ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ರಿಲೀಸ್ ಆಗ್ತಾರಾ ದರ್ಶನ್

Darshan Thoogudeepa
Spread the love

ನ್ಯೂಸ್ ಆ್ಯರೋ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಅವರ ಬೇಲ್ ಭವಿಷ್ಯ ನಿರ್ಧಾರ ಆಗಲಿದೆ.

ಇನ್ನು ವಿನಯ್, ರವಿಶಂಕರ್, ನಾಗರಾಜ್ ಹಾಗೂ ಲಕ್ಷ್ಮಣ್, ದೀಪಕ್ ಹಾಗೂ ಅನುಕುಮಾರ್ ಜಾಮೀನು ಅರ್ಜಿ ವಿಚಾರಣೆ ಕೂಡ ಇಂದು ನಡೆಯಲಿದ್ದು, ಡೆವಿಲ್​ ಗ್ಯಾಂಗ್​ಗೆ ಇಂದಾದರೂ ಜಾಮೀನು ಸಿಗತ್ತಾ ಕಾದು ನೋಡಬೇಕಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ನಡೆಯಲಿದೆ. ಹೀಗಾಗಿ ನಟ ದರ್ಶನ್ ಅವರ ಜಾಮೀನು ಭವಿಷ್ಯ ಏನಾಗಲಿದೆ ಕಾದು ನೋಡಬೇಕಾಗಿದೆ.

ಇನ್ನು ದರ್ಶನ್ ಅವರು ಬಳ್ಳಾರಿ ಜೈಲಿನ ಆವರಣದಲ್ಲಿ ಚೇರ್​ನಲ್ಲಿ ಕುಳಿತಿರುವ ಫೋಟೋ ವೈರಲ್ ಆಗದೇ ಇರುತ್ತಿದ್ದರೆ ಬಹುಶಃ ಅವರು ಈಗಲೂ ಬೆಂಗಳೂರಿನಲ್ಲೇ ಇರುತ್ತಿದ್ದರೇನೋ, ಆದರೆ ಫೋಟೋ ಲೀಕ್ ಆದ ಕಾರಣ ನಟನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.

Leave a Comment

Leave a Reply

Your email address will not be published. Required fields are marked *