Infosis : 5.65 ಟ್ರಿಲಿಯನ್ ಮೌಲ್ಯದ ಇನ್ಫೋಸಿಸ್ ತ್ಯಜಿಸಿದ ರೋಹನ್ ಮೂರ್ತಿ – ಅಪ್ಪನ ಕಂಪನಿ ಮಗ ಬಿಟ್ಟು ಹೋಗಿದ್ದೇಕೆ?

Infosis : 5.65 ಟ್ರಿಲಿಯನ್ ಮೌಲ್ಯದ ಇನ್ಫೋಸಿಸ್ ತ್ಯಜಿಸಿದ ರೋಹನ್ ಮೂರ್ತಿ – ಅಪ್ಪನ ಕಂಪನಿ ಮಗ ಬಿಟ್ಟು ಹೋಗಿದ್ದೇಕೆ?

ನ್ಯೂಸ್ ಆ್ಯರೋ : ಯುವಕರು ವಾರದ 70 ಗಂಟೆಗಳ ಕೆಲಸ ಮಾಡಬೇಕೆಂಬ ಸಲಹೆ ನೀಡಿದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆ ಈಚೆಗೆ ಭಾರೀ ವೈರಲ್ ಆಗಿತ್ತು. ಅದಲ್ಲದೆ ಇವರ ಈ ಹೇಳಿಕೆ ಅಂತರ್ಜಾಲದಲ್ಲಿ ಈಗಲೂ ಟ್ರೆಂಡಿಂಗ್‌ನಲ್ಲಿದೆ.

ಇನ್ನೂ ಇನ್ಫೋಸಿಸ್ ಪ್ರಸ್ತುತ 5.65 ಟ್ರಿಲಿಯನ್‌ ರೂ.ಗಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ. ಆದರೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಮಗ ರೋಹನ್‌ ಮೂರ್ತಿ ಟ್ರಿಲಿಯನ್ ಮೌಲ್ಯದ ಇನ್ಫೋಸಿಸ್ ಬಿಟ್ಟು ಬೇರೆ ಉದ್ಯಮವನ್ನು ಶುರು ಮಾಡಿದ್ದು ಯಾಕೆ ಎಂಬ ಪ್ರಶ್ನೆಯಿದೆ. ಒಟ್ಟಿನಲ್ಲಿ ನಾರಾಯಣ ಮೂರ್ತಿ ಅವರ ಮಗ, 5.65 ಟ್ರಿಲಿಯನ್ ಕಂಪನಿಯನ್ನು ತೊರೆದು ಸ್ವಂತ ಸಂಸ್ಥೆಯನ್ನು ಪ್ರಾರಂಭಿಸಿರುವುದು ಅತ್ಯಂತ ರೋಚಕವಾಗಿದೆ.

ಇನ್ಫೋಸಿಸ್ ಪ್ರಸ್ತುತ ರೂ 5.65 ಟ್ರಿಲಿಯನ್‌ಗಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ. ತಮ್ಮ ತಂದೆ ನಾರಾಯಣ ಮೂರ್ತಿಯವರಿಂದ ಕಲಿತು, ರೋಹನ್ ಮೂರ್ತಿ ಕೂಡ ತಮ್ಮದೇ ಆದ ಉದ್ಯಮವನ್ನು ಆರಂಭಿಸಲು ನಿರ್ಧರಿಸಿದರು. ಇನ್ನೂ ಹೊಸ ಉದ್ಯಮವನ್ನು ಆರಂಭಿಸುವ ಮುನ್ನಾ ತನ್ನ ಉಪಾಧ್ಯಕ್ಷ ಸ್ಥಾನವನ್ನು ತೊರೆದಿದ್ದರು.

ಆದರೆ ನೆಲ್ಸನ್‌ಹಾಲ್ ವೆಂಡರ್ ಮೌಲ್ಯಮಾಪನ ಮತ್ತು ಅಸೆಸ್‌ಮೆಂಟ್ ಟೂಲ್ ಸೊರೊಕೊದ ಟಾಪ್-ಲೈನ್ ಆದಾಯವನ್ನು 2022 ರಲ್ಲಿ 18 ಮಿಲಿಯನ್ (ಸುಮಾರು Rs 150 ಕೋಟಿ) ಎಂದು ಅಂದಾಜಿಸಿದೆ.

ರೋಹನ್ ಮೂರ್ತಿ ಅವರು 6,08,12,892 ಷೇರುಗಳನ್ನು ಅಥವಾ ಇನ್ಫೋಸಿಸ್‌ನ ಶೇಕಡಾ 1.67 ರಷ್ಟು ಷೇರುಗಳನ್ನು ಹೊಂದಿದ್ದಾರೆ. 106.42 ಕೋಟಿ ಲಾಭಾಂಶ ಆದಾಯವನ್ನು ಪಡೆದರು.

ಇನ್ನೂ ರೋಹನ್ ಅವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಬೆಂಗಳೂರಿನ ಬಿಷಪ್ ಕಾಟನ್ ಬಾಲಕರ ಶಾಲೆಯಲ್ಲಿ ಮಾಡಿದರು. ಕಾರ್ನೆಲ್ ವಿಶ್ವವಿದ್ಯಾಲಯದ ಪದವಿ ಶಿಕ್ಷಣವನ್ನು ಮುಗಿಸಿದರು. ಎಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿಯನ್ನು ಹಾರ್ವರ್ಡ್ ವಿಶ್ವವಿದ್ಯಾನಿಲಯದಲ್ಲಿ ಪಡೆದರು.

ರೋಹನ್ ಮೂರ್ತಿ ಅವರ ತಾಯಿ ಸುಧಾ ಮೂರ್ತಿ ಯಶಸ್ವೀ ಉದ್ಯಮಿ, ಲೇಖಕಿ ಮತ್ತು ಸಮಾಜ ಸೇವಕಿ. ರೋಹನ್‌ಗೆ ಅಕ್ಷತಾ ಮೂರ್ತಿ ಎಂಬ ಅಕ್ಕ ಇದ್ದಾರೆ. ಇವರ ಪತಿ ಯುಕೆ ಪ್ರಧಾನಿ ರಿಷಿ ಸುನಕ್ ಅವರನ್ನು ವಿವಾಹವಾಗಿದ್ದಾರೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *