ತಾಯಿ ಸಾವನ್ನಪ್ಪಲಿದ್ದಾರೆಂದು ರಜೆ ಕೇಳಿದ ಶಿಕ್ಷಕ: ರಜಾಅರ್ಜಿಯಲ್ಲಿ ಕಾರಣ ನೋಡಿ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಕ್‌

ತಾಯಿ ಸಾವನ್ನಪ್ಪಲಿದ್ದಾರೆಂದು ರಜೆ ಕೇಳಿದ ಶಿಕ್ಷಕ: ರಜಾಅರ್ಜಿಯಲ್ಲಿ ಕಾರಣ ನೋಡಿ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಕ್‌

ನ್ಯೂಸ್ ಆ್ಯರೋ : ಮನೆಯ ಸದಸ್ಯರೊಬ್ಬರು ಸತ್ತಿದ್ದಾರೆ, ರಜೆ ಕೊಡಿ ಎಂದು ಕೇಳುವುದನ್ನು ನೋಡಿದ್ದೇವೆ. ಆದರೆ ಇದೇ ದಿನಾಂಕದಂದು ನಮ್ಮ ತಾಯಿ ಸಾಯಲಿದ್ದಾರೆ ಎಂದು ಮುಂಚಿತವಾಗಿ ಶಿಕ್ಷಕರೊಬ್ಬರು ಮುಖ್ಯಶಿಕ್ಷಕರಿಗೆ ಬರೆದಿರುವ ರಜಾ ಅರ್ಜಿ ಭಾರೀ ವೈರಲ್ ಆಗಿದೆ.

ನನ್ನ ತಾಯಿ ಡಿಸೆಂಬರ್ 5ರಂದು ಸಾವನ್ನಪ್ಪಲಿದ್ದಾರೆ, ಆ ನಿಟ್ಟಿನಲ್ಲಿ 6 ಮತ್ತು 7ರಂದು ರಜೆ ನೀಡಿ ಎಂದು ಬಿಹಾರದ ಶಿಕ್ಷಕರು ಮುಖ್ಯಶಿಕ್ಷಕರಿಗೆ ಬರೆದಿರುವ ರಜಾ ಅರ್ಜಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಹೊಟ್ಟೆ ನೋವು, ತಲೆ ನೋವು, ಜ್ವರ ಅಂತಾ ಕಾರಣ ನೀಡಿ ರಜೆ ತೆಗೆದುಕೊಳ್ಳುವುದನ್ನು ನೋಡಿದ್ದೇವೆ. ಇನ್ನು ಕೆಲವರು ನಮ್ಮ ಮನೆಯ ಸದಸ್ಯರೊಬ್ಬರು ತೀರಿ ಹೋಗಿದ್ದಾರೆ ಎಂದು ಸುಳ್ಳು ಹೇಳಿ ರಜೆ ಮಾಡುವವರೂ ಇದ್ದಾರೆ.ಆದರೆ ತಾಯಿಯೊಬ್ಬರು ಸಾವನ್ನಪ್ಪಲಿದ್ದಾರೆಂದು ಮುಂಚಿತವಾಗಿ ರಜೆ ಕೇಳಿ ಶಿಕ್ಷಕ ಅಜಯ್ ಅವರು ಶಾಕ್ ನೀಡಿದ್ದಾರೆ.

ಬಿಹಾರದ ಮುಂಗೇರ್, ಭಾಗಲ್ಪುರ್​ ಮತ್ತು ಬಂಕಾ ಜಿಲ್ಲೆಗಳಲ್ಲಿ ಶಿಕ್ಷಕರು ತಮ್ಮ ಕ್ಯಾಶುಯಲ್ ರಜೆಯ ಪಡೆದುಕೊಳ್ಳಲು ಶಿಕ್ಷಣ ಇಲಾಖೆ ಹೊಸ ಆದೇಶವನ್ನು ಹೊರಡಿಸಿದೆ. ಅದರ ಪ್ರಕಾರ ರಜೆ ಪಡೆಯುವ ಶಿಕ್ಷಕರು 3 ದಿನ ಮುಂಚಿತವಾಗಿಯೇ ಕ್ಯಾಶುಯಲ್ ರಜೆಗೆ ಅರ್ಜಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ್ದು, ಇಲ್ಲವಾದಲ್ಲಿ ರಜೆಯನ್ನು ರದ್ದು ಮಾಡಲಾಗುವುದು ಎಂದಿದ್ದಾರೆ.

ಇದೀಗ ರಜೆ ಪಡೆಯುವ ಶಿಕ್ಷಕರು ಅದಕ್ಕೆ ಸೂಕ್ತ ಕಾರಣಗಳನ್ನು ಸಹ ನೀಡಬೇಕಾಗಿದೆ. ಆದರೆ, ಶಿಕ್ಷಕರೊಬ್ಬರು ನೀಡಿರುವ ಕಾರಣ ಎಲ್ಲರನ್ನು ಆಘಾತಕ್ಕೆ ದೂಡಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *