ದಾಸನಿಗೆ ಹೆಚ್ಚಾಯ್ತು ಬೆನ್ನು ನೋವಿನ ಸಮಸ್ಯೆ; ಸರ್ಜರಿಗೆ ಗ್ರೀನ್ ಸಿಗ್ನಲ್ ನೀಡಿದ್ರಾ ದರ್ಶನ್ ?

Darshan
Spread the love

ನ್ಯೂಸ್ ಆ್ಯರೋ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಅನಾರೋಗ್ಯದ ಹಿನ್ನೆಲೆ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಆಚೆ ಬಂದಿದ್ದಾರೆ. ಬೆನ್ನು ನೋವಿನ ಸಮಸ್ಯೆ ಉಲ್ಬಣಿಸಿದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ಸರ್ಜರಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ.

ಬಿಜಿಎಸ್ ಆಸ್ಪತ್ರೆಯಲ್ಲಿ ದರ್ಶನ್ ಸರ್ಜರಿಗೆ ಅನುಮತಿ ನೀಡಿದ್ದಾರೆ. ಈ ಸಂಬಂಧ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಜೊತೆ ವೈದ್ಯರು ಚರ್ಚೆ ನಡೆಸಿದ್ದಾರೆ. ಪಿಜಿಯೋಥೆರಪಿ ಜೊತೆ ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆ.

ಕೇವಲ ಪಿಜಿಯೋಥೆರಪಿಯಿಂದ ಬೆನ್ನು ನೋವು ಗುಣಮುಖ ಸಾಧ್ಯವಿಲ್ಲ ಎಂದು ವೈದ್ಯ ಡಾ.ನವೀನ್ ಅಪ್ಪಾಜಿಗೌಡ ಅವರು ದರ್ಶನ್​ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಸರ್ಜರಿಗೆ ಒಪ್ಪಿಗೆ ಸೂಚಿಸಿದ್ದಾರಂತೆ.

ಬಿಜಿಎಸ್ ಆಸ್ಪತ್ರೆ ವೈದ್ಯರ ತಂಡದ ಮನವರಿಕೆ ಬೆನ್ನಲ್ಲೇ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮೀ ಸರ್ಜರಿಗೆ ಅನುಮತಿ ನೀಡಿದ್ದಾರೆ ಎಂದು ಹೇಳಲಾಗಿದೆ. ಅಂತೆಯೇ ದರ್ಶನ್​ಗೆ ಸರ್ಜರಿ ಮಾಡಲು ಬಿಜಿಎಸ್ ವೈದ್ಯರ ತಂಡ ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Comment

Leave a Reply

Your email address will not be published. Required fields are marked *

error: Content is protected !!