ವಿಧಾನಸಭಾ ಉಪ ಚುನಾವಣೆ; ʼಅಭಿಮನ್ಯುʼ ಮುಂದೆ ಗೆದ್ದು ಬೀಗಿದ ʼಸೈನಿಕʼ

New Project 3 2
Spread the love

ನ್ಯೂಸ್ ಆ್ಯರೋ: ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ.

ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್​​ ಅವರನ್ನು ಮತದಾರರು ‘ಕೈ’ ಹಿಡಿದಿದ್ದಾರೆ. ಅತ್ತ ನಿಖಿಲ್​ಗೆ ಮೂರನೇ ಬಾರಿಯೂ ಮುಖಭಂಗವಾಗಿದೆ. ಈ ಹಿಂದೆ ಮಂಡ್ಯದಿಂದ ಲೋಕಸಭೆ ಚುನಾವಣೆ, ರಾಮನಗರದಿಂದ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋಲುಂಡಿದ್ದ ಅವರು, ಇದೀಗ ಮೂರನೇ ಪ್ರಯತ್ನದಲ್ಲಿಯೂ ವಿಫಲರಾಗಿದ್ದಾರೆ.

ಚನ್ನಪಟ್ಟಣದಲ್ಲಿ ಎರಡು ಬಾರಿ ಸೋತಿರುವ ಅನುಕಂಪ ಯೋಗೇಶ್ವರ್​ ಕೈ ಹಿಡಿದಿರಬಹುದು. ಇಷ್ಟೇ ಅಲ್ಲದೆ ಕ್ಷೇತ್ರದಲ್ಲಿ ಯೋಗೇಶ್ವರ್ ಅವರಿಗೆ ಅವರದ್ದೇ ಆದ ವೈಯಕ್ತಿಕ ವರ್ಚಸ್ಸು ಇದೆ.

ಯೋಗೇಶ್ವರ್ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿರುವುದರಿಂದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಪ್ಲಸ್ ಆಗುರಬಹುದು. ಜೊತೆ ಡಿಕೆ ಸಹೋದರರು ಯೋಗೇಶ್ವರ್​ ಬೆನ್ನಿಗೆ ನಿಂತಿರುವುದು ಕೂಡ ನೆರವಾಗಿದೆ. ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಒಗ್ಗಟ್ಟು ಪ್ರದರ್ಶನ ಸೇರಿ ಹಲವು ವಿಚಾರಗಳು ಸಿಪಿವೈಗೆ ವರವಾಗಿ ಪರಿಣಮಿಸಿದವು.

ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದರೂ, ಚನ್ನಪಟ್ಟಣದಲ್ಲಿ ಈ ಬಾರಿ ಜಿದ್ದಾಜಿದ್ದಿ ಜೋರಾಗಿತ್ತು. 2018ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಸೋಲು. 2023ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಲ್ಲಿ ಸೋಲು. ಹೀಗೆ ಎರಡು ಸೋಲು ಕಂಡಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಈಬಾರಿ ಚನ್ನಪಟ್ಟಣದಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಅತ್ತ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ಸಿಪಿ ಯೋಗೇಶ್ವರ್​ಗೆ ಕೂಡಾ ಈ ಚುನಾವಣೆ ಅಗ್ನಿ ಪರೀಕ್ಷೆಯಾಗಿತ್ತು. ಆದರೆ ನಿಖಿಲ್‌ ಮಕಾಡೆ ಮಲಗಿದ್ದಾರೆ.

Leave a Comment

Leave a Reply

Your email address will not be published. Required fields are marked *