ರಾಜ್ಯದ 5,8,9,11 ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ – ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ತೀರ್ಪು

ರಾಜ್ಯದ 5,8,9,11 ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ – ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ತೀರ್ಪು

ನ್ಯೂಸ್ ಆ್ಯರೋ : ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದ್ದು, ರಾಜ್ಯದ 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.

ಸ್ಥಗಿತಗೊಂಡಿದ್ದ ಪರೀಕ್ಷೆ ಮುಂದುವರೆಸಲು ಹೈಕೋರ್ಟ್ ಆದೇಶ ಹೊರಡಿಸಿದ್ದು, ಸೋಮವಾರದಿಂದಲೇ ಪರೀಕ್ಷೆ ಆರಂಭಿಸಲು ಸಲಹೆ ನೀಡಿದೆ.‌ ಅಲ್ಲದೇ ಮುಂದಿನ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಲು ಹೈಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.

ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. ರಾಜೇಶ್ ರೈ ಅವರು ಇರುವ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. ಸರ್ಕಾರದ ಮೇಲ್ಮನವಿ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದರೆ, ಹೈಕೋರ್ಟ್ ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಆದರೆ ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ನಡೆ ನೀಡಿತ್ತು.

ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿತ್ತು. ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ವಾದ ಪ್ರತಿವಾದ ಆಲಿಸಿದ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿತ್ತು.

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರ ಕುರಿತಂತೆ ಅನಿಶ್ಚಿತತೆ ಮುಂದುವರೆದಿತ್ತು. ಪರೀಕ್ಷೆ ರದ್ದಾಗುತ್ತದೆಯೇ ಅಥವಾ ನಡೆಯುತ್ತದೆಯೇ ಎಂಬುದರ ಕುರಿತಾಗಿ ಗೊಂದಲ ಮುಂದುವರೆದಿದ್ದು, ಮಕ್ಕಳು ಮತ್ತು ಪೋಷಕರ ಸ್ಥಿತಿ ಅಯೋಮಯವಾಗಿತ್ತು.ಇದೀಗ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *