ತಿರುಪತಿಯ ತಿಮ್ಮಪ್ಪನಿಗೆ ಮುಡಿಕೊಟ್ಟ ಬಹುಭಾಷಾ ನಟಿ – 10 ವರ್ಷಗಳ ಹರಕೆ ತೀರಿಸಿದ ಗಾಯತ್ರಿ ರಘುರಾಮ್
- ಮನರಂಜನೆ
- August 20, 2023
- No Comment
- 86
ನ್ಯೂಸ್ ಆ್ಯರೋ : ಗಾಸಿಪ್ ವಿಚಾರದಿಂದಲೇ ಆಗಾಗ ಸುದ್ದಿಯಾಗುತ್ತಿದ್ದ ಖ್ಯಾತ ನಟಿ ಗಾಯತ್ರಿ ರಘುರಾಮ್, ಇದೀಗ ತಿರುಪತಿಯ ತಿಮ್ಮಪ್ಪನಿಗೆ ಮುಡಿಕೊಟ್ಟು ಗಮನ ಸೆಳೆದಿದ್ದಾರೆ.
ವಾರದ ಹಿಂದೆಯಷ್ಟೇ ಉದ್ದನೆಯ ಜಡೆಯ ಪೋಟೋ ಹಾಕಿದ್ದ ಗಾಯತ್ರಿ, ಇದೀಗ ಮುಡಿಕೊಟ್ಟಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 10 ವರ್ಷಗಳ ಆಸೆಯಂತೆ ಇದೀಗ ನಟಿ ತಿಮ್ಮಪ್ಪನಿಗೆ ಹರಕೆಯನ್ನು ಅರ್ಪಿಸಿದ್ದೇನೆ ಎಂದಿದ್ದಾರೆ.
ತಮಿಳು ಚಿತ್ರೋದ್ಯಮದಲ್ಲಿ ಸ್ಟಾರ್ ನಟಿ ಎಂದೇ ಗುರುತಿಸಿಕೊಂಡಿದ್ದ ಗಾಯತ್ರಿ ಕನ್ನಡ, ತೆಲುಗು ಹಾಗೂ ಮಲಯಾಳಂ ಚಿತ್ರಗಳಿಗೂ ಬಣ್ಣ ಹಚ್ಚಿದ್ದಾರೆ. ಹಲವಾರು ಯಶಸ್ವಿ ಸಿನಿಮಾಗಳಿಗೆ ನಾಯಕಿಯಾಗಿದ್ದಾರೆ.
ಕನ್ನಡದಲ್ಲಿ ‘ಮನಸ್ಸೆಲ್ಲಾ ನೀನೇ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ನಟಿ ಗಾಯತ್ರಿ ರಘುರಾಮ್ ಈವರೆಗೂ ಸಲ್ಲದ ಕಾರಣಕ್ಕಾಗಿ ಸುದ್ದಿಯಾಗುತ್ತಿದ್ದರು.
ಕೇವಲ ನಟಿ ಮಾತ್ರವಲ್ಲ, ನಿರ್ಮಾಪಕಿ, ಕೊರಿಯೋಗ್ರಾಫರ್, ನಿರ್ದೇಶಕಿಯಾಗಿಯೂ ಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿದ್ದಾರೆ. 2006ರಲ್ಲಿ ದೀಪಕ್ ಚಂದ್ರಶೇಖರ್ ಜೊತೆ ಮದುವೆಯಾದ ನಾಲ್ಕೇ ವರ್ಷದಲ್ಲಿ ಅವರಿಂದ ದೂರವಾದರು. ಎರಡು ವರ್ಷಗಳ ಹಿಂದೆಯಷ್ಟೇ ಚಿತ್ರೋದ್ಯಮಕ್ಕೆ ಗುಡ್ ಬೈ ಹೇಳಿದ್ದರು.
ಆನಂತರ ತಮಿಳುನಾಡಿನಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡರು. ಬಿಜೆಪಿಯಲ್ಲಿ ಕಲೆ ಮತ್ತು ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ನಂತರ ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಮುನಿಸಿಕೊಂಡು ರಾಜೀನಾಮೆ ಕೂಡ ನೀಡಿದ್ದರು.