಸ್ನಲ್ಲಿ ಬಿಎಸ್ಸಿ ಪದವಿ
ಸಹಾಯಕರು ಕಾನೂನು ಪದವಿ
ಕಿರಿಯ ಸಹಾಯಕರು ಪದವಿ
ದತ್ತಾಂಶ ನಮೂದು ಸಹಾಯಕರು / ಬೆರಳಚ್ಚುಗಾರರು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ, ಕೆಎಸ್ಇಇಬಿಯ ಬೆರಳಚ್ಚುಗಾರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ:
ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷ. ಪ.ಜಾ, ಪ. ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ

ಅರ್ಜಿ ಸಲ್ಲಿಕೆ:
ಆನ್ಲೈನ್ ಮೂಲಕ. ವಿಶೇಷಚೇತನ ಅಭ್ಯರ್ಥಿಗಳಿಗೆ 250 ರೂ. ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 500 ರೂ. ಇತರೆ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ

ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ

ಈ ಹುದ್ದೆಗೆ ಮಾರ್ಚ್​​ 24ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್​ 23 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು kea.kar.nic.in ಅಥವಾ etonline.karnataka.gov.in/kea ಇಲ್ಲಿಗೆ ಭೇಟಿ ನೀಡಿ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *