ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ ಪ್ರಕರಣ: ಮದುವೆಗೆ ಇನ್ನೆರಡು ತಿಂಗಳು ಬಾಕಿಯಿದ್ದ ಕೊಡಗಿನ ಯೋಧ ಹುತಾತ್ಮ

soldier-divin
Spread the love

ನ್ಯೂಸ್ ಆ್ಯರೋ: ಒಂದು ದಿನದ ಹಿಂದೆಯಷ್ಟೇ ಹುತಾತ್ಮರಾದ ಕೊಡಗಿನ ವೀರಯೋಧ ದಿವಿನ್ ಅವರು 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು. ಇತ್ತೀಚೆಗೆ ದಿವಿನ್ ಅವರಿಗೆ ನಿಶ್ಚಿತಾರ್ಥ ಕೂಡ ನೆರವೇರಿತ್ತು. 2025ರ ಫೆಬ್ರವರಿಯಲ್ಲಿ ದಿವಿನ್ ವಿವಾಹ ನಿಶ್ಚಯವಾಗಿತ್ತು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ಕುಟುಂಬಸ್ಥರು ಲಗ್ನ ಪತ್ರಿಕೆಯನ್ನೂ ಪ್ರಿಂಟ್​ ಮಾಡಿಸಿದ್ದರಂತೆ. ಆದ್ರೆ ಸೇನಾ ವಾಹನ ಪ್ರಪಾತಕ್ಕೆ ಉರುಳಿ ದುರಂತ ಸಂಭವಿಸಿದೆ. ಕೂಡಲೇ ದಿವಿನ್‌ರನ್ನ ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗ್ತಿತ್ತು. ಎರಡು ದಿನದ ಹಿಂದೆಯಷ್ಟೇ ದಿವಿನ್ ತಾಯಿ ಜಯಾ ಅವರು ಶ್ರೀನಗರದ ಸೇನಾ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಅಮ್ಮನ ಕರೆಗೆ ದಿವಿನ್ ಕಣ್ಣು ಬಿಡುವ ಪ್ರಯತ್ನ ಮಾಡಿದ್ದರಂತೆ. ಆದರೆ ಶ್ವಾಸಕೋಶಕ್ಕೆ ತೀವ್ರ ಹಾನಿಯಾಗಿದ್ದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ. ಹೀಗಾಗಿ ಮದುವೆ ಆಸೆ, ಜೀವನದ ನೂರಾರು ಕನಸು ನುಚ್ಚುನೂರಾಗಿದೆ.

ಗ್ರಾಮದಲ್ಲಿ ಒಳ್ಳೆಯ ಹುಡುಗನಾಗಿದ್ದ ದಿವಿನ್‌ ಇತ್ತಿಚೆಗೆ ತಂದೆಯನ್ನ ಕಳೆದುಕೊಂಡಿದ್ದರು. ತಾಯಿ ಮಗ ಮಾತ್ರ ನೂತನವಾಗಿ ನಿರ್ಮಾಣಗೊಂಡ ಮನೆಯಲ್ಲಿ ವಾಸ ಮಾಡುತ್ತಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಇನ್ನೂ ಯೋಧ ದಿವಿನ್ ಪಾರ್ಥಿವ ಶರೀರ ಜಮ್ಮುವಿನಿಂದ ಫ್ಲೈಟ್‌ನಲ್ಲಿ ನೇರವಾಗಿ ಬೆಂಗಳೂರಿಗೆ ಬಂದು ನಂತರ ಹುಟ್ಟೂರು ಆಲೂರು ಸಿದ್ದಾಪುರಕ್ಕೆ ರವಾನಿಸಲಾಗುತ್ತದೆ. ಮಂಗಳವಾರ ರಾತ್ರಿ ಅಥವಾ ಬುಧವಾರ ಬೆಳಗ್ಗೆ ಪಾರ್ಥೀವ ಶರೀರವನ್ನು ಹುಟ್ಟೂರಿಗೆ ತರುವ ನಿರೀಕ್ಷೆಯಿದೆ. ಈಗಾಗಲೇ ಜಿಲ್ಲಾಡಳಿತ ಹಾಗೂ ಶಾಸಕ ಮಂಥರ್ ಗೌಡ ಹುಟ್ಟೂರಿನ ಶಾಲಾ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದಾರೆ. ಅಂತ್ಯಕ್ರಿಯೆ ನೆರವೇರಿಸಲು ಅಗತ್ಯ ಸಿದ್ಧತೆ ಮತ್ತು ಸ್ಥಳ ಪರಿಶೀಲನೆ ನಡೆಸಲಾಗಿದೆ.

Leave a Comment

Leave a Reply

Your email address will not be published. Required fields are marked *

error: Content is protected !!