ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಆಟೋ, ಬೈಕ್ ಸಂಚಾರ ಸಂಪೂರ್ಣ ನಿಷೇಧ – ಯಾವಾಗಿನಿಂದ ಹೊಸ ನಿಯಮ?

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಆಟೋ, ಬೈಕ್ ಸಂಚಾರ ಸಂಪೂರ್ಣ ನಿಷೇಧ – ಯಾವಾಗಿನಿಂದ ಹೊಸ ನಿಯಮ?

ನ್ಯೂಸ್ ಆ್ಯರೋ‌ : ಒಂದಿಲ್ಲೊಂದು ಕಾರಣಕ್ಕೆ ಸದಾ ಸುದ್ದಿಯಲ್ಲಿರುವ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಕುರಿತು ಇನ್ನೊಂದು ಸಂಗತಿ ಹೊರಬಂದಿದೆ. ಆಗಸ್ಟ್ 1ರಿಂದ ಎಕ್ಸ್ ಪ್ರೆಸ್ ವೇಯಲ್ಲಿ ದ್ವಿಚಕ್ರ ವಾಹನ, ಆಟೋ, ಟ್ರ್ಯಾಕ್ಟರ್ ಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗುತ್ತದೆ.

ಹೊಸ ಸುತ್ತೋಲೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರು -‌ ಮೈಸೂರು ದಶಪಥ ಹೆದ್ದಾರಿ ಸಂಚಾರದ ಬಗ್ಗೆ ಮತ್ತೊಮ್ಮೆ ಸುತ್ತೋಲೆ ಹೊರಡಿಸಿದೆ. ಈ ಹೆದ್ದಾರಿಯಲ್ಲಿ ಹಿಂದೆಯೂ ಬೈಕ್, ಆಟೋಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಆದರೆ ಕಡ್ಡಾಯವಾಗಿ ಜಾರಿಗೆ ಬಂದಿರಲಿಲ್ಲ.

ಈ ಬಾರಿ ಮತ್ತೊಮ್ಮೆ ಹೆದ್ದಾರಿಯಲ್ಲಿ ಆಟೋ, ಬೈಕ್ ಓಡಿಸದಂತೆ, ಅದಕ್ಕಾಗಿ ಸರ್ವಿಸ್ ರಸ್ತೆಗಳನ್ನು ಬಳಸುವಂತೆ ಸೂಚಿಸಲಾಗಿದೆ. ಈ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಅದಿಕಾರಿಗಳು ತಿಳಿಸಿದ್ದಾರೆ.

ಎಕ್ಸ್ ಪ್ರೆಸ್ ವೇಯಲ್ಲಿ 14 ಪ್ರವೇಶದ್ವಾರಗಳು ಮತ್ತು 14 ನಿರ್ಗಮನ ದ್ವಾರಗಳಿವೆ. ಈ ಮಾರ್ಗದಲ್ಲಿ ಆಟೋ, ಬೈಕ್ ಗಳ ಪ್ರವೇಶಾತಿ ನಿರ್ಬಂಧಿಸುವುದು ನಿಜಕ್ಕೂ ಸವಾಲು. ಹೀಗಾಗಿ ಹೊಸ ಸುತ್ತೋಲೆ ಹೊರಡಿಸಲಾಗಿದೆ.

ಕಾರಣವೇನು?

ಬೈಕ್, ಆಟೋ, ಟ್ರ್ಯಾಕ್ಟರ್ ಗಳು 80ರಿಂದ 100 ಕಿ.ಮೀ.ಗಿಂರ ಕಡಿಮೆ ವೇಗದಲ್ಲಿ ಸಂಚರಿಸುತ್ತವೆ. ಈ ವೇಳೆ ವೇಗವಾಗಿ ಸಂಚರಿಸುವ ವಾಹನಗಳಿಂದ ಅಪಾಯ ಎದುರಾಗಬಹುದು. ಹೀಗಾಗಿ ಎಕ್ಸ್ ಪ್ರೆಸ್ ವೇಗಿಂತ ಸರ್ವಿಸ್ ರಸ್ತೆ ಬಳಸುವಂತೆ ಸೂಚಿಸಲಾಗಿದೆ. ಒಂದು ವೇಳೆ ಇದರಲ್ಲಿ ಸಂಚರಿಸಿದರೆ ದಂಡ ಬೀಳುವ ಸಾಧ್ಯತೆ ಇದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *