Bangalore : ಮನೆಗೆ ನುಗ್ಗಿ ಹಾಡಹಗಲೇ ಸರ್ಕಾರಿ ಮಹಿಳಾ ಅಧಿಕಾರಿಯ ಬರ್ಬರ ಹತ್ಯೆ – ಪಕ್ಕಾ ಪ್ಲ್ಯಾನ್ ಮಾಡಿ ಕೊಂದು ಪರಾರಿಯಾದ ಹಂತಕರು..!!

Bangalore : ಮನೆಗೆ ನುಗ್ಗಿ ಹಾಡಹಗಲೇ ಸರ್ಕಾರಿ ಮಹಿಳಾ ಅಧಿಕಾರಿಯ ಬರ್ಬರ ಹತ್ಯೆ – ಪಕ್ಕಾ ಪ್ಲ್ಯಾನ್ ಮಾಡಿ ಕೊಂದು ಪರಾರಿಯಾದ ಹಂತಕರು..!!

ನ್ಯೂಸ್ ಆ್ಯರೋ : ಒಂಟಿಯಾಗಿ ವಾಸವಾಗಿದ್ದ ಗಣಿ-ಭೂ ವಿಜ್ಞಾನ ಇಲಾಖೆಯ ಡೆಪ್ಯೂಟಿ ಡೈರೆಕ್ಟರ್ ಒಬ್ಬರನ್ನು ಭೀಕರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂಟಿಯಾಗಿ ನೆಲೆಸಿದ್ದ ಗಣಿ-ಭೂ ವಿಜ್ಞಾನ ಇಲಾಖೆಯ ಡೆಪ್ಯೂಟಿ ಡೈರೆಕ್ಟರ್ ಪ್ರತಿಮಾ (37) ಎಂಬವರನ್ನು ಚಾಕುವಿನಿಂದ ಇರಿದು ಕೊಂದ ಬಳಿಕ ಹಂತಕರು ಪರಾರಿಯಾಗಿದ್ದಾರೆ.

ಮನೆಯಲ್ಲಿ ಪ್ರತಿಮಾ ಅವರು ಒಬ್ಬರೇ ಇದ್ದ ವೇಳೆ ಹತ್ಯೆ ಮಾಡಲಾಗಿದ್ದು, ಮನೆಯ ಒಳಗಿ ನುಗ್ಗಿದ ಹಂತಕರು ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಡೆಪ್ಯುಟಿ ಡೈರಕ್ಟರ್ ಆಗಿದ್ದ ಪ್ರತಿಮಾ ಅವರು ಮನೆಯಲ್ಲಿ ಒಬ್ಬರೇ ಇದ್ದರು. ಮನೆಯ ಕಾಲಿಂಗ್ ಬೆಲ್ ಒತ್ತಿದಾಗ ಪ್ರತಿಮಾ ಅವರು ತೆಗೆದಿದ್ದಾರೆ. ಈ ವೇಳೆ ಒಳ ನುಗ್ಗಿದ ಹಂತಕರು ಚಾಕುವಿನಿಂದ ಇರಿದಿದ್ದಾರೆ. ಆದರೆ ಈ ಹತ್ಯೆ ಯಾವ ಕಾರಣಕ್ಕೆ ನಡೆದಿದೆ ಎಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ವೈಯಕ್ತಿಕ ಕಾರಣಕ್ಕೆ ಆಗಿದೆಯೋ ಅಥವಾ ಬೇರೆ ವಿಚಾರಕ್ಕೆ ಮರ್ಡರ್ ಆಗಿದೆಯೋ ಎಂಬ ಬಗ್ಗೆ ತನಿಖೆಯಿಂದ ಸತ್ಯ ಹೊರಬರಬೇಕಿದೆ.

ಪತಿಯಿಂದ ವಿಚ್ಚೇದನ ಪಡೆದು ಒಂಟಿಯಾಗಿ ಪ್ರತಿಮಾ ವಾಸ ಮಾಡುತ್ತಿದ್ದರು. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಪತಿ ಮತ್ತು ಮಗ ನೆಲೆಸಿದ್ದಾರೆ. ಪ್ರೀ ಪ್ಲ್ಯಾನ್ ಮಾಡಿ ಪ್ರತಿಮಾ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವೈಯಕ್ತಿಕ ಕಾರಣಕ್ಕಾಗಿ ಏನಾದರೂ ಕೊಲೆ ನಡೆದಿರಬಹುದಾ ಎಂಬ ಆಯಾಮದಲ್ಲಿಯೂ ತನಿಖೆ ಮುಂದುವರಿಸಲಾಗಿದೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *