Upendra Controversy : ಎಫ್ಐಆರ್ ರದ್ದು ಮಾಡುವಂತೆ ಹೈಕೋರ್ಟ್ ಗೆ ಮೊರೆ ಇಟ್ಟ ನಟ ಉಪೇಂದ್ರ – ರದ್ದು ಕೋರಲು ನೀಡಿದ ಕಾರಣಗಳೇನು ಗೊತ್ತಾ?
- ಮನರಂಜನೆ
- August 14, 2023
- No Comment
- 149
ನ್ಯೂಸ್ ಆ್ಯರೋ : ನಟ ಉಪೇಂದ್ರ ವಿರುದ್ಧ ಜಾತಿನಿಂದಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದು, ಮಧ್ಯಂತರ ತಡೆಯಾಜ್ಞೆ ನೀಡಿ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.
ಯಾವುದೇ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಒಳ್ಳೆಯದನ್ನು ಮಾಡುವಾಗಲೂ ಟೀಕಿಸುವವರು ಇದ್ದೇ ಇರುತ್ತಾರೆ. ಈ ಮಾತಿಗೆ ಪೂರಕವಾಗಿ ಮಾತ್ರವೇ ಗಾದೆ ಬಳಸಲಾಗಿದೆ.
ಆಕ್ಷೇಪ ವ್ಯಕ್ತವಾದ ಕೂಡಲೇ ಡಿಲೀಟ್ ಮಾಡಿ ಕ್ಷಮೆ ಕೋರಿದ್ದೇನೆ. ಹಳೆಯ ಗಾದೆ ಮಾತನ್ನು ಉಲ್ಲೇಖಿಸಿದ್ದು ಜಾತಿನಿಂದನೆಯಲ್ಲ. ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧ ಎಸಗಿಲ್ಲ.
ಸಮಾಜದಲ್ಲಿನ ತಾರತಮ್ಯದ ವಿರುದ್ಧ ನಾನು ಹೋರಾಡುತ್ತಿದ್ದೇನೆ’ ಎಂದು ಉಪೇಂದ್ರ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಹಳೆಯ ಗಾದೆ ಮಾತನ್ನು ಉಲ್ಲೇಖಿಸಿದ್ದು ಜಾತಿ ನಿಂದನೆ ಅಲ್ಲ. ಪ್ರಚಾರ ಪಡೆಯಲೆಂದು ಉಪೇಂದ್ರ ವಿರುದ್ಧ ದೂರು ದಾಖಲಿಸಿದ್ದಾರೆ. ವಾಟ್ಸಪ್ ಮೂಲಕ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ FIR ರದ್ದು ಕೋರಿ ಮನವಿ ಮಾಡಿದ್ದಾರೆ.
ಇದಕ್ಕೂ ಮುಂಚೆ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಿಂದ ದೂರುದಾರರ ಸಮ್ಮುಖದಲ್ಲಿ ಉಪೇಂದ್ರ ಅವರ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದರು.