ಮಹೀಂದ್ರ ಥಾರ್ ಎದುರಿಸಲು ಸಜ್ಜಾಗಿದೆ ಮಾರುತಿ ಜಿಮ್ನಿ. – ಟೆಕ್ ಸಾಮ್ರಾಜ್ಯದ ಸೆನ್ಸೆಷನಲ್ ಸುದ್ದಿಯಿದು..!!

ಮಹೀಂದ್ರ ಥಾರ್ ಎದುರಿಸಲು ಸಜ್ಜಾಗಿದೆ ಮಾರುತಿ ಜಿಮ್ನಿ. – ಟೆಕ್ ಸಾಮ್ರಾಜ್ಯದ ಸೆನ್ಸೆಷನಲ್ ಸುದ್ದಿಯಿದು..!!

ನ್ಯೂಸ್ ಆ್ಯರೋ : ಅಂತರಾಷ್ಟೀಯ ವಾಹನ ಮಾರುಕಟ್ಟೆಯಲ್ಲಿ ಮಾರುತಿ‌ ಜಿಮ್ನಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗುತ್ತಿದ್ದು ಹೊಸ ದಾಖಲೆ ನಿರ್ಮಿಸುವ ಎಲ್ಲಾ ಸಾಧ್ಯತೆಗಳು ಕಂಡು ಬರುತ್ತಿದೆ. ಮಾರಾಟ ವಿಚಾರದಲ್ಲಿ ರಾಕೆಟ್ ವೇಗ ಪಡೆದಿರುವ ಮಾರುತಿ ಜಿಮ್ನಿ 2018ರಲ್ಲಿ ಪರಿಚಯವಾಗಿತ್ತು. ಮಾರುತಿ ಸುಜುಕಿ ಜಿಮ್ನಿಯ ವಿಸ್ತೃತ ವೀಲ್ ಬೇಸ್ ಆವೃತ್ತಿಯು ಭಾರತದಲ್ಲಿ ದೀರ್ಘಕಾಲದ ಪರೀಕ್ಷೆಯಲ್ಲಿದೆ. ಸದ್ಯ ಈ ಹೊಸ ಮಾದರಿಯು ಇದೇ ವರ್ಷದ ಜನವರಿಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶನಗೊಳ್ಳುವ ಸಾಧ್ಯತೆ ಇದೆ.

ನೂತನ ತಲೆಮಾರಿನ ಈ ವಾಹನದ ಬೆಲೆ ಹಾಗೂ ಬಿಡುಗಡೆ ದಿನಾಂಕ ಇನ್ನೂ ಪ್ರಕಟವಾಗಿಲ್ಲವಾದರೂ, ಮಾರುತಿ ಸುಜುಕಿ ಜಿಮ್ನಿ ಆಫ್ ರೋಡ್ ಎಸ್ ಯೂವಿ ಮಾದರಿಯಾಗಿದೆ ಎಂದು ತಿಳಿದು ಬಂದಿದೆ. ಇದು ಭಾರತೀಯ ಆಟೋ ಮೊಬೈಲ್ ಮಾರುಕಟ್ಟೆಯಲ್ಲಿ ಇತರ ಕಾಂಪ್ಯಾಕ್ಟ್ ಎಸ್ ಯುವಿಗಳಿಗಿಂತ ಸ್ವಲ್ಪ ಕಡಿಮೆ ಪ್ರಾಯೋಗಿಕ ಮತ್ತು ಹೆಚ್ಚು ಉದ್ದೇಶಿತವಾಗಿದೆ. ಈ ವಾಹನವು 2023ರ ಆಗಸ್ಟ್ ವೇಳೆಗೆ ಜನ ಬಳಕೆಗೆ ಕೈಗೆಟುಕುವ ಸಾಧ್ಯತೆಯಿದೆ.

ಐದು ಬಾಗಿಲುಗಳಿರುವ (ಡೋರ್) ಮಾರುತಿ ಜಿಮ್ನಿ ಸುಮಾರು 5 ರಿಂದ 6 ಸಾವಿರ ಯುನಿಟ್ ಉತ್ಪಾದಿಸುವ ಗುರಿ ಹೊಂದಿದ್ದು, ಮಾರುತಿ ಸುಜುಕಿ ಜಿಪ್ಸಿ ಎಂಬ ಹೆಸರಿನೊಂದಿಗೆ ಮಾರುಕಟ್ಟೆಗೆ ಇಳಿಯಲಿದೆ ಎನ್ನಲಾಗಿದೆ.

1985ರಲ್ಲಿ ದೇಶದ ಅಟೋ ಮೊಬೈಲ್ ಮಾರುಕಟ್ಟೆಗೆ ಲಗ್ಗೆ ಇಟ್ಟ ಮಾರುತಿ ಸುಜುಕಿ ಬರೋಬ್ಬರಿ 35 ವರ್ಷಗಳ ಕಾಲ ಭಾರತೀಯ ರಸ್ತೆಗಳ ರಾಯಭಾರಿಯಂತೆ ರಾರಾಜಿಸಿತ್ತು. ಆದರೆ ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಇದರ ಉತ್ಪಾದನೆ ಸ್ಥಗಿತಗೊಳಿಸಲಾಗಿತ್ತು.

ಸದ್ಯ ಇದೀಗ ಮಾರುಕಟ್ಟೆಗೆ ಕಾಲಿಡಲಿರುವ ಮಾರುತಿ ಜಿಮ್ನಿ 3 ಡೋರಿನ ಆವೃತ್ತಿಗಿಂತ 300 ಎಂಎಂ ಉದ್ದವಾಗಿರಲಿದೆ. ಜೊತೆಗೆ ಇದರ ವಿ಼ಲ್ ಬೇಸ್ ಕೂಡ 300 ಎಂಎಂ ವಿಸ್ತರಿಸಲಿದೆ. ಈ ಆಫ್-ರೋಡ್ ಎಸ್‍ಯುವಿ 3850 ಎಂಎಂ ಉದ್ದ, 1645 ಎಂಎಂ ಅಗಲ ಮತ್ತು 1730 ಎಂಎಂ ಎತ್ತರವನ್ನು 2550mm ವ್ಹೀಲ್‌ಬೇಸ್‌ ಹೊಂದಿದೆ ಎಂಬ ಮಾಹಿತಿ ಇದೆ.

ಒಟ್ಟಾರೆಯಾಗಿ ಈ ನೂತನ ಮಾರುತಿ ಜಿಮ್ನಿ ಲ್ಯಾಡರ್-ಫ್ರೇಮ್ ಚಾಸಿಸ್ ಅನ್ನು ಒಳಗೊಂಡಿದೆ. ಇದರಲ್ಲಿ 3 ಲಿಂಕ್ ಆಕ್ಸಲ್ ಸಸ್ಪೆಂಷನ್ ಇದ್ದು, ಡೋರುಗಳ ಎಸ್‍ಯುವಿಯು ಇನ್ನು ನಾಲ್ಕು ಮೀಟರ್ ಉದ್ದದ ಮಾದರಿಯಾಗಿದೆ. ಭಾರತದಲ್ಲಿ ಇದು ತೆರಿಗೆ ಪ್ರಯೋಜನಗಳನ್ನು ಪಡೆಯುತ್ತದೆ. 2,550 ಎಂಎಂ ವ್ಹೀಲ್ ಬೇಸ್ ಉದ್ದವು ಕಾಂಪ್ಯಾಕ್ಟ್ ಎಸ್‌ಯುವಿಗಳಿಗಿಂತ ಹೆಚ್ಚಿನದಾಗಿರುತ್ತದೆ. ಈ ಆಫ್-ರೋಡ್ ಎಸ್‍ಯುವಿಯು ಸುಮಾರು 2,500 ಎಂಎಂ ವ್ಹೀಲ್‌ಬೇಸ್ ಹೊಂದಿದೆ ಆದರೆ ಮಧ್ಯಮ ಗಾತ್ರದ ಎಸ್‍ಯುವಿಗಿಂತ ಚಿಕ್ಕದಾಗಿರುತ್ತದೆ ಎಂದು ತಿಳಿದು ಬಂದಿದೆ.

Related post

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ – ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈ‌ ದಿನಗಳಲ್ಲಿ ಮದ್ಯ ಮಾರಾಟ ಇಲ್ಲ..!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ –…

ನ್ಯೂಸ್ ಆ್ಯರೋ ‌: ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ…

Leave a Reply

Your email address will not be published. Required fields are marked *