ದರ್ಶನ್ಗೆ ಮತ್ತೊಂದು ಶಾಕ್ ಕೊಟ್ಟ ಪೊಲೀಸರು; ಆರೋಪಿ ಸ್ಥಾನದಲ್ಲಿರುವ ದಾಸನಿಗೆ ಖಾಕಿಯಿಂದ ಸೂಚನೆ

ನ್ಯೂಸ್ ಆ್ಯರೋ: ರೇಣುಕಾ ಸ್ವಾಮಿ ಕೇಸ್ನಲ್ಲಿ ಅರೆಸ್ಟ್ ಆಗಿ ಜಾಮೀನಿನ ಮೇಲೆ ಆಚೆ ಇರುವ ನಟ ದರ್ಶನ್ಗೆ ಬೆಂಗಳೂರು ಪೊಲೀಸರು ಮತ್ತೊಂದು ಶಾಕ್ ಕೊಟ್ಟಿದ್ದಾರೆ. ದರ್ಶನ್ನ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಟ್ಟಿದ್ದಾರೆ ಪೊಲೀಸರು. ಕೇಸ್ ಮುಗಿಯುವವರೆಗೂ ಲೆಸೆನ್ಸ್ ಬಳಸವುಂತಿಲ್ಲ ಎಂದು ಸ್ಟ್ರಿಕ್ಟ್ ವಾರ್ನಿಂಗ್ ನೀಡಿದ್ದಾರೆ. ದರ್ಶನ್ ಕೊಟ್ಟ ಕಾರಣ ಪರಿಗಣಿಸಿಯೂ ಗನ್ ಅಮಾನತ್ತಿನಲ್ಲಿಡಲಾಗಿದೆ.
ಇದು ಮಾತ್ರವಲ್ಲ ಕೂಡಲೇ ಎರಡು ಗನ್ ಆರ್ ಆರ್ ನಗರ ಪೊಲೀಸರಿಗೆ ಹಸ್ತಾಂತರ ಮಾಡಬೇಕು ಎಂದು ದರ್ಶನ್ಗೆ ಸೂಚನೆ ನೀಡಲಾಗಿದೆ. ದರ್ಶನ್ ರೇಣುಕಾಸ್ವಾಮಿ ಕೇಸ್ನಲ್ಲಿ ಆರೋಪಿಯಾಗಿದ್ದರಿಂದ ಗನ್ ಲೈಸೆನ್ಸ್ ಕ್ಯಾನ್ಸಲ್್ಗೆ ಪೊಲೀಸರು ಪತ್ರ ಬರೆದಿದ್ದರು. ಈ ಹಿಂದೆ ಪೊಲೀಸ್ ನೋಟಿಸ್ಗೆ ದರ್ಶನ್ ಉತ್ತರವನ್ನು ಕೂಡ ನೀಡಿದ್ದರು.
“ನನಗೆ ಗನ್ ಬೇಕೇ ಬೇಕು. ನಾನೊಬ್ಬ ಸೆಲೆಬ್ರೆಟಿ, ನಾನು ಹೋದ ಕಡೆ ಬಂದ ಕಡೆ ಸಾಕಷ್ಟು ಜನ ಸೇರುತ್ತಾರೆ. ಈ ವೇಳೆ ನನ್ನ ಆತ್ಮರಕ್ಷಣೆಗೆ ಗನ್ ಬೇಕು” ಎಂದಿದ್ದರು. ಈ ಬಗ್ಗೆ ಪರಶೀಲನೆ ನಡೆಸಿದ ಪೊಲೀಸರು ಪ್ರಮುಖ ಕೇಸ್ನಲ್ಲಿ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಗನ್ ಲೈಸೆನ್ಸ್ನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಲು ನಿರ್ಧಾರ ಮಾಡಿದ್ದಾರೆ.
ಕೊಲೆ ಕೇಸ್ ಮುಗಿದು ಆರೋಪ ಮುಕ್ತವಾಗವವರೆಗೂ ಗನ್ ಬಳಸುವಂತಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಸಾಕ್ಷಿಗಳಿಗೆ ಬೆದರಿಕೆಯೊಡ್ಡುವ ಸಾಧ್ಯತೆ ಇರುವ ಕಾರಣ ಗನ್ ವಾಪಸ್ ಪಡೆದು ಸ್ಟೇಷನ್ನಲ್ಲಿ ಇಟ್ಟುಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.
Leave a Comment