ಸ್ಪಂದನಾ ಸಾವಿನ ಬೆನ್ನಲ್ಲೇ ಮತ್ತೊಬ್ಬ ನಟ ಹೃದಯಾಘಾತದಿಂದ ನಿಧನ – ಖ್ಯಾತ ಕಿರುತೆರೆ ನಟ, ಕನ್ನಡಿಗ ಇನ್ನಿಲ್ಲ..!!
- ಮನರಂಜನೆ
- August 18, 2023
- No Comment
- 194
ನ್ಯೂಸ್ ಆ್ಯರೋ : ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟ ಆಘಾತದಿಂದ ರಾಜ್ಯದ ಜನತೆ ಇನ್ನೂ ಹೊರ ಬಂದಿಲ್ಲ. ಆಗಲೇ ಇನ್ನೊಂದು ಸಾವು ಇದೇ ಕಾರಣದಿಂದ ಸಂಭವಿಸಿದೆ. 24 ವರ್ಷದ ಕಿರುತೆರೆ ನಟ ಪವನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹಿಂದಿ, ತಮಿಳು ಕಿರುತೆರೆಯಲ್ಲಿ ನಟನೆ
ಪವನ್ ಹಿಂದಿ ಮತ್ತು ತಮಿಳು ಕಿರುತೆರೆಯಲ್ಲಿ ನಟಿಸುವ ಮೂಲಕ ಜನಪ್ರಿಯರಾಗಿದ್ದಾರೆ. ಮಂಡ್ಯ ಮೂಲದ ಇವರು ತಂದೆ-ತಾಯಿ ಜೊತೆ ಮುಂಬಯಿಯಲ್ಲಿ ನೆಲೆಸಿದ್ದರು.
ಪವನ್ ಹುಟ್ಟೂರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಹರಿಹರಪುರ ಗ್ರಾಮದಲ್ಲಿ ಇಂದು (ಆಗಸ್ಟ್ 18) ಅಂತ್ಯಕ್ರಿಯೆ ನಡೆಯಲಿದೆ. ಕಿರುತೆರೆಯಲ್ಲಿ ನಟಿಸುತ್ತಿದ್ದ ಅವರು ಸಿನಿಮಾಗಳಲ್ಲಿ ಮಿಂಚಬೇಕು ಎನ್ನುವ ಕನಸು ಕಂಡಿದ್ದರು ಎಂದು ಆಪ್ತ ಮೂಲಗಳು ತಿಳಿಸಿವೆ.
ಪವನ್ ಮೃತದೇಹವನ್ನು ಕರೆ ತರಲಾಗುತ್ತಿದ್ದು, ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.