ಅದಾನಿ ಗ್ರೂಪ್ ನ 34,900 ಕೋಟಿಯ ಪ್ರಾಜೆಕ್ಟ್ ಸ್ಥಗಿತ – ಹಿಂಡನ್ ಬರ್ಗ್ ವರದಿಯ ಬಳಿಕ ನೆಲಕಚ್ಚುತ್ತಿದೆ ಅದಾನಿ ಗ್ರೂಪ್

ಅದಾನಿ ಗ್ರೂಪ್ ನ 34,900 ಕೋಟಿಯ ಪ್ರಾಜೆಕ್ಟ್ ಸ್ಥಗಿತ – ಹಿಂಡನ್ ಬರ್ಗ್ ವರದಿಯ ಬಳಿಕ ನೆಲಕಚ್ಚುತ್ತಿದೆ ಅದಾನಿ ಗ್ರೂಪ್

ನ್ಯೂಸ್ ಆ್ಯರೋ : ಅದಾನಿ ಗ್ರೂಪ್ ನ ಮಾಲಕ ಉದ್ಯಮಿ ಗೌತಮ್‌ ಅದಾನಿ ಅವರು ಗುಜರಾತಿನ ಮುಂದ್ರಾದಲ್ಲಿ ತಮ್ಮ 34,900 ಕೋಟಿ ರೂ.ಗಳ ಪೆಟ್ರೋಕೆಮಿಕಲ್ಸ್‌ ಯೋಜನೆಯನ್ನು ಸ್ಥಗಿತಗೊಳಿಸಿದ್ದಾರೆ.

ಈ ಯೋಜನೆಗಾಗಿ ಹಣ ಸಂಗ್ರಹಿಸುವ ಯೋಜನೆಗೂ ಅದು ತಿಲಾಂಜಲಿ ನೀಡಿದೆ. ಈ ಯೋಜನೆಗಾಗಿ ಎಸ್​ಬಿಐ ನೇತೃತ್ವದ ಏಳರಿಂದ ಎಂಟು ಬ್ಯಾಂಕ್​ಗಳ ಸಮೂಹದಿಂದ 14,000 ಕೋಟಿ ರೂಪಾಯಿ ಸಂಗ್ರಹಿಸಲು ಮಾತುಕತೆ ನಡೆಸಲಾಗುತ್ತಿತ್ತು. ಅದಾನಿ ಸಮೂಹದಿಂದ ನಡೆದಿದೆ ಎನ್ನಲಾದ ವಂಚನೆಗಳ ಬಗ್ಗೆ ಹಿಂಡನ್​ಬರ್ಗ್ ಪ್ರಕಟಿಸಿದ ವರದಿಯಿಂದ ಆದ ಹಿನ್ನಡೆಯಿಂದ ಚೇತರಿಸಿಕೊಳ್ಳಲು ಕಂಪನಿ ಪ್ರಯತ್ನಿಸುತ್ತಿರುವುದರ ನಡುವೆಯೇ ವಾರ್ಷಿಕ ದಶಲಕ್ಷ ಟನ್ ಹಸಿರು ಪಿವಿಸಿ ಯೋಜನೆಯ ಎಲ್ಲ ಚಟುವಟಿಕೆಗಳನ್ನು ತಕ್ಷಣ ದಿಂದಲೇ ನಿಲ್ಲಿಸುವಂತೆ ಸಂಬಂಧಪಟ್ಟ ಎಲ್ಲ ವರ್ತಕರು ಮತ್ತು ಸರಬರಾಜು ದಾರರಿಗೆ ಅದಾನಿ ಗ್ರೂಪ್ ಇಮೇಲ್ ರವಾನಿಸಿದೆ.

ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್‌ ಹಿಂಡೆನ್‌ ಬರ್ಗ್‌ ವರದಿಯ ಬಳಿಕ ಅದಾನಿ ಸಮೂಹ ತನ್ನ ಹೂಡಿಕೆಗಳನ್ನು ಎಚ್ಚರದಿಂದ ಮಾಡುತ್ತಿದೆ.
2019ರಲ್ಲಿ ಅದಾನಿ ಅವರು ತವರು ರಾಜ್ಯ ಗುಜರಾತಿನಲ್ಲಿ ಪೆಟ್ರೊಕೆಮಿಕಲ್ಸ್‌ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದಾಗಿ ಘೋಷಿಸಿದ್ದರು. ಎರಡು ವರ್ಷಗಳ ಬಳಿಕ ಮುಂದ್ರಾ ಪೆಟ್ರೊಕೆಮ್‌ ಮತ್ತು ಅದಾನಿ ಪೆಟ್ರೊಕೆಮಿಕಲ್ಸ್‌ , ತೈಲ ಸಂಸ್ಕರಣೆ ಘಟಕಗಳನ್ನು ಸ್ಥಾಪಿಸಲು ಮುಂದಾಗಿದ್ದವು.

ಮಾರುಕಟ್ಟೆಯಲ್ಲಿನ ಅನಿಶ್ಚಿತತೆ ಹಿನ್ನೆಲೆಯಲ್ಲಿ ಅದಾನಿ ಗ್ರೂಪ್‌ ಇದೀಗ ತನ್ನ ಗ್ರೀನ್ ಪಿವಿಸಿ ಪ್ರಾಜೆಕ್ಟ್‌ ಅನ್ನು ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.‌ ಭಾರತದಲ್ಲಿ ಪಿವಿಸಿ ವಾರ್ಷಿಕ ಬೇಡಿಕೆ 3.50 ದಶಲಕ್ಷ ಟನ್ ಆಗಿರುವ ಹಿನ್ನೆಲೆಯಲ್ಲಿ ಮುಂದ್ರಾ ಪೆಟ್ರೋಕೆಮಿಕಲ್ ಯೋಜನೆಯನ್ನು ಅದಾನಿ ಗ್ರೂಪ್ ರೂಪಿಸಿತ್ತು. ಇತ್ತೀಚೆಗೆ ಡಿಬಿ ಪವರ್‌ ಅನ್ನು ಖರೀದಿಸುವ 7,017 ಕೋಟಿ ರೂ.ಗಳ ಡೀಲ್‌ ಅನ್ನೂ ಅದಾನಿ ಗ್ರೂಪ್‌ ಸ್ಥಗಿತಗೊಳಿಸಿತ್ತು.‌

Related post

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…
ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…

Leave a Reply

Your email address will not be published. Required fields are marked *