ಕನ್ನಡಿಗನಿಗೆ ಬಿಸಿಸಿಐ ಬಿಗ್​ ಶಾಕ್​​; ಮೆಗಾ ಟೂರ್ನಿಯಿಂದ ಕೆ.ಎಲ್​ ರಾಹುಲ್​ ಔಟ್

Kl rahul
Spread the love

ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಆರಂಭಕ್ಕೆ ಇನ್ನೇನು ಒಂದೂವರೆ ತಿಂಗಳು ಮಾತ್ರ ಬಾಕಿ ಇದೆ. ಈ ಮೆಗಾ ಟೂರ್ನಿಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಶುರುವಾಗಿವೆ. ಇನ್ನೂ 3 ದಿನದಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಎಲ್ಲಾ ತಂಡಗಳು ಪ್ರಕಟಿಸಬೇಕು ಎಂದು ಐಸಿಸಿ ಗಡುವು ನೀಡಿದೆ.

ಇನ್ನು, ಬಿಸಿಸಿಐ ಕೂಡ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟ ಮಾಡಬೇಕಿದೆ. ಇದರ ಭಾಗವಾಗಿ ಶನಿವಾರ ಬಿಸಿಸಿಐ ಸೆಲೆಕ್ಷನ್​ ಕಮಿಟಿ ಸಭೆ ನಡೆಸಲಿದೆ. ಟೀಮ್​ ಇಂಡಿಯಾದಲ್ಲಿ ಸ್ಥಾನಕ್ಕಾಗಿ ಸಾಕಷ್ಟು ಆಟಗಾರರ ಮಧ್ಯೆ ಪೈಪೋಟಿ ನಡೆಯುತ್ತಿದೆ. ಮುಖ್ಯ ಕೋಚ್​ ಗಂಭೀರ್​​ ಕೃಪೆ ಯಾರ ಮೇಲಿದೆ? ಅನ್ನೋ ಚರ್ಚೆ ಶುರುವಾಗಿದೆ.

ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ಪ್ಲೇಯಿಂಗ್​​ ಎಲೆವೆನ್ ಆಯ್ಕೆ ಮಾಡೋದು ಅಷ್ಟು ಸುಲಭವಲ್ಲ. ಇದಕ್ಕಾಗಿ ಬಿಸಿಸಿಐ ಸೆಲೆಕ್ಷನ್​ ಕಮಿಟಿ ಮತ್ತು ಗೌತಮ್ ಗಂಭೀರ್ ಮಹತ್ವದ ನಿರ್ಧಾರ ಕೈಗೊಳ್ಳಬೇಕಿದೆ.

ಏಕದಿನ ವಿಶ್ವಕಪ್‌ ಫೈನಲ್‌ ನಂತರ ಟೀಮ್​ ಇಂಡಿಯಾ ಕೇವಲ 6 ಏಕದಿನ ಪಂದ್ಯಗಳನ್ನು ಆಡಿದೆ. . ಶ್ರೀಲಂಕಾ ವಿರುದ್ಧ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡದ ಕಾರಣ ಇವರನ್ನು ಸರಣಿ ಮಧ್ಯದಲ್ಲೇ ಕೈಬಿಡಲಾಗಿತ್ತು. 2023ರ ನವೆಂಬರ್‌ 19ರಂದು ಆಸ್ಪ್ರೇಲಿಯಾ ವಿರುದ್ಧದ ಪಂದ್ಯದಲ್ಲೂ ಕೆ.ಎಲ್​ ರಾಹುಲ್​ ಉತ್ತಮ ಪ್ರದರ್ಶನ ನೀಡಿರಲಿಲ್ಲ.

ಇತ್ತ ಯಶಸ್ವಿ ಜೈಸ್ವಾಲ್‌ ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ಅತ್ಯುತ್ತಮ ಅವಕಾಶ ಹೊಂದಿದ್ದಾರೆ. ಇವರು ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಒಂದು ವೇಳೆ ಪಂತ್‌ ಮೊದಲ ವಿಕೆಟ್‌ ಕೀಪರ್‌ ಆಯ್ಕೆಯಾದರೆ, ರಾಹುಲ್‌ ಬೆಂಚ್​ ಕಾಯಲೇಬೇಕು.

Leave a Comment

Leave a Reply

Your email address will not be published. Required fields are marked *

error: Content is protected !!