ದ್ವಿತೀಯ ಪಿಯು ಮರು ಮೌಲ್ಯಮಾಪನ ನಿಯಮದಲ್ಲಿ ಬದಲಾವಣೆ – ಹೇಗಿದೆ ಹೊಸ ವ್ಯವಸ್ಥೆ?

ದ್ವಿತೀಯ ಪಿಯು ಮರು ಮೌಲ್ಯಮಾಪನ ನಿಯಮದಲ್ಲಿ ಬದಲಾವಣೆ – ಹೇಗಿದೆ ಹೊಸ ವ್ಯವಸ್ಥೆ?

ನ್ಯೂಸ್ ಆ್ಯರೋ‌ : ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನದಲ್ಲಿ ಒಂದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಂಕ ಬದಲಾವಣೆಯೊಂದಿಗೆ ಕಟ್ಟಿದ ಶುಲ್ಕವನ್ನು ಮರು ಪಾವತಿಸಲಾಗುತ್ತಿದ್ದು, ಇದರಿಂದ ನೂರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಮೊದಲು ಕನಿಷ್ಠ 6 ಅಂಕ ಹೆಚ್ಚು ಗಳಿಸಿದ ವಿದ್ಯಾರ್ಥಿಗಳಿಗೆ ಮಾತ್ರ ಬದಲಾವಣೆಯ ಅಂಕ ನೀಡುತ್ತಿತ್ತು. ಕರ್ನಾಟಕ ಪದವಿ ಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು -1997ಕ್ಕೆ ತಿದ್ದುಪಡಿ ತರಲಾಗಿದ್ದು, ಒಂದು ಅಂಕ ಹೆಚ್ಚಾದರೂ ಬದಲಾದ ಅಂಕಗಳನ್ನು ನೀಡುವ ನಿಯಮ ಜಾರಿಗೆ ತರಲಾಗಿದೆ. ಹೊಸ ನಿಯಮದ ಪ್ರಕಾರ 1,925 ವಿದ್ಯಾರ್ಥಿಗಳಿಗೆ ಅಂಕಗಳ ಜೊತೆಗೆ ಮರು ಮೌಲ್ಯಮಾಪನದ ಶುಲ್ಕವನ್ನು ಕೂಡ ವಾಪಸ್ ನೀಡಲಾಗುತ್ತದೆ.

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಮೊದಲು ವಿದ್ಯಾರ್ಥಿಗಳು ಕಡ್ಡಾಯವಾಗಿ ಸ್ಕ್ಯಾನ್ ಪ್ರತಿ ಪಡೆಯಬೇಕು. ಸ್ಕ್ಯಾನ್ ಪ್ರತಿ ಪಡೆಯಲು ವಿದ್ಯಾರ್ಥಿಗಳು 530 ರೂ., ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು 1,670 ರೂ. ಸೇರಿ ಒಟ್ಟು 2,200 ರೂ. ಶುಲ್ಕ ಪಾವತಿಸಬೇಕು. ಈ ರೀತಿ 8,950 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.

ಮರು ಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತಂದಿದ್ದು, ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಒಂದು ಅಂಕ ಹೆಚ್ಚು ಬಂದರೂ ಪರಿಗಣಿಸಲು ಹಿಂದಿನ ಸರ್ಕಾರ ನಿರ್ಧರಿಸಿತ್ತು. 2023ರ ಮಾರ್ಚ್ ನಲ್ಲಿ ನಡೆದ ವಾರ್ಷಿಕ ಪರೀಕ್ಷೆಯಿಂದ ಹೊಸ ನಿಯಮ ಅನ್ವಯವಾಗಿದೆ. ಪ್ರತಿಯೊಂದು ಅಂಕವು ಮುಖ್ಯವಾಗಿರುವುದರಿಂದ ಒಂದು ಅಂಕವನ್ನು ಪರಿಗಣಿಸುವ ವಿದ್ಯಾರ್ಥಿ ಸ್ನೇಹಿ ಕೈಗೊಳ್ಳಲಾಗಿದೆ. ಸಿಇಟಿ ಸೀಟು ಹಂಚಿಕೆಗೆ ಅಂಕಗಳನ್ನು ಪರಿಗಣಿಸುವ ಹಿನ್ನಲೆಯಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗೆ ಒಂದೊಂದು ಅಂಕ ಕೂಡ ಮುಖ್ಯವಾಗಿರುತ್ತದೆ. ಇದೀಗ ಈ ಕ್ರಮದಿಂದ ಹೆಚ್ಚಿನ ಅನುಕೂಲವಾದಂತಾಗಿದೆ.

Related post

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದೈಹಿಕ ರಚನೆಯನ್ನು ಕಾಯ್ದುಕೊಳ್ಳಲು ನೆರವಾಗುವ ಕೆಲವು ಕ್ರೀಡಾ ಚಟುವಟಿಕೆಗಳನ್ನು ನೀವು ಇಂದು ಆನಂದಿಸಬಹುದು. ನೀವು ದೀರ್ಘಕಾಲದ ಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ನೀವು…
ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…

Leave a Reply

Your email address will not be published. Required fields are marked *