ನಟ ನಾಗಭೂಷಣ್ ಹಿಟ್ ಆ್ಯಂಡ್ ರನ್ ಪ್ರಕರಣ – ಕೊನೆಗೂ ಘಟನೆ ಬಗ್ಗೆ ಮೌನ ಮುರಿದ ನಟ ಹೇಳಿದ್ದೇನು?

ನಟ ನಾಗಭೂಷಣ್ ಹಿಟ್ ಆ್ಯಂಡ್ ರನ್ ಪ್ರಕರಣ – ಕೊನೆಗೂ ಘಟನೆ ಬಗ್ಗೆ ಮೌನ ಮುರಿದ ನಟ ಹೇಳಿದ್ದೇನು?

ನ್ಯೂಸ್ ಆ್ಯರೋ : ಕಾರು ಅಪಘಾತದಿಂದ ಮೃತಪಟ್ಟವರ ಕುಟುಂಬಕ್ಕೆ ಆದ ನೋವಿನ ಅರಿವು ನನಗೆ ಇದೆ. ಅವರ ಕುಟುಂಬದ ಹತ್ತಿರದವರ ಜೊತೆ ಮಾತನಾಡಿದ್ದೇವೆ. ಆ ಕುಟುಂಬಕ್ಕೆ ಏನೇ ಸಹಾಯ ಬೇಕಿದ್ದರೂ ಮಾಡುವುದಾಗಿ ನಟ ನಾಗಭೂಷಣ್ ಹೇಳಿದ್ದಾರೆ.

ಕಾರು ಅಪಘಾತದ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಟ್ ಅಂಡ್ ರನ್ ಅಂತ ಹೇಳಬೇಡಿ. ಅಪಘಾತ ಬಳಿಕ ನಾನೇ ಅವರನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದೇನೆ ಎಂದು ಹೇಳುವಾಗ ಭಾವುಕರಾದರು.

ಆ ಘಟನೆಯನ್ನು ಅರಗಿಸಿಕೊಳ್ಳಲು ನನಗೆ ಇನ್ನೂ ಸಮಯ ಬೇಕು. ಕೋಣನಕುಂಟೆ ಕ್ರಾಸ್ ಬಳಿ ನಡೆದ ಘಟನೆ ಬಳಿಕ ನಾನೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದೆ ಎಂದು ಹೇಳಿದರು.

ಪೊಲೀಸರು ಗಾಯಾಳುಗಳ ಮುಂದೆಯೇ ನನ್ನ ಆಲ್ಕೋಹಾಲ್ ಹಾಗೂ ರಕ್ತ ಪರೀಕ್ಷೆ ಮಾಡಿಸಿದರು. ಅನಂತರ ನಾನು ಆಸ್ಪತ್ರೆಯಿಂದ ನೇರ ಪೊಲೀಸ್ ಠಾಣೆಗೆ ಹೋಗಿ ಜಾಮೀನು ಪಡೆದು ಹೊರಬಂದೆ ಎಂದು ಘಟನೆ ಬಗ್ಗೆ ವಿವರಿಸಿದರು.

ನನ್ನ ತಂದೆ ಕೂಡ ಹಿಟ್ ಅಂಡ್ ರನ್ ಪ್ರಕರಣದಲ್ಲಿ ನಿಧನರಾಗಿದ್ದರು ಎಂದು ನೆನಪಿಸಿಕೊಂಡ ಅವರು, ತಂದೆಯನ್ನು ಸಾಯಿಸಿದ್ದು ಯಾರು ಎಂಬುದು ಇವತ್ತಿಗೂ ಗೊತ್ತಿಲ್ಲ. ಮೃತರ ಕುಟುಂಬದ ಜೊತೆ ನಾನು ಸಂಪರ್ಕದಲ್ಲಿದ್ದು ಯಾವ ಸಹಾಯ ಮಾಡಲು ಸಾಧ್ಯವೋ ಅದನ್ನು ಖಂಡಿತ ಮಾಡುತ್ತೇನೆ. ಈ ಸಮಯದಲ್ಲಿ ಇನ್ನೇನು ಮಾಡಲು ಸಾಧ್ಯ ಎಂದು ಹೇಳಿದರು.

ದಯವಿಟ್ಟು ಅಪಘಾತ ಮಾಡಿದರೆ ಯಾರು ಓಡಿ ಹೋಗಬೇಡಿ ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ನಾಗಭೂಷಣ್ ಜೊತೆ ಅವರ ವಕೀಲರಾದ ದಿಲೀಪ್ ಉಪಸ್ಥಿತರಿದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *