ಕಾಫಿ ಡೇ ಸಂಸ್ಥಾಪಕ ದಿ.ಸಿದ್ಧಾರ್ಥ್ ಅವರ ಜಮೀನು 700 ಕೋಟಿಗೆ ಖರೀದಿ ಪ್ರಸ್ತಾಪ – ಇದು ಅರಣ್ಯ ಇಲಾಖೆಯ ಹುನ್ನಾರ ಎಂದ ಪರಿಸರವಾದಿಗಳು : ಯಾಕ್ ಗೊತ್ತಾ…!?

ಕಾಫಿ ಡೇ ಸಂಸ್ಥಾಪಕ ದಿ.ಸಿದ್ಧಾರ್ಥ್ ಅವರ ಜಮೀನು 700 ಕೋಟಿಗೆ ಖರೀದಿ ಪ್ರಸ್ತಾಪ – ಇದು ಅರಣ್ಯ ಇಲಾಖೆಯ ಹುನ್ನಾರ ಎಂದ ಪರಿಸರವಾದಿಗಳು : ಯಾಕ್ ಗೊತ್ತಾ…!?

ನ್ಯೂಸ್ ಆ್ಯರೋ : ವರ್ಷಗಳ ಹಿಂದೆ ಉದ್ಯಮದಿಂದ ಆದ‌ ನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡ, ಔದ್ಯೋಗಿಕ ಕ್ಷೇತ್ರದ ದಿಗ್ಗಜ ದಿ.ಸಿದ್ಧಾರ್ಥ ಅವರಿಗೆ ಸೇರಿದ ಜಮೀನು ಬರೋಬ್ಬರಿ 708 ಕೋಟಿಗೆ ಖರೀದಿ ಮಾಡಲು ಅರಣ್ಯ ಇಲಾಖೆ ಪ್ರಸ್ತಾಪ ಮುಂದಿಟ್ಟಿದೆ ಎಂಬ ಮಾತುಗಳು ಕೇಳಿಬಂದಿದೆ.

ವಿ.ಜಿ.ಸಿದ್ದಾರ್ಥ ಅವರಿಗೆ ಸೇರಿದ, ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿರುವ 4,430 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲು ಕರ್ನಾಟಕ ಅರಣ್ಯ ಇಲಾಖೆ ಪ್ರಸ್ತಾವ ಸಿದ್ಧಪಡಿಸಿದ್ದು, ಸದ್ಯದಲ್ಲೇ ಪ್ರಕ್ರಿಯೇ ಆರಂಭವಾಗಲಿದೆ ಎನ್ನಲಾಗಿದೆ.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಕೆಲ ಪರಿಸರ ವಾದಿಗಳು, ‘ರಾಜಕೀಯ ಪ್ರಭಾವಕ್ಕೆ ಒಳಗಾಗಿ ಸಿದ್ಧಾರ್ಥ ಕುಟುಂಬವನ್ನು ಸಾಲದಿಂದ ಪಾರು ಮಾಡಲು ಅರಣ್ಯ ಇಲಾಖೆ ಈ ತಂತ್ರ ಮಾಡಿದೆ’ ಎಂದು ಆರೋಪಿಸಿದ್ದಾರೆ.

ಸಿದ್ಧಾರ್ಥ ಅವರಿಗೆ ಸೇರಿದ ಜಮೀನಿನ ಪ್ರತಿ ಎಕರೆಗೆ ₹16 ಲಕ್ಷದಂತೆ ಭೂಸ್ವಾಧೀನದ ಒಟ್ಟು ಮೊತ್ತ ₹ 708 ಕೋಟಿಯಾಗಲಿದೆ ಎಂದು ಅಂದಾಜಿಸಲಾಗಿದೆ. ಸಿದ್ದಾರ್ಥ ಅವರ ಕುಟುಂಬವನ್ನು ಸಾಲದ ಸುಳಿಯಿಂದ ಪಾರು ಮಾಡುವ ಉದ್ದೇಶ ಈ ಪ್ರಸ್ತಾವದ ಹಿಂದಿದೆ ಎಂದು ಹೇಳಲಾಗಿದೆ.

ಈ ಬಗ್ಗೆ 2020ರ ಫೆ.14ರಂದು ಈ ಪ್ರಸ್ತಾವ ಸಿದ್ಧವಾಗಿದೆ. ಹುಲಿ ಸಂರಕ್ಷಿತ ಪ್ರದೇಶದ ಪಕ್ಕದ ತಣಿಗೆಬೈಲು ಹಾಗೂ ಮುತ್ತೋಡಿಯ ಜಮೀನು ಮಾರಾಟ ಪ್ರಕ್ರಿಯೆಯನ್ನು ಕಾಫಿ ಡೇ ಗ್ರೂಪ್‌ನವರು ಆಗಲೇ ಆರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *