ಫೋನ್ ಹಾಳಾಗಿದೆ ಅಂತ ಸರ್ವೀಸ್ ಸೆಂಟರ್ ಗೆ ಕೊಡೋ ಮುನ್ನ ಈ ವಿಷಯಗಳನ್ನು ಗಮನಿಸಿ – ಯಾಮಾರುವ ಮುನ್ನ ಎಚ್ಚರವಿರಲಿ..!!

ಫೋನ್ ಹಾಳಾಗಿದೆ ಅಂತ ಸರ್ವೀಸ್ ಸೆಂಟರ್ ಗೆ ಕೊಡೋ ಮುನ್ನ ಈ ವಿಷಯಗಳನ್ನು ಗಮನಿಸಿ – ಯಾಮಾರುವ ಮುನ್ನ ಎಚ್ಚರವಿರಲಿ..!!

ನ್ಯೂಸ್ ಆ್ಯರೋ : ಮೊಬೈಲ್ ಯಾವುದೇ ಕಂಪೆನಿಯದ್ದಾಗಿರಲಿ. ಆಗಾಗ ಹಾಳಾಗುತ್ತಲೇ ಇರುತ್ತದೆ‌. ಹಾಗಂತ ಮೊಬೈಲ್ ಬಳಸದೆ ಇರೋಕೆ ಆಗುತ್ತಾ…? ನಾವು ಸರ್ವೀಸ್ ಸೆಂಟರ್ ಗೆ ಕೊಡ್ತೇವೆ.ಇಂದಿನ ದಿನಗಳಲ್ಲಿ ಸ್ಮಾರ್ಟ್​ಫೋನ್ ಬಳಕೆ ಅನಿವಾರ್ಯವಾಗಿದೆ. ಇದು ನಮ್ಮ ಅಗತ್ಯ ವಸ್ತುವಾಗಿ ಮಾರ್ಪಟ್ಟಿದೆ. ಸ್ಮಾರ್ಟ್​ಫೋನ್ ಕೇವಲ ಕರೆಗಳನ್ನು ಮಾಡಲು ಬಳಸಲಾಗುವ ಗ್ಯಾಜೆಟ್ ಮಾತ್ರವಲ್ಲದೆ, ಬ್ಯಾಂಕಿಂಗ್‌ನಿಂದ ಪ್ರಾರಂಭಿಸಿ ಅನೇಕ ಕಾರ್ಯಗಳಿಗೆ ಬಳಸಲಾಗುತ್ತದೆ.

ವೈಯಕ್ತಿಕ ಫೋಟೋಗಳು, ಬ್ಯಾಂಕಿಂಗ್ ವಿವರಗಳು ಮತ್ತು ಇತರ ಹಲವು ವೈಯಕ್ತಿಕ ಡೇಟಾವು ಸ್ಮಾರ್ಟ್​ಫೋನ್‌ನಲ್ಲಿ ಇರುತ್ತದೆ. ಆದರೆ, ಈ ಫೋನ್ ಒಂದಲ್ಲ ಒಂದು ದಿನ ಹಾಳಾಗುವುದು ಖಂಡಿತ. ಆಗ ಫೋನ್ ಅನ್ನು ಸರ್ವಿಸ್ ಸೆಂಟರ್​ನಲ್ಲಿ ನೀಡಬೇಕಾಗುತ್ತದೆ. ಹೀಗೆ ಫೋನ್ ರಿಪೇರಿಗೆ ನೀಡುವಾಗ ಕೆಲವೊಂದು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎನ್ನುತ್ತಾರೆ ತಜ್ಞರು. ಆದರೆ ಅದಕ್ಕೂ ಮುನ್ನ ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕಾಗುತ್ತದೆ.

  1. ನಿಮ್ಮ ಮೊಬೈಲ್‌ನಲ್ಲಿ ಯಾವುದೇ ಬ್ಯಾಂಕಿಂಗ್ ಅಪ್ಲಿಕೇಶನ್‌ಗಳನ್ನು ಹೊಂದಿದ್ದರೆ, ನೀವು ಮೊದಲು ಅವುಗಳನ್ನು ಅನ್‌ಇನ್‌ಸ್ಟಾಲ್ ಮಾಡಬೇಕು. ಅಪ್ಲಿಕೇಶನ್‌ಗಳನ್ನು ಡಿಲೀಟ್ ಮಾಡುವ ಮೊದಲು ಪಾಸ್‌ವರ್ಡ್ ಮತ್ತು ಯೂಸರ್ ನೇಮ್ ಅನ್ನು ಬರೆದಿಟ್ಟುಕೊಳ್ಳುವುದು ಉತ್ತಮ.
  2. ಸ್ಮಾರ್ಟ್‌ಫೋನ್‌ನ ನೋಟ್ ಪ್ಯಾಡ್‌ನಲ್ಲಿ ಪಾಸ್‌ವರ್ಡ್ ಮತ್ತು ವೈಯಕ್ತಿಕ ವಿವರಗಳನ್ನು ಬರೆಯುವುದು ಸಾಮಾನ್ಯ ಸಂಗತಿಯಾಗಿದೆ. ಆದರೆ ಫೋನ್ ಅನ್ನು ಯಾರಿಗಾದರೂ ನೀಡುವಾಗ ನೋಟ್ ಪ್ಯಾಡ್​ನಲ್ಲಿ ಇರುವುದನ್ನು ಅಳಿಸಲು ಮರೆಯಬೇಡಿ.
  3. ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಬಳಸದವರೇ ಇಲ್ಲ. ನಿಮ್ಮ ಸಾಮಾಜಿಕ ಮಾಧ್ಯಮ ಖಾತೆಯನ್ನು ದುರುಪಯೋಗಪಡಿಸಿಕೊಳ್ಳದಿರಲು, ಎಲ್ಲಾ ಖಾತೆಗಳಿಂದ ಲಾಗ್ ಔಟ್ ಮಾಡಿದ ನಂತರವೇ ನೀವು ಫೋನ್ ಅನ್ನು ಸರ್ವಿಸ್​ಗೆ ನೀಡಬೇಕು.
  4. ಜಿಮೇಲ್ ಖಾತೆಯೂ ಲಾಗ್ ಔಟ್ ಆದ ನಂತರವೇ ಫೋನ್ ಸರ್ವಿಸ್​ ಕೇಂದ್ರಕ್ಕೆ ನೀಡಬೇಕು. ಜಿಮೇಲ್ ಖಾತೆಗೆ ಸಂಬಂಧಿಸಿದ ಎಲ್ಲಾ ವಿವರಗಳಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ.
  5. ಫೋನ್ ಗ್ಯಾಲರಿಯಲ್ಲಿ ಯಾವುದೇ ವೈಯಕ್ತಿಕ ಫೋಟೋಗಳಿದ್ದರೆ, ಅವುಗಳನ್ನು ಡಿಲೀಟ್ ಮಾಡಿ. ಫೋಟೋಗಳು ಬೇಕು ಎಂದಿದ್ದರೆ, ಅವುಗಳನ್ನು ಮೆಮೊರಿ ಕಾರ್ಡ್ ಅಥವಾ ಪೆನ್ ಡ್ರೈವ್‌ಗೆ ವರ್ಗಾಯಿಸಿ.

ಈ ಮೇಲಿನ ಅಂಶಗಳನ್ನು ನೀವು ಮಾಡಿದರೆ ಮೊಬೈಲ್ ಸರ್ವೀಸ್ ಗೆ ಕೊಟ್ಟರೂ ದತ್ತಾಂಶಗಳು ಸೇಫ್ ಆಗಿರುತ್ತದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *