ಹೊಸ ಉದ್ಯಮ ರಂಗಕ್ಕೆ ಕಾಲಿಟ್ಟಾಯ್ತು ಆಕಾಶ್ ಅಂಬಾನಿ – ಎಚ್.ಡಿ.ಎಫ್.ಸಿ, ಬಜಾಜ್ ಕಂಪನಿಗಳಿಗೆ ನಡುಕ

ಹೊಸ ಉದ್ಯಮ ರಂಗಕ್ಕೆ ಕಾಲಿಟ್ಟಾಯ್ತು ಆಕಾಶ್ ಅಂಬಾನಿ – ಎಚ್.ಡಿ.ಎಫ್.ಸಿ, ಬಜಾಜ್ ಕಂಪನಿಗಳಿಗೆ ನಡುಕ

ನ್ಯೂಸ್ ಆ್ಯರೋ : ಜಗತ್ತಿನ ಶ್ರೀಮಂತರ ಪಟ್ಟಿಲ್ಲಿ ಸ್ಥಾನ ಪಡೆದಿರುವ ಭಾರತೀಯ ಮೂಲದ ರಿಲಯನ್ಸ್ ಇಂಡಸ್ಟ್ರೀಸ್ (Reliance) ಚೇರ್ಮನ್ ಮುಖೇಶ್ ಅಂಬಾನಿಯವರು (Mukesh Ambani) ಈಗಾಗಲೇ ತಮ್ಮ ಉದ್ಯಮವನ್ನು ವಿವಿಧ ಕ್ಷೇತ್ರಗಳಿಗೆ ವಿಸ್ತರಿಸಿದ್ದಾರೆ. ಇದೀಗ ಅಂಬಾನಿ ಕುಟುಂಬದ ಮೂರನೇ ತಲೆಮಾರು ಎನಿಸಿಕೊಂಡಿರುವ ಆಕಾಶ್ ಅಂಬಾನಿ (Akash Ambani) ಅಂದರೆ ಮುಖೇಶ್ ಅಂಬಾನಿಯವರ ಪುತ್ರ ಉದ್ಯಮ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದು, ಎಚ್.ಡಿ.ಎಫ್.ಸಿ ಬ್ಯಾಂಕ್ (HDFC Bank) ಹಾಗೂ ಬಜಾಜ್ ಗೆ (Bajaj Finance) ತೀವ್ರ ಸ್ಪರ್ಧೆ ಒಡ್ಡುವ ಸಾಧ್ಯತೆಯಿದೆ. ಹಾಗಿದ್ದರೆ ಆಕಾಶ್ ಅಂಬಾನಿಯ ಹೊಸ ಉದ್ಯಮ ಯಾವುದು? (New Business) ನೋಡೋಣ ಬನ್ನಿ.

ಆಕಾಶ್ ಅಂಬಾನಿ ಹೊಸ ಉದ್ಯಮ ಯಾವುದು?

ಭಾರತೀಯ ಉದ್ಯಮ ಕ್ಷೇತ್ರದ ಅಗ್ರಜ ಎನಿಸಿಕೊಂಡಿರುವ ಮುಖೇಶ್ ಅಂಬಾನಿಯವರ ಹಿರಿಯ ಮಗ ಆಕಾಶ್ ಅಂಬಾನಿ ಹೊಸ ಉದ್ಯಮ ಆರಂಭಿಸಿಲಿದ್ದು. ಇದೇ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ವರದಿಗಳ ಪ್ರಕಾರ, ಆಕಾಶ್ ಕನ್ಸ್ಯೂಮರ್ ಫೈನಾನ್ಸ್ ಕ್ಷೇತ್ರಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ. ಆ ಮೂಲಕ ಜಿಯೋ ಫೈನಾನ್ಷಿಯಲ್ ಸರ್ವಿಸಸ್‌ನೊಂದಿಗೆ ಗ್ರಾಹಕ ಹಣಕಾಸು ಕ್ಷೇತ್ರಕ್ಕೆ ಪ್ರವೇಶಿಸಲು ನಿರ್ಧಾರ ಮಾಡಿದ್ದಾರಂತೆ. ಸದ್ಯಕ್ಕೆ ಪ್ರಾಯೋಗಿಕವಾಗಿ ಕೆಲವು ರಿಲಯನ್ಸ್‌ ಡಿಜಿಟಲ್‌ನ ಪ್ರಾದೇಶಿಕ ಕಚೇರಿಗಳಲ್ಲಿ ಆರಂಭಿಸಲು ಆಕಾಶ್ ಇಚ್ಚಿಸಿದ್ದು, ಇದೇ ವರ್ಷ ಉದ್ಯಮ ಆರಂಭವಾಗಲಿದೆ.

ನಿರ್ಮಾಣವಾಗಲಿದೆ ವಿಶ್ವದರ್ಜೆಯ ಸ್ಮಾರ್ಟ್ ಸಿಟಿ!

ಈಗಾಗಲೇ ಮುಖೇಶ್ ಅಂಬಾನಿ ಚೇರ್ಮನ್ ಸ್ಥಾನವನ್ನು ಪುತ್ರ ಆಕಾಶ್ ಅಂಬಾನಿಗೆ ಹಸ್ತಾಂತರಿಸಿದ್ದಾರೆ. ಈ‌ ನಡುವೆ ಮುಖೇಶ್ ಅಂಬಾನಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಂಗಸಂಸ್ಥೆ ಮಾಡೆಲ್ ಎಕನಾಮಿಕ್ ಟೌನ್‌ಶಿಪ್ ಲಿಮಿಟೆಡ್ ಅಥವಾ ಎಂಇಟಿ ಸಿಟಿಯನ್ನು ಪ್ರಸ್ತುತ ರಾಷ್ಟ್ರ ರಾಜಧಾನಿ ಪ್ರದೇಶದ ಬಳಿ ನಿರ್ಮಾಣ ಮಾಡುತ್ತಿದೆ. ಈ ಹಿಂದಿಗಿಂತಲೂ ಹೆಚ್ಚು ವಿಶ್ವದರ್ಜೆಯ ಸ್ಮಾರ್ಟ್ ಸಿಟಿಯನ್ನು ನಿರ್ಮಿಸುವ ಚಿಂತನೆ‌ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಅಂಬಾನಿ ಕುಟುಂಬ 800 ಎಕರೆ ಪ್ರದೇಶದಲ್ಲಿ ನಿರ್ಮಿಸಲು ಹೊರಟಿರುವ ಹೊಸ ಗ್ರೀನ್ ಫೀಲ್ಡ್ ನಗರವನ್ನು ಹರಿಯಾಣಾದ ಜಜ್ಜರ್ ನಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಇಲ್ಲಿ 220 ಕೆವಿ ವಿದ್ಯುತ್ ಉಪಕೇಂದ್ರ, ನೀರು ಸರಬರಾಜು, ಸಂಸ್ಕರಣಾ ಘಟಕ ಮತ್ತು ವಿಶಾಲ ರಸ್ತೆಗಳಂತಹ ಮೂಲಸೌಕರ್ಯಗಳು ಈಗಾಗಲೇ ಈ ಪ್ರದೇಶದಲ್ಲಿ ನಿರ್ಮಾಣವಾಗಿದೆ‌. ಆ ಮೂಲಕ ಮುಖೇಶ್ ಅಂಬಾನಿ ಉದ್ಯಮ ಕ್ಷೇತ್ರದಲ್ಲಿನ ಹೊಸ ಕ್ರಾಂತಿಗೆ ಮುನ್ನುಡಿ ಬರೆಯುತ್ತಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *