ರಿಲಯನ್ಸ್ ಫೌಂಡೇಶನ್ ನಿಂದ 5 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ – ಪ್ರತಿಯೊಬ್ಬರಿಗೂ ಸಿಗಲಿದೆ ತಲಾ ಎರಡು ಲಕ್ಷ ರೂಪಾಯಿ..!!

ರಿಲಯನ್ಸ್ ಫೌಂಡೇಶನ್ ನಿಂದ 5 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ – ಪ್ರತಿಯೊಬ್ಬರಿಗೂ ಸಿಗಲಿದೆ ತಲಾ ಎರಡು ಲಕ್ಷ ರೂಪಾಯಿ..!!

ನ್ಯೂಸ್ ಆ್ಯರೋ‌ : 2022-23ನೇ ಸಾಲಿನ ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ 27 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 5 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆಯಾಗಿದ್ದಾರೆ.

ಪ್ರಸ್ತುತ ಪ್ರಥಮ ವರ್ಷದ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಅವರಿಗೆ 2 ಲಕ್ಷ ರೂ.ವರೆಗೆ ಸ್ಕಾಲರ್‌ಶಿಪ್ ಸಿಗಲಿದೆ. 2022-23ನೇ ಸಾಲಿನಲ್ಲಿ 4,984 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ಸುಮಾರು 40,000 ವಿದ್ಯಾರ್ಥಿಗಳ ಅರ್ಜಿಸಲ್ಲಿಸಿದ್ದು, ಇದರಲ್ಲಿ 5,000 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ 51% ಹುಡುಗಿಯರೇ ಇದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ರಿಲಯನ್ಸ್ ಫೌಂಡೇಶನ್ ಸಿಇಒ ಶ್ರೀ ಜಗನ್ನಾಥ ಕುಮಾರ್, “ಉತ್ತಮ ಶಿಕ್ಷಣವನ್ನು ಪಡೆಯುವ ಯುವ ಜನರ ಕನಸಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನವು ರೆಕ್ಕೆಗಳನ್ನು ನೀಡಲಿದೆ. ವಿವಿಧ ಅಧ್ಯಯನ ವಿಭಾಗಗಳಿಂದ, ಭಾರತದ ಬಹುತೇಕ ಎಲ್ಲಾ ರಾಜ್ಯಗಳಿಂದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಪ್ರತಿಯೊಬ್ಬರನ್ನು ಅಭಿನಂದಿಸುತ್ತೇವೆ ಮತ್ತು ಅವರು ಭಾರತದ ಪ್ರಗತಿಗೆ ಕೊಡುಗೆ ನೀಡುವುದರೊಂದಿಗೆ ತಮಗಾಗಿ ಶಕ್ತವಾದ ಭವಿಷ್ಯವನ್ನು ನಿರ್ಮಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ” ಎಂದಿದ್ದಾರೆ.

ಈ ಆಯ್ಕೆ ಪ್ರಕ್ರಿಯೆ ಸಾಮರ್ಥ್ಯ ಪರೀಕ್ಷೆ, 12ನೇ ತರಗತಿ ಅಂಕಗಳು ಮತ್ತು ಇತರ ಅರ್ಹತಾ ಮಾನದಂಡಗಳನ್ನು ಒಳಗೊಂಡಿವೆ. 99 ವಿಶೇಷ ಚೇತನ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನಕ್ಕಾಗಿ ಆಯ್ಕೆ ಮಾಡಿರುವುದು ವಿಶೇಷ.

ಫಲಿತಾಂಶ ಹೀಗೆ ನೋಡಿ

ರಿಲಯನ್ಸ್ ಫೌಂಡೇಶನ್ ಮುಂದಿನ 10 ವರ್ಷಗಳಲ್ಲಿ 50,000 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುವುದಾಗಿ ಘೋಷಿಸಿದೆ. ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿ ವೇತನಕ್ಕೆ ಡಿಸೆಂಬರ್ ನಿಂದ ಫೆಬ್ರವರಿ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಫಲಿತಾಂಶವನ್ನು ತಿಳಿಯಲು www.reliancefoundation.org ಗೆ ಭೇಟಿ ನೀಡಬಹುದು.

2022-23ಕ್ಕೆ ಆಯ್ಕೆಯಾದ ರಿಲಯನ್ಸ್ ಫೌಂಡೇಶನ್ ಸ್ನಾತಕ್ಕೋತ್ತರ ವಿದ್ಯಾರ್ಥಿವೇತನ ಆಯ್ಕೆ ಪಟ್ಟಿಯನ್ನು ಜುಲೈನಲ್ಲಿ ಪ್ರಕಟಿಸಲಾಗುವುದು. ಪದವಿ ವಿದ್ಯಾರ್ಥಿ ವೇತನದ 2023-24 ಸಾಲಿನ ಅರ್ಜಿಗಳನ್ನು ಮುಂಬರುವ ತಿಂಗಳುಗಳಲ್ಲಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Related post

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ – ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈ‌ ದಿನಗಳಲ್ಲಿ ಮದ್ಯ ಮಾರಾಟ ಇಲ್ಲ..!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ –…

ನ್ಯೂಸ್ ಆ್ಯರೋ ‌: ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ…

Leave a Reply

Your email address will not be published. Required fields are marked *