ಚೀನಾದಲ್ಲಿ ದಿನವೊಂದಕ್ಕೆ 9 ಸಾವಿರ ಮಂದಿಯನ್ನು ಬಲಿ ಪಡೆಯುತ್ತಿದೆ ಕೊರೊನಾ – ವೈರಾಣು ಬಲೆಯಲ್ಲಿ ಸಿಲುಕಿ ನರಳುತ್ತಿದೆ ಚೀನಾ

ಚೀನಾದಲ್ಲಿ ದಿನವೊಂದಕ್ಕೆ 9 ಸಾವಿರ ಮಂದಿಯನ್ನು ಬಲಿ ಪಡೆಯುತ್ತಿದೆ ಕೊರೊನಾ – ವೈರಾಣು ಬಲೆಯಲ್ಲಿ ಸಿಲುಕಿ ನರಳುತ್ತಿದೆ ಚೀನಾ

ನ್ಯೂಸ್ ಆ್ಯರೋ : ಕೊರೊನಾ ವೈರಸ್ ಸೋಂಕಿನ ಮೊದಲು ಮೂರು ಅಲೆಗಳಿಂದ ಬಚಾವಾಗಿದ್ದ ಚೀನಾ ಇದೀಗ ವೈರಾಣು ಬಲೆಯಲ್ಲಿ ಸಿಲುಕಿದ್ದು, ಹೊರಬರುವ ಮಾರ್ಗ ಕಾಣದೆ ಪರಿತಪಿಸುತ್ತಿದೆ. ಚೀನಾದಲ್ಲಿ ಪ್ರತಿದಿನ ಸರಾಸರಿ 9,000 ಮಂದಿ ಸೋಂಕಿನಿಂದ ಸಾವನ್ನಪ್ಪುತ್ತಿದ್ದಾರೆ ಎಂದು ಅಂದಾಜಿಸಲಾಗಿದ್ದು, ಪ್ರತಿದಿನ ವರದಿಯಾಗುತ್ತಿರುವ ಸರಾಸರಿ ಸೋಂಕು ಪ್ರಕರಣಗಳು 10 ಲಕ್ಷ ದಾಟಿದೆ.

ಜಗತ್ತಿನಲ್ಲಿ ಈವರೆಗೆ ವರದಿಯಾಗಿದ್ದ ಸೋಂಕು ಪ್ರಸರಣದ ದಾಖಲೆಗಳನ್ನು ಇದು ಮುರಿದಿದ್ದು, ಚೀನಾ ಮೇಲೆ ಹಲವು ಕಾರಣಗಳಿಂದ ಅವಲಂಬಿತವಾಗಿರುವ ದೇಶಗಳಲ್ಲಿ ಆರ್ಥಿಕತೆ ಕುಸಿದು ಬೀಳುವ ಆತಂಕ ಎದುರಾಗಿದೆ.

ಚೀನಾದ ಜನಸಂಖ್ಯೆ ಸುಮಾರು 140 ಕೋಟಿ. ಸೋಂಕು ಹರಡುವಿಕೆ ಇದೇ ಪ್ರಮಾಣದಲ್ಲಿ ಮುಂದುವರಿದರೆ ಜನವರಿ ತಿಂಗಳ ಮಧ್ಯಭಾಗದ ಹೊತ್ತಿಗೆ ದಿನಕ್ಕೆ ಸರಾಸರಿ 37 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುವ ಭೀತಿ ಎದುರಾಗಿದೆ ಎಂದು ಲಂಡನ್ ಮೂಲದ ಏರ್​ಫಿನಿಟಿ ಲಿಮಿಟೆಡ್​ನ ಸಮೀಕ್ಷೆಯು ತಿಳಿಸಿದೆ.

ಮಾರ್ಚ್​​ ವೇಳೆಗೆ ದೈನಂದಿನ ಸೋಂಕು ಪ್ರಮಾಣ 42 ಲಕ್ಷಕ್ಕೆ ಮುಟ್ಟಬಹುದು ಎಂದು ಅಂದಾಜಿಸಲಾಗಿದೆ. ಈ ಅಂಕಿಅಂಶಗಳು ಚೀನಾ ಸರ್ಕಾರ ಒದಗಿಸುತ್ತಿರುವ ರಾಷ್ಟ್ರೀಯ ಸರಾಸರಿಗಿಂತಲೂ ಹಲವು ಪಟ್ಟು ಹೆಚ್ಚಾಗಿದೆ. ಕೊವಿಡ್​ ವಿಚಾರದಲ್ಲಿ ಈವರೆಗೆ ಅನುಸರಿಸುತ್ತಿದ್ದ ಶೂನ್ಯ ಸಹಿಷ್ಣುತೆ ನೀತಿಯಿಂದ ಹೊರಬರುವುದಾಗಿ ಅಲ್ಲಿನ ಸರ್ಕಾರ ಘೋಷಿಸಿದ ನಂತರ ಚೀನಾದಲ್ಲಿ ಏಕಾಏಕಿ ಸೋಂಕು ಪ್ರಕರಣಗಳು ಹೆಚ್ಚಾಗಿವೆ.

ಇಷ್ಟಾದರೂ ಚೀನಾ ಸಾವು ಪ್ರಕರಣಗಳ ಸಂಖ್ಯೆಯೂ ಸಾಕಷ್ಟು ಕಡಿಮೆಯಿದೆ ಎಂದು ಹೇಳಿಕೊಂಡಿದೆ. ಆದರೆ ತುಂಬಿ ತುಳುಕುತ್ತಿರುವ ಆಸ್ಪತ್ರೆಗಳು ಮತ್ತು ಚಿತಾಗಾರ ಮತ್ತು ಸ್ಮಶಾನಗಳಲ್ಲಿ ಸಂಸ್ಕಾರಕ್ಕಾಗಿ ಕಾಯುತ್ತಿರುವ ಹೆಣಗಳು ಬೇರೊಂದು ಸಂದೇಶ ನೀಡುತ್ತಿವೆ. ಚಿತಾಗಾರಗಳಲ್ಲಿ ಕೆಲಸ ಮಾಡುವವರು ಅಂತ್ಯಗಾಣದ ಹೆಣಗಳ ಸಾಲಿನಿಂದ ಹೈರಾಣಾಗಿದ್ದಾರೆ. ಕೊರೊನಾ ಸೋಂಕು ಮತ್ತು ಕೊರೊನಾ ಸೋಂಕಿನಿಂದ ಸಾವು ಎನ್ನುವುದರ ವ್ಯಾಖ್ಯಾನವನ್ನೂ ಚೀನಾ ಬದಲಿಸಿಕೊಂಡಿದೆ. ಹೀಗಾಗಿ ಅಲ್ಲಿನ ಪ್ರಾದೇಶಿಕ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿರುವ ಅಂಕಿಅಂಶಗಳ ಬಗ್ಗೆ ವಿಶ್ವದ ಇತರ ದೇಶಗಳು ಸಂದೇಹ ವ್ಯಕ್ತಪಡಿಸುತ್ತಿವೆ. ತೀವ್ರವೇಗದಲ್ಲಿ ಸೋಂಕು ಹರಡುವ ಒಮಿಕ್ರಾನ್ ರೂಪಾಂತರಿ ಚೀನಾದಲ್ಲಿ ವ್ಯಾಪಕವಾಗಿ ಕಾಣಿಸಿಕೊಂಡಿದೆ.

ಇನ್ನೂ ಚೀನಾದಲ್ಲಿ ಇದಕ್ಕೂ ಮೊದಲು ಜೀರೋ ಕೋವಿಡ್ ಪಾಲಿಸಿ ಇತ್ತು. ಯಾವುದೇ ಒಂದು ಕಟ್ಟಡದಲ್ಲಿ, ಒಬ್ಬರಿಗೆ ಸೋಂಕು ತಗುಲಿದರೂ ಇಡೀ ಕಟ್ಟಡ ಸೀಲ್‌ಡೌನ್ ಮಾಡುತ್ತಿದ್ದರು. ಇದರಿಂದಾಗಿ ಕೊರೊನಾ ನಿಯಂತ್ರಣದಲ್ಲಿತ್ತು. ಆದರೆ, ಕ್ವಿನ್‌ಜಾಂಗ್ ನಗರದಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು, 16 ಜನ ಮೃತಪಟ್ಟರು. ಇದಾದ ಬಳಿ, ದೇಶದ ಹಲವೆಡೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆದವು.

ಜೀರೋ ಕೋವಿಡ್ ನೀತಿ ರದ್ದುಗೊಳಿಸಬೇಕು ಎಂಬ ಆಕ್ರೋಶ ವ್ಯಕ್ತವಾಯಿತು. ಇದರಿಂದಾಗಿ ಸರ್ಕಾರ ನೀತಿಯನ್ನು ರದ್ದುಗೊಳಿಸಿತು. ಹಾಗಾಗಿ, ಕೊರೊನಾ ಹಾವಳಿ ಜಾಸ್ತಿಯಾಗಿದ್ದು, ಜೀರೋ ಕೋವಿಡ್ ನೀತಿಯು ರದ್ದಾದ ಕಾರಣ ಈಗ ಕಾರಂಟೈನ್ ಲಾಕ್‌ಡೌನ್ ಎಲ್ಲ ನಿಯಮಗಳನ್ನು ರದ್ದುಗೊಳಿಸಲಾಗಿದೆ. ಈಗ ಕೊರೊನಾ ದೃಢಪಟ್ಟರೂ ಯಾರು ಕೂಡ ಅವರನ್ನು ಕಾರಂಟೈನ್‌ನಲ್ಲಿರಿಸುವುದಿಲ್ಲ. ಹಾಗಾಗಿ, ಮನೆಯಿಂದ ಹೊರಗೆ ಕಾಲಿಟ್ಟರೂ ಸೋಂಕು ತಗುಲುತ್ತಿದೆ. ಇದು ಜನರ ಮೇಲೆ ಭಾರಿ ಪರಿಣಾಮ ಬೀರುತ್ತಿದ್ದು, ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದೆ.

Related post

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…

Leave a Reply

Your email address will not be published. Required fields are marked *