ಸಾಂದೀಪನಿ ಶಿಷ್ಯವೇತನ ಯೋಜನೆ; ಬ್ರಾಹ್ಮಣ ವಿದ್ಯಾರ್ಥಿಗಳಿಗೆ 5.85 ಕೋಟಿ ರೂ ಶಿಷ್ಯವೇತನ ಬಿಡುಗಡೆ

scholarship
Spread the love

ನ್ಯೂಸ್ ಆ್ಯರೋ: ರಾಜ್ಯ ಸರ್ಕಾರವು ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಶಿಷ್ಯವೇತನ ಬಿಡುಗಡೆ ಮಾಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24 ನೇ ಸಾಲಿನಲ್ಲಿ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ವಿದ್ಯಾರ್ಥಿಗಳಿಗೆ ಮಂಡಳಿಯ ವತಿಯಿಂದ ಬಿಡುಗಡೆಯಾದ ಅನುದಾನ ವಿವರವನ್ನು ಸರ್ಕಾರ ಹಂಚಿಕೊಂಡಿದೆ. 2023-24 ನೇ ಸಾಲಿನಲ್ಲಿ ಒಟ್ಟು 4474 ಅರ್ಜಿಗಳು ಸಲ್ಲಿಕೆಯಾಗಿದ್ದು, ಶಿಷ್ಯವೇತನ ಪಾವತಿಸ ಬಹುದಾದ ಅರ್ಹ ಅರ್ಜಿಗಳ ಸಂಖ್ಯೆ 3958 ಎಂದು ತಿಳಿಸಿದೆ.

2024ರ ಮಾರ್ಚ್ ಅಂತ್ಯಕ್ಕೆ 1737 ಅರ್ಜಿಗಳಿಗೆ ಸಂಬಂಧಿಸಿದಂತೆ 2.41 ಕೋಟಿ ರೂಪಾಯಿ ಶಿಷ್ಯವೇತನ ಬಿಡುಗಡೆ ಮಾಡಲಾಗುತ್ತು. ಸಾರ್ವತ್ರಿಕ ಚುನಾವಣೆಯ ನೀತಿ ಸಂಹಿತೆ & ಮಂಡಳಿಯು ಖಜಾನೆ ಮುಖಾಂತರ ಶಿಷ್ಯವೇತನ ಬಿಡುಗಡೆ ಮಾಡಬೇಕಾದ ಹಿನ್ನಲೆಯಲ್ಲಿ ಸದರಿ ತಾಂತ್ರಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಡಿಸೆಂಬರ್ 2024ರ ಮಾಹೆಯಲ್ಲಿ ಬಾಕಿ ಉಳಿದ 2221 ಅರ್ಜಿಗಳನ್ನು ಪರಿಗಣಿಸಿ, 3.44 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

Leave a Comment

Leave a Reply

Your email address will not be published. Required fields are marked *

error: Content is protected !!