ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್ ರನ್ನು ಬೆಂಗಳೂರಿಗೆ ಕರೆತರಲಾಗಿದೆ ಎನ್ನಲಾಗಿದೆ.

ಆರೋಪಿಗಳನ್ನು ಮಡಿವಾಳದ ಎಫ್ ಎಸ್ ಎಲ್ ಸೆಂಟರ್ ಬಳಿಯ ಇಂಟರಾಗೇಷನ್ ಸೆಲ್ ನಲ್ಲಿರಿಸಿ ವಿಚಾರಣೆ ಮಾಡಲಾಗುತ್ತಿದೆ. ರಾತ್ರಿ ಇಂಟರಾಗೇಷನ್ ಸೆಲ್ ನಲ್ಲೇ ಶಂಕಿತರು ಇದ್ದು, ಬೆಳಗ್ಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಬೆಳಗ್ಗೆ 10:30 ಕ್ಕೆ ಕೋರಮಂಗಲದ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಈ ಇಬ್ಬರು ಉಗ್ರರು ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ತಲೆ ಮರೆಸಿಕೊಂಡಿದ್ದರು. ನಿನ್ನೆ ನಸುಕಿನ ಜಾವ ಬಾಂಬ್‌ ಇಟ್ಟವರನ್ನು ಎನ್‌ಐಎ ಬಂಧಿಸಿತ್ತು. ಕೊಲ್ಕತ್ತದಲ್ಲಿ ಉಗ್ರ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜಿಬ್ ಬಂಧನವಾಗಿದ್ದು, ಮುಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಐಇಡಿ ಇಟ್ಟು ಸ್ಪೋಟಿಸಿದ್ದರೆ, ಅಬ್ದುಲ್ ಮತೀನ್ ತಾಹಾ ಬಾಂಬ್ ಹಿಡಲು ಪ್ಲಾನ್ ಮಾಡಿದ್ದ. ಈ ಪ್ರಕರಣದಲ್ಲಿ ಮತೀನ್ ಮಾಸ್ಟರ್ ಮೈಂಡ್ ಆಗಿ ಕೆಲಸ ಮಾಡಿದ್ದ. ಬಾಂಬ್ ಇಡಲು ಸಂಚು, ಪ್ಲಾನ್ ಎಕ್ಸ್ಯೂಷನ್ , ಬ್ಲಾಸ್ಟ್ ಮಾಡಲು ಎಲ್ಲಾ ರೀತಿ ಪ್ಲಾನ್ ಮಾಡಿದ್ದ.

ಕೋಲ್ಕತ್ತಾದಲ್ಲಿ ಉಗ್ರರು ನಕಲಿ ದಾಖಲೆ ನೀಡಿ ಹೆಸರು ಬದಲಿಸಿಕೊಂಡು ವಾಸ್ತವ್ಯ ಹೂಡಿದ್ದರು. ಈ ಕಾರ್ಯಾಚರಣೆಗೆ ಎನ್ ಐಎ ಜೊತೆ ಐಬಿ ,ಪಶ್ಚಿಮ ಬಂಗಾಳ, ತೆಲಂಗಾಣ, ಕರ್ನಾಟಕ, ಕೇರಳ ಪೊಲೀಸರು ಸಹಕಾರ ನೀಡಿದ್ದರು. ಎಲ್ಲಾ ಏಜೆನ್ಸಿಗಳ ಸಹಾಯದಿಂದ ಉಗ್ರರ ಬಂಧನವಾಗಿದೆ ಎಂದು ಎನ್ ಐಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕೊಲ್ಕಾತಾದ ಹೊರವಲಯದ ಪೂರ್ವ ಮಿಡ್ನಾಪುರ ದಿಘಾ ಎಂಬಲ್ಲಿ ಉಗ್ರರು ಹೆಸರು ಬದಲಿಸಿಕೊಂಡು ವಾಸವಿದ್ದರು. ನಿನ್ನೆ ಬೆಳಗ್ಗಿನ ಜಾವ 2.30 ರ ಸುಮಾರಿಗೆ ಉಗ್ರರಿದ್ದ ಮನೆ ಮೇಲೆ ದಾಳಿ ನಡೆಸಿದ ಎನ್‌ಐಎ ನಿದ್ದೆಯಲ್ಲಿದ್ದ ಇಬ್ಬರು ಉಗ್ರರನ್ನು ವಶಕ್ಕೆ ಪಡೆದಿದೆ. ಸದ್ಯ ಇಬ್ಬರನ್ನು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *