ನನಗೂ ಆಫರ್ ನೀಡಿ ದೈಹಿಕವಾಗಿ ಸಹಕರಿಸಿ ಎಂದಿದ್ದರು – ಕಾಸ್ಟಿಂಗ್ ಕೌಚ್ ಕರಾಳ ಅನುಭವ ಬಿಚ್ಚಿಟ್ಟ ನಟಿ ನಯನತಾರಾ..!!

ನನಗೂ ಆಫರ್ ನೀಡಿ ದೈಹಿಕವಾಗಿ ಸಹಕರಿಸಿ ಎಂದಿದ್ದರು – ಕಾಸ್ಟಿಂಗ್ ಕೌಚ್ ಕರಾಳ ಅನುಭವ ಬಿಚ್ಚಿಟ್ಟ ನಟಿ ನಯನತಾರಾ..!!

ನ್ಯೂಸ್‌ ಆ್ಯರೋ : ವೃತ್ತಿ ಜೀವನದ ಆರಂಭದಲ್ಲಿ ಲೇಡಿ ಸೂಪರ್ ಸ್ಟಾರ್‌ ನಯನತಾರಾ ಅನುಭವಿಸಿದ ಕರಾಳ ಕಾಸ್ಟಿಂಗ್‌ ಕೌಚ್ ಬಗ್ಗೆ ಹಂಚಿಕೊಂಡಿದ್ದಾರೆ.

ನಿರ್ದೇಶಕರೊಬ್ಬರು ದೊಡ್ಡ ಚಲನಚಿತ್ರವೊಂದಕ್ಕೆ ಆಫರ್ ನೀಡಿ, ದೈಹಿಕವಾಗಿ ಸಹಕರಿಸುವಂತೆ ಹೇಳಿಕೊಂಡಿದ್ದರು. ನನ್ನ ನಟನಾ ಸಾಮರ್ಥ್ಯದ ಮೇಲೆ ನನಗೆ ವಿಶ್ವಾಸವಿದೆ. ಚಿತ್ರದಲ್ಲಿ ಪ್ರಮುಖ ಪಾತ್ರ ನೀಡುವುದಾಗಿ ಹೇಳಿ ಬೇರೆ ರೀತಿ ನನ್ನಿಂದ ಏನನ್ನೂ ನಿರೀಕ್ಷಿಸಬೇಡಿ ಅಂತ ಮುಖದ ಮೇಲೆ ಅವರಿಗೆ ಹೇಳಿದ್ದೇನೆ ಎಂದು ಕರಾಳ ದಿನದ ಬಗ್ಗೆ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.

ತಮ್ಮ ಅಮೋಘ ನಟನೆಯ ಮೂಲಕ ಮಲಯಾಳಂ ಚಿತ್ರರಂಗದಿಂದ ನಾಯಕಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ನಯನತಾರಾ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಇಂದು ನಂಬರ್‌ ವನ್ ನಾಯಕಿಯಾಗಿ ಮಿಂಚುತ್ತಿದ್ದಾರೆ.

ಸದ್ಯ ʼಜವಾನ್ʼ ಚಿತ್ರದ ಮೂಲಕ ಬಾಲಿವುಡ್‌ನಲ್ಲಿ ಶಕ್ತಿ ಪ್ರದರ್ಶನ ತೋರಲು ಮುಂದಾಗಿದ್ದಾರೆ. ಈ ಚಿತ್ರದಲ್ಲಿ ನಯನತಾರಾ ಶಾರುಖ್ ಖಾನ್ ಜೊತೆಗೆ ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ, ಪ್ರಿಯಾಮಣಿ, ಸೋನಿಯಾ ಮಲ್ಹೋತ್ರಾ ಮತ್ತು ಸುನಿಲ್ ಗ್ರೋವರ್ ಪ್ರಮುಖ ಪಾತ್ರಗಳನ್ನು ಕಾಣಿಸಿಕೊಳ್ಳಲಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ನಯನತಾರಾ ನಟನೆಯ ‘ಕನೆಕ್ಟ್ʼ ಚಿತ್ರ ಬಿಡುಗಡೆಯಾಗಿತ್ತು. ಆದರೆ ಹಾರರ್ ಥ್ರಿಲ್ಲರ್ ಸಿನಿಮಾ ಕತೆ ಜನರಿಗೆ ಅಷ್ಟೆನೂ ಇಷ್ಟವಾಗಿರಲಿಲ್ಲ.

ಕಳೆದ ವರ್ಷ ನಯನತಾರಾ ಅವರು ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ಮದುವೆಯಾಗಿದ್ದರು. ಈಚೆಗೆ ಅವಳಿ ಮಕ್ಕಳ ತಾಯಿಯಾಗಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *