ತನ್ನ ಇಬ್ಬರೂ ಹೆಣ್ಣು ಮಕ್ಕಳು ತಮ್ಮ ಗಂಡನಿಗೆ ಡೈವೋರ್ಸ್ ನೀಡಿ ನಿತ್ಯಾನಂದನ ಜೊತೆಗಿದ್ದಾರೆ..!! – ಕನ್ನಡ ಚಿತ್ರರಂಗದ ನಟನ ಕಣ್ಣೀರ ಕಹಾನಿ ಏನಿದು?

ತನ್ನ ಇಬ್ಬರೂ ಹೆಣ್ಣು ಮಕ್ಕಳು ತಮ್ಮ ಗಂಡನಿಗೆ ಡೈವೋರ್ಸ್ ನೀಡಿ ನಿತ್ಯಾನಂದನ ಜೊತೆಗಿದ್ದಾರೆ..!! – ಕನ್ನಡ ಚಿತ್ರರಂಗದ ನಟನ ಕಣ್ಣೀರ ಕಹಾನಿ ಏನಿದು?

ನ್ಯೂಸ್ ಆ್ಯರೋ‌ : ದಕ್ಷಿಣ ಭಾರತದ ಹಿರಿಯ ನಟ ಅಶೋಕ್ ಕುಮಾರ್ ಅವರ ಇಬ್ಬರು ಹೆಣ್ಣು ಮಕ್ಕಳು ನಿತ್ಯಾನಂದ ಸ್ವಾಮಿಯ ಆಶ್ರಮದಲ್ಲಿ ವಾಸಿಸುತ್ತಿದ್ದಾರೆ. ಈ ವಿಚಾರವನ್ನ ಸ್ವತಃ ಅಶೋಕ್ ಕುಮಾರ್ ಮಾಧ್ಯಮದ ಮುಂದೆ ಹೇಳಿದ್ದಾರೆ.

ಪುಟ್ಟಣ್ಣ ಕಣಗಾಲ್ ಅವರಿಗೆ ಆಪ್ತರಾಗಿದ್ದ ಅಶೋಕ್ ಕುಮಾರ್ ತೆಲುಗಿನ ಸಾಕಷ್ಟು ಸಿನಿಮಾಗಳಲ್ಲೂ ನಟಿಸಿದ್ದಾರೆ. ಪೋಷಕ ನಟ, ವಿಲನ್ ಆಗಿ ಖ್ಯಾತಿ ಗಳಿಸಿದ್ದ ಅಶೋಕ್ ಕುಮಾರ್ ಬಳಿಕ ಚಿತ್ರರಂಗದಿಂದ ದೂರ ಸರಿದಿದ್ದರು. ಇದೀಗ ಅವರು ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ಮಾತನಾಡಿದ್ದಾರೆ.

ನಮಗೆ ಮೂರು ಜನ ಹೆಣ್ಣು ಮಕ್ಕಳು. ಅವರು ಇಷ್ಟಪಟ್ಟವರ ಜೊತೆ ಮದುವೆ ಮಾಡಿಸಿಕೊಟ್ಟೆ. ನನ್ನ ಮೊದಲನೇ ಮಗಳು ಅಮೆರಿಕಾದಲ್ಲಿ ಇದ್ದಾಳೆ. ಅವಳು ಆಗಾಗ ನಿತ್ಯಾನಂದ ಸ್ವಾಮಿ ಆಶ್ರಮಕ್ಕೆ ಪ್ರವಚನ ಕೇಳಲು ಹೋಗುತ್ತಿದ್ದಳು. ಅಕ್ಕನನ್ನು ನೋಡಲು ಹೋದ ನನ್ನ 2ನೇ ಮಗಳು ರಂಜಿತಾ ಕೂಡ ಆಶ್ರಮಕ್ಕೆ ಹೋಗಲು ಆರಂಭಿಸಿದ್ದಳು ಎಂದು ಅಶೋಕ್ ಕುಮಾರ್ ವಿವರಿಸಿದ್ದಾರೆ.

ನನ್ನ ಇಬ್ಬರು ಮಕ್ಕಳು ಗಂಡಂದಿರಿಗೆ ಡಿವೋರ್ಸ್ ನೀಡಿ, ನಿತ್ಯಾನಂದ ಸ್ವಾಮಿ ಆಶ್ರಮ ಸೇರಿದ್ದಾರೆ. ಇವತ್ತಿಗೂ ಅವರು ಅಲ್ಲೇ ಇದ್ದಾರೆ. ಇದುವರೆಗೆ ನನ್ನ ಇಬ್ಬರೂ ಮಕ್ಕಳು ನನ್ನನ್ನು ಸಂಪರ್ಕಿಸಲಿಲ್ಲ. ನಮ್ಮ 3ನೇ ಮಗಳು ನನ್ನನ್ನು ನೋಡಿಕೊಳ್ಳುತ್ತಿದ್ದಾಳೆ. ಇಬ್ಬರು ಮಕ್ಕಳು ನೆನಪಿನಲ್ಲೇ ನನ್ನ ಪತ್ನಿ ಪ್ರಾಣ ಬಿಟ್ಟಳು ಎಂದು ಅಶೋಕ್ ಕುಮಾರ್ ಭಾವುಕರಾಗಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *