ಉಳ್ಳಾಲ : ಗೃಹ ಪ್ರವೇಶ ಮುಗಿಸಿ ಬರುತ್ತಿದ್ದ ನವವಿವಾಹಿತೆಗೆ ಕಾಡಿದ ವಿಧಿ – ಡಿವೈಡ‌ರ್ ನಿಂದ ನೆಗೆದು ಬಿದ್ದ ಬೈಕ್‌, ನವವಿವಾಹಿತೆ ದುರ್ಮರಣ

ಉಳ್ಳಾಲ : ಗೃಹ ಪ್ರವೇಶ ಮುಗಿಸಿ ಬರುತ್ತಿದ್ದ ನವವಿವಾಹಿತೆಗೆ ಕಾಡಿದ ವಿಧಿ – ಡಿವೈಡ‌ರ್ ನಿಂದ ನೆಗೆದು ಬಿದ್ದ ಬೈಕ್‌, ನವವಿವಾಹಿತೆ ದುರ್ಮರಣ

ನ್ಯೂಸ್ ಆ್ಯರೋ : ಮಂಗಳೂರು ಹೊರವಲಯದ ಅಸೈಗೋಳಿಯ ತಿಲ್ಲೆ ಪದವಿನ ರಾಜ್ಯ ಹೆದ್ದಾರಿಯಲ್ಲಿ
ನಿಯಂತ್ರಣ ತಪ್ಪಿ ಡಿವೈಡರ್ ನೆಗೆದ ಬೈಕಿನಿಂದ ಎಸೆಯಲ್ಪಟ್ಟ ಸಹ ಸವಾರೆ ಗೃಹಿಣಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಅಸೈಗೋಳಿಯ ತಿಲ್ಲೆ ಪದವಿನ ರಾಜ್ಯ ಹೆದ್ದಾರಿಯಲ್ಲಿ ಆದಿತ್ಯವಾರ ಸಂಜೆ ನಡೆದಿದೆ. ಅಪಘಾತದ ದೃಶ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದರ ಡ್ಯಾಷ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೋಂದೆಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಮೃತಪಟ್ಟ ಮಹಿಳೆ. ಬೈಕ್ ಸವಾರ ಯತೀಶ್ ದೇವಾಡಿಗ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರಾದರೂ‌ ಸದ್ಯ ಅವರೂ ಕೂಡಾ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ನಿಧಿ ಅವರು ಆದಿತ್ಯವಾರ ಮುಡಿಪುವಿನಲ್ಲಿ ನಡೆದಿದ್ದ ಗೃಹ ಪ್ರವೇಶವೊಂದರಲ್ಲಿ ಭಾಗವಹಿಸಿ ಯತೀಶ್ ಎಂಬವರ ಜೊತೆ ಬೈಕಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಸಂಜೆ 7.25 ಸಮಯದಲ್ಲಿ ತಿಲ್ಲೆ ಪದವು ಎಂಬಲ್ಲಿ ಅಪಘಾತ ನಡೆದಿದೆ.

ಅತಿ ವೇಗದಿಂದ ಧಾವಿಸುತ್ತಿದ್ದ ಬೈಕ್ ಡಿವೈಡರ್ ನೆಗೆದು ಪಕ್ಕದ ರಸ್ತೆಗೆ ಬಿದ್ದಿದೆ. ಅಪಘಾತದ ತೀವ್ರತೆಗೆ ಬೈಕ್ ಚಾಲಕ ಯತೀಶ್ ಮತ್ತು ಸಹ ಸವಾರೆ ನಿಧಿ ರಸ್ತೆಗೆಸೆಯಲ್ಪಟ್ಟಿದ್ದಾರೆ.

ಅಪಘಾತ ಸಂದರ್ಭದಲ್ಲಿ ಇನ್ನೊಂದು ಬದಿಯ ರಸ್ತೆಗೆ ಮಹಿಳೆ ಮತ್ತು ಯುವಕ ಬಿದ್ದಿದ್ದು ಒಬ್ಬರ ಮೇಲಿನಿಂದಲೇ ಕಾರು ಚಲಿಸಿರುವ ಸಾಧ್ಯತೆಯಿದೆ. ಬೈಕ್ ಮತ್ತು ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದರೂ ಕಾರು ಚಾಲಕ ನೇರವಾಗಿ ಚಲಿಸಿದ್ದು ಹಿಂಬದಿಯ ಕಾರಿನ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Related post

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್. ಡಿ. ರೇವಣ್ಣ; ಮೇ 14 ರವರೆಗೆ ನ್ಯಾಯಾಂಗ ಬಂಧನ

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್.…

ನ್ಯೂಸ್ ಆ್ಯರೋ : ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು…
TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

ನ್ಯೂಸ್ ಆ್ಯರೋ : ಮನಸ್ಸಿಗೆ ಕಿರಿಕಿರಿ ನೀಡುವ ಮತ್ತು ತಮ್ಮ ಕೆಲಸದ ವೇಳೆಯಲ್ಲಿ ಅಡಚಣೆ ಉಂಟು ಮಾಡುವ ಸ್ಪ್ಯಾಮ್ ಕರೆಗಳನ್ನು (Spam call) ತಡೆಯುವುದು ಇಂದು ದೊಡ್ಡ ಸಾಹಸ…
ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ ಮಾಡಿ

ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ…

ನ್ಯೂಸ್ ಆ್ಯರೋ : ಅಡುಗೆ, ಸಲಾಡ್, ಜ್ಯೂಸ್​ನಲ್ಲೂ ಬಳಸುವ ಸೌತೆಕಾಯಿಗಳು ಸೌಂದರ್ಯದ ದೃಷ್ಟಿಯಿಂದಲೂ ಬಹಳ ಕೊಡುಗೆ ನೀಡುತ್ತವೆ. ಈ ಪೌಷ್ಟಿಕ ತರಕಾರಿ ನಿಮ್ಮ ಚರ್ಮಕ್ಕೆ ಚಿಕಿತ್ಸೆ ನೀಡಲು ಉತ್ತಮ…

Leave a Reply

Your email address will not be published. Required fields are marked *