ಇದಪ್ಪಾ.. ರೋಲ್ಸ್ ರಾಯ್ ಕಾರಿನ ಪವರ್ – ಟ್ಯಾಂಕರ್ ಗೆ ಗುದ್ದಿದ್ರೂ ಕಾರ್ ನಲ್ಲಿ ಇದ್ದವರು ಸೇಫ್..! ಟ್ಯಾಂಕರ್ ನಲ್ಲಿದ್ದ ಇಬ್ಬರ ಸಾವು..!!

ಇದಪ್ಪಾ.. ರೋಲ್ಸ್ ರಾಯ್ ಕಾರಿನ ಪವರ್ – ಟ್ಯಾಂಕರ್ ಗೆ ಗುದ್ದಿದ್ರೂ ಕಾರ್ ನಲ್ಲಿ ಇದ್ದವರು ಸೇಫ್..! ಟ್ಯಾಂಕರ್ ನಲ್ಲಿದ್ದ ಇಬ್ಬರ ಸಾವು..!!

ನ್ಯೂಸ್ ಆ್ಯರೋ‌ : ದಿಲ್ಲಿ – ಮುಂಬಯಿ – ಬರೋಡಾ ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಂಧನ ಟ್ಯಾಂಕರ್ ಮತ್ತು ರೋಲ್ಸ್ ರಾಯ್ ಕಾರು ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಟ್ಯಾಂಕರ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮೂವರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಏನಿದು ಘಟನೆ?

ಹರ್ಯಾಣದ ನುಹ್ ಬಳಿ ಈ ಅಪಘಾತ ಸಂಭವಿಸಿದೆ. ಟ್ಯಾಂಕರ್ ರಾಂಗ್ ಸೈಡ್ ನಿಂದ ವೇಗವಾಗಿ ಬರುತ್ತಿತ್ತು. ರೋಲ್ಸ್ ರಾಯ್ಸ್ ಕಾರು ಕೂಡ ವೇಗದಲ್ಲಿತ್ತು. ಅನಿರೀಕ್ಷಿತವಾಗಿ ಟ್ಯಾಂಕರ್ ಎದುರಾಗಿದ್ದರಿಂದ ಕಾರು ಚಾಲಕನಿಗೆ ಗೊಂದಲ ಮೂಡಿ ಡಿಕ್ಕಿ ಹೊಡೆಯಿತು.

ಡಿಕ್ಕಿಯಾದ ಬೆನ್ನಲ್ಲೇ ಕಾರಿಗೆ ಬೆಂಕಿ ಹತ್ತಿಕೊಂಡಿತ್ತು. ತಕ್ಷಣ ಕಾರಿನಲ್ಲಿದ್ದವರ ರಕ್ಷಣೆಗೆ ಆಗಮಿಸಿದ ಹಲವರು ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿದರು. ಇತ್ತ ಟ್ಯಾಂಕರ್ ನಲ್ಲಿದ್ದ ಡ್ರೈವರ್ ರಾಂಪ್ರೀತ್ ಮತ್ತು ಸಹಾಯಕ ಕುಲ್ದೀಪ್ ಸ್ಥಳದಲ್ಲೇ ಮೃತಪಟ್ಟರು.

ಐಷರಾಮಿ ಕಾರು ರೋಲ್ಸ್ ರಾಯ್ ಅತ್ಯಂತ ಸುರಕ್ಷಿತ ಫೀಚರ್ಸ್ ಹೊಂದಿದೆ. ಇದರಲ್ಲಿ 7 ಏರ್ ಬ್ಯಾಗ್ ಇದೆ. 5 ಸ್ಟಾರ್ ಕ್ರ್ಯಾಶ್ ರೇಟಿಂಗ್ ಹೊಂದಿದೆ. ಹೀಗಾಗಿ ಇದು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸಾಮಾನ್ಯವಾಗಿ ಟ್ಯಾಂಕರ್ ಡಿಕ್ಕಿಯಾದರೆ ಇತರ ಕಾರುಗಳು ಪುಡಿ ಪುಡಿಯಾಗುವ ಸಾಧ್ಯತೆ ಇರುತ್ತದೆ. ಆದರೆ ರೋಲ್ಸ್ ರಾಯ್ ಕಾರಿಗೆ ಅಷ್ಟು ಬೇಗ ಏನೂ ಸಂಭವಿಸುವುದಿಲ್ಲ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *