ತಮ್ಮ ಮುದ್ದು ಮಗಳ ಫೋಟೋ ಹಂಚಿಕೊಂಡ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಸದಾನಂದ – ಶೇರ್ ಮಾಡಿದ ಪೋಸ್ಟ್ ನಲ್ಲಿ ಹೇಳಿದ್ದೇನು?

ತಮ್ಮ ಮುದ್ದು ಮಗಳ ಫೋಟೋ ಹಂಚಿಕೊಂಡ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಸದಾನಂದ – ಶೇರ್ ಮಾಡಿದ ಪೋಸ್ಟ್ ನಲ್ಲಿ ಹೇಳಿದ್ದೇನು?

ನ್ಯೂಸ್ ‌ಆ್ಯರೋ‌ : ಕಿರುತೆರೆಯಲ್ಲಿ ಹಲವಾರು ಸೂಪರ್ ಹಿಟ್ ರಿಯಾಲಿಟಿ ಶೋಗಳನ್ನು ನೀಡಿರುವ ಝೀ ಕನ್ನಡದ ಪ್ರಸಿದ್ದ ಶೋಗಳಲ್ಲಿ ಒಂದಾದ ಸೂಪರ್ ಹಿಟ್ ‘ಕಾಮಿಡಿ ಕಿಲಾಡಿಯ ನಟ ಸದಾನಂದ ವರ್ಷದ ಹಿಂದೆಯಷ್ಟೇ ಸಪ್ತಪದಿ ತುಳಿದಿದ್ದರು. ಈ ಶೋ ಮೂಲಕ ಹೆಸರುಗಳಿಸಿದಿದ್ದ, ನಟ ಸದಾನಂದ ಮದುವೆಯ ಫೋಟೋಗಳ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು.

ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕು ಸುಲ್ತಾನ್ಪುರ ಗ್ರಾಮದ ಸದಾನಂದ, ಜೀ ಕನ್ನಡದ ಕಾಮಿಡಿ ಕಿಲಾಡಿಗಳು ಶೋ ಮೂಲಕ ಜನರನ್ನು ರಂಜಿಸಿ ಮನೆಮಾತಾಗಿದ್ದರು.

ವಿಶೇಷ ಎಂದರೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕೆಲವೇ ತಿಂಗಳಲ್ಲಿ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದ ಈ ದಂಪತಿ ತಾವು ಪೋಷಕರಾಗಿ ಬಡ್ತಿ ಪಡೆಯಲ್ಲಿದ್ದೇವೆ ಎಂಬ ಖುಷಿ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಇದೀಗ ತಮ್ಮ ಮುದ್ದು ಮಗಳ ಫೋಟೋ ಹಂಚಿಕೊಳ್ಳುವ ಮೂಲಕ ಸುದ್ದಿಯಲ್ಲಿರುವ ಸದಾ, ಕೊನೆಗೂ ತಮ್ಮ ಫ್ಯಾನ್ಸ್ ಗಳಿಗೆ ತಮ್ಮ ಪುಟ್ಟದೇವತೆ ದರ್ಶನ ಮಾಡಿಸಿದ್ದಾರೆ.

ಹೌದು.. ಇತ್ತೀಚೆಗೆ ಧಾರಾವಾಡದಲ್ಲಿ ಮಗಳ ನಾಮಕರಣ ಶಾಸ್ತ್ರ ಮಾಡಿದ್ದು, ‘ನನ್ನ ಮಗಳು ನಾಮಕರಣವಾಯಿತು ಅದ್ವಿಕಾ ಅಂತ ಹೆಸರಿಟ್ಟಿದ್ದೀವಿ ನಿಮ್ಮೆಲ್ಲರ ಆಶೀರ್ವಾದ ಈ ಕಂದನ ಮೇಲಿರಲಿ’ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ತಮ್ಮ ವೈವಾಹಿಕ ಜೀವನದ ಬಗ್ಗೆಯೂ ಹೇಳಿಕೊಂಡಿರುವ ಸದಾ, ತಮ್ಮ ಮನದ ಒಡತಿಯ ಗುಣಗಾನ ಮಾಡಿದ್ದು, ‘ನಿಜವಾದ ಪ್ರೀತಿ ಗೆಲುತ್ತದೆ ಅನ್ನುವುದಕ್ಕೆ ನಾವೇ ಸಾಕ್ಷಿ. ನಮ್ಮಿಬ್ಬರ ಪ್ರೀತಿಗೆ ಸಾಕ್ಷಿಯಾಗಿ ಮತ್ತಷ್ಟು ಸಂತೋಷ ಕೊಡಲು ಮಗಳು ಅದ್ವಿಕಾ ಬಂದಿದ್ದಾಳೆ’ ಎಂದು ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

ಇವರಿಬ್ಬರ ಪ್ರಪಂಚಕ್ಕೆ ಪುಟ್ಟ ದೇವತೆಯು ಸೇರಿಕೊಂಡಿದ್ದು, ನಿಮ್ಮ ಕುಟುಂಬ ಹೀಗೆ ಸಂತೋಷದಿಂದ ಕೂಡಿ ಬಾಳಲಿ ಎಂದು ಸದಾ ಅವರ ಅಭಿಮಾನಿಗಳು ಹಾರೈಸಿದ್ದಾರೆ. ಇನ್ನು ನಟ ಸದಾನಂದ ಬಹಳ ಸರಳವಾಗಿ ದೇವಸ್ಥಾನದಲ್ಲಿ ವಿವಾಹವಾಗಿದ್ದು, ಕೇವಲ ಕೆಲ ಸ್ನೇಹಿತರು ಮತ್ತು ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ಮಾಡಿಕೊಂಡಿದ್ದರು.

ಅಭಿಮಾನಿಗಳು ನೆಚ್ಚಿನ ನಟನಿಗೆ ಹೊಸ ಜೀವನದ ಶುಭಾಷಯ ಕೋರಿದ್ದರು. ತಮ್ಮ ಅದ್ಭುತ ನಟನೆಯಿಂದ ಗಮನ ಸೆಳೆದಿದ್ದ ನಟ ಸದಾನಂದ ಹಲವಾರು ಸೀರಿಯಲ್ ಮತ್ತು 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದು, ಮತ್ತಷ್ಟು ಚಿತ್ರಗಳಲ್ಲಿ ನಟಿಸುವ ಆಸೆ ಹೊಂದಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *