ಮಾತೃಪಕ್ಷ ಬಿಜೆಪಿಗೆ ಮರಳಿದ ಗಣಿಧಣಿ ಜನಾರ್ಧನ್ ರೆಡ್ಡಿ – ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ

ಮಾತೃಪಕ್ಷ ಬಿಜೆಪಿಗೆ ಮರಳಿದ ಗಣಿಧಣಿ ಜನಾರ್ಧನ್ ರೆಡ್ಡಿ – ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ

ನ್ಯೂಸ್ ಆ್ಯರೋ : ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ತಮ್ಮ ಮಾತೃಪಕ್ಷವಾದ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಬಿ.ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಜನಾರ್ದನ ರೆಡ್ಡಿಗೆ ಬಿಜೆಪಿ ಪಕ್ಷದ ಬಾವುಟ ನೀಡಿ ವಿಜಯೇಂದ್ರ ಸ್ವಾಗತ ಕೋರಿದರು.ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಬಿಜೆಪಿ ಸ್ವತಂತ್ರವಾಗಿ ಮೊದಲ ಬಾರಿಗೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದ ರೆಡ್ಡಿ ಅವರ ರಾಜಕಾರಣವು ಗಣಿ ಕೇಸ್‌ನ ನಂತರ ಮುಕ್ತಾಯವಾಯಿತು ಎಂದೇ ಹೇಳಲಾಗುತ್ತಿತ್ತು. ಆದರೆ, ಕಳೆದ ವಿಧಾನಸಭಾ ಚುನಾವಣೆಯ ವೇಳೆ ಫೀನಿಕ್ಸ್‌ ಹಕ್ಕಿಯಂತೆ ಪುನಃ ಪುಟಿದೆದ್ದ ಜನಾರ್ಧನ ರೆಡ್ಡಿ ಸ್ವಂತ ಪಕ್ಷ ಕಟ್ಟಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿಯೂ ಆಯ್ಕೆಯಾಗಿದ್ದರು.

ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಿದ್ದ ಜನಾರ್ಧನ ರೆಡ್ಡಿ ಅವರ ನಡೆಯಿಂದ ಎಲ್ಲರೂ ಶಾಕ್ ಆಗಿದ್ದರು. ಆದರೆ, ಈಗ ಲೋಕಸಭಾ ಚುನಾವಣೆ ಬರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕೆಂಬ ನಿಟ್ಟಿನಲ್ಲಿ ಈಗ ಬಿಜೆಪಿಗೆ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಇದರೊಂದಿಗೆ ಪಕ್ಷ ಬಿಟ್ಟು ಹೋದವರನ್ನು ಮರಳಿ ಪಕ್ಷಕ್ಕೆ ಸೇರಿಸುವ ಮೂಲಕ ವಿಜಯೇಂದ್ರ ಯಶಸ್ವಿ ರಾಜ್ಯಾಧ್ಯಕ್ಷರಾಗಿ ಗುರುತಿಸಲ್ಪಟ್ಟಿದ್ದಾರೆ.

Related post

ಸ್ಟಾರ್​ ನಟನೊಂದಿಗೆ 22ನೇ ವಯಸ್ಸಿನಲ್ಲಿ ಮೊದಲ ಕಿಸ್‌ ಮಾಡಿದ್ದರಂತೆ ಶಿಲ್ಪಾ ಶೆಟ್ಟಿ – ಮದುವೆಗೂ ಮುನ್ನವೇ ಕನ್ಯತ್ವ ಕಳೆದುಕೊಂಡಿದ್ದು ಯಾರ ಜೊತೆ ಗೊತ್ತೇ?

ಸ್ಟಾರ್​ ನಟನೊಂದಿಗೆ 22ನೇ ವಯಸ್ಸಿನಲ್ಲಿ ಮೊದಲ ಕಿಸ್‌ ಮಾಡಿದ್ದರಂತೆ ಶಿಲ್ಪಾ ಶೆಟ್ಟಿ…

ನ್ಯೂಸ್ ಆ್ಯರೋ : ಫಿಟ್‌ನೆಸ್ ಹಾಗೂ ತಮ್ಮ ನಟನೆಯಿಂದಲೇ ಹೆಸರುವಾಸಿಯಾಗಿರುವ ನಟಿಯರ ಪೈಕಿ ಮೊದಲಿಗೆ ಕೇಳಿ ಬರುವ ಹೆಸರು ಎಂದರೆ ಅದು ಶಿಲ್ಪಾ ಶೆಟ್ಟಿ(Shilpa Shetty) ಅವರದ್ದು, ಸ್ಯಾಂಡಲ್‌ವುಡ್,…
ಸಂಜೀವಿನಿಯಾಗಿದ್ದ ಕೋವಿಡ್ ವ್ಯಾಕ್ಸಿನ್ ನಿಂದ ವಿಶ್ವಾದ್ಯಂತ ಅಡ್ಡ ಪರಿಣಾಮ ಹಿನ್ನೆಲೆ – ಕೊರೊನಾ ಲಸಿಕೆಯನ್ನೇ ಹಿಂಪಡೆದ ಅಸ್ಟ್ರಾಜೆನೆಕಾ

ಸಂಜೀವಿನಿಯಾಗಿದ್ದ ಕೋವಿಡ್ ವ್ಯಾಕ್ಸಿನ್ ನಿಂದ ವಿಶ್ವಾದ್ಯಂತ ಅಡ್ಡ ಪರಿಣಾಮ ಹಿನ್ನೆಲೆ –…

ನ್ಯೂಸ್ ಆ್ಯರೋ : 2021ರಲ್ಲಿ ಕೋವಿಡ್ (Covid) ಜಗತ್ತನ್ನು ಆವರಿಸಿಕೊಂಡಾಗ ಎಲ್ಲಾ ರಾಷ್ಟ್ರಗಳು ತನ್ನ ಪ್ರಜೆಗಳಿಗೆ ಜೀವರಕ್ಷಕ ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಮತ್ತು ತ್ವರಿತವಾಗಿ ಬಿಡುಗಡೆ ಮಾಡಲು ಹಗಲಿರುಳು ಶ್ರಮಿಸುವ…
Mangalore : ವೈದ್ಯಕೀಯ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ರಿಂಗ್ ಆಯ್ತು ಬಚ್ಚಿಟ್ಟ ಮೊಬೈಲ್..!! – 17ರ ಹರೆಯದ ಅಪ್ರಾಪ್ತ ಬಾಲಕ ಪೋಲಿಸರ ವಶಕ್ಕೆ..!!

Mangalore : ವೈದ್ಯಕೀಯ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ರಿಂಗ್ ಆಯ್ತು…

ನ್ಯೂಸ್ ಆ್ಯರೋ : ಮಂಗಳೂರಿನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಖಲಾಗಿರುವ ದೂರಿನ ಪ್ರಕಾರ…

Leave a Reply

Your email address will not be published. Required fields are marked *