ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಫುಟ್ಬಾಲ್ ದಂತಕಥೆ ಪೀಲೆ: ತೀವ್ರ ಹದಗೆಟ್ಟ ಆರೋಗ್ಯ, ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ

ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಫುಟ್ಬಾಲ್ ದಂತಕಥೆ ಪೀಲೆ: ತೀವ್ರ ಹದಗೆಟ್ಟ ಆರೋಗ್ಯ, ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ

ನ್ಯೂಸ್ ಆ್ಯರೋ : ಬ್ರೆಜಿಲ್ ಫುಟ್ಬಾಲ್ ದಂತಕಥೆ ಪೀಲೆ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದ್ದು ಅವರು ಕೀಮೋ ಥೆರಪಿಗೆ ಸ್ಪಂದಿಸುತ್ತಿಲ್ಲ ಎಂದು ವರದಿಯಾಗಿದೆ.

ಪೀಲೆಗೆ ಕಳೆದ ವರ್ಷ ಕರುಳಿನ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ವೈದ್ಯರು ಅವರ ದೊಡ್ಡ ಕರುಳಿನಿಂದ ಗಡ್ಡೆಯನ್ನು ಹೊರತೆಗೆದಿದ್ದಾರೆ. ಕ್ಯಾನ್ಸರ್‌ನಿಂದಾಗಿ ಪೀಲೆ ಅವರ ಆರೋಗ್ಯ ಸ್ಥಿತಿ ಇತ್ತೀಚೆಗೆ ಹದಗೆಟ್ಟಿತು ಮತ್ತು ಕುಟುಂಬವು ಬ್ರೆಜಿಲ್‌ನ ಸಾವೊ ಪಾಲೊ ನಗರದ ಆಲ್ಬರ್ಟ್ ಐನ್‌ಸ್ಟೈನ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆಯನ್ನು ನೀಡುತ್ತಿದ್ದಾರೆ.

ಈಚೆಗೆ ಪೀಲೆ ಅವರ ಆರೋಗ್ಯ ಸ್ಥಿತಿ ಚೇತರಿಸಿಕೊಂಡು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವರದಿಯಾಗಿತ್ತು. ಆದರೆ ಶನಿವಾರ ಬ್ರೆಜಿಲ್‌ನ ಮಾಧ್ಯಮಗಳು ಪೀಲೆ ಅವರ ಆರೋಗ್ಯ ಹದಗೆಟ್ಟಿದೆ ಎಂದು ಸುದ್ದಿ ಬಿತ್ತರಿಸಿದೆ. ಸದ್ಯ ಪೀಲೆ ಅವರನ್ನು ಉಪಶಾಮಕ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ. ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವವರನ್ನು ಈ ಉಪಶಾಮಕ ನಿಗಾ ಘಟಕಕ್ಕೆ ವರ್ಗಾಯಿಸಲಾಗುತ್ತದೆ. ಕುಟುಂಬ ಸದಸ್ಯರ ಅನುಮತಿ ಮೇರೆಗೆ ಪೀಲೆ ಅವರನ್ನು ಉಪಶಾಮಕ ಆರೈಕೆಗೆ ಸ್ಥಳಾಂತರಿಸಲಾಗಿದೆ.

ಬ್ರೆಜಿಲ್ ಪರ 92 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 77 ಗೋಲು ಮಾಡಿದ ಪೀಲೆ:

ವೃತ್ತಿಜೀವನದಲ್ಲಿ ಒಟ್ಟು 1,363 ಪಂದ್ಯಗಳನ್ನು ಆಡಿರುವ ಪೀಲೆ 1,279 ಗೋಲುಗಳನ್ನು ಗಳಿಸಿದ್ದಾರೆ.ಬ್ರೆಜಿಲ್ ಪರ 92 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 77 ಗೋಲು ಗಳಿಸಿದ್ದಾರೆ. ಅತೀ ಹೆಚ್ಚು ಗೋಲು ಗಳಿಸಿದ ಆಟಗಾರ ಎಂಬ ಗಿನ್ನಿಸ್ ದಾಖಲೆಯನ್ನು ಪೀಲೆ ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *