ನಟಿ ರಾಧಿಕಾ ಕುಮಾರಸ್ವಾಮಿ ಸಹೋದರ ಚಂದನವನಕ್ಕೆ ಎಂಟ್ರಿ – ಏನಿದು ಸೆನ್ಸೇಷನಲ್ ನ್ಯೂಸ್?
- ಮನರಂಜನೆ
- October 10, 2023
- No Comment
- 110
ನ್ಯೂಸ್ ಆ್ಯರೋ : ಸ್ಯಾಂಡಲ್ವುಡ್ನ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಅವರ ಸಹೋದರ ರವಿರಾಜ್ ಚಂದನವನಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ನಟನೆಯೊಂದಿಗೆ ನಿರ್ಮಾಣದಲ್ಲೂ ಗುರುತಿಸಿಕೊಂಡಿರುವ ರಾಧಿಕಾ ತಮ್ಮ ಶಮಿಕಾ ಎಂಟರ್ ಪ್ರೈಸಸ್ ಮೂಲಕ ಈಗಾಗಲೇ ಮೂರು ಚಿತ್ರಗಳನ್ನು ನಿರ್ಮಿಸಿದ್ದಾರೆ. ಈಗ ಅವರ ಸಹೋದರ ರವಿರಾಜ್ ನಿರ್ಮಾಪಕರಾಗಿ ಚಂದನವನಕ್ಕೆ ಬರಲು ಸಿದ್ಧತೆ ನಡೆಸಿದ್ದಾರೆ.
ರವಿರಾಜ್ ಅವರಿಗೆ ಚಿತ್ರರಂಗ ಹೊಸದಲ್ಲ. ಈಗಾಗಲೇ ಅವರು ಸಹ ನಿರ್ಮಾಪಕರಾಗಿ ಲಕ್ಕಿ, ಸ್ವೀಟಿ ನನ್ನ ಜೋಡಿ, ಭೈರಾದೇವಿ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಿನೆಮಾ ವಿತರಣೆ ವಿಭಾಗದಲ್ಲೂ ದುಡಿದಿರುವ ಅನುಭವ ಅವರಿಗೆ ಇದೆ.
ಅವರು ಈ ಬಾರಿ ಮಾತ್ರ ಸ್ವತಂತ್ರ ನಿರ್ಮಾಪಕರಾಗಿ ಸ್ಯಾಂಡಲ್ ವುಡ್ ಗೆ ಕಾಲಿಟ್ಟಿದ್ದಾರೆ. ಶ್ರೀ ದುರ್ಗಾಪರಮೇಶ್ವರಿ ಪ್ರೊಡಕ್ಷನ್’ ಎಂಬ ಹೆಸರಿನ ನಿರ್ಮಾಣ ಸಂಸ್ಥೆಯನ್ನು ಕಟ್ಟಿದ್ದಾರೆ. ಇದರಲ್ಲಿ ಈಗಾಗಲೇ ಮೊದಲ ಸಿನೆಮಾದ ಚಿತ್ರೀಕರಣವನ್ನೂ ಮುಗಿಸಿದ್ದಾರೆ.
‘ಶ್ರೀ ದುರ್ಗಾಪರಮೇಶ್ವರಿ ಪ್ರೊಡಕ್ಷನ್’ ಎಂಬುದು ಅವರ ತಂದೆಯ ಕನಸಿನ ಬ್ಯಾನರ್. ಅಪ್ಪನ ಕನಸನ್ನು ನನಸು ಮಾಡಲು ರವಿರಾಜ್ ಹೆಜ್ಜೆ ಇಟ್ಟಿದ್ದಾರೆ. ಈ ಬ್ಯಾನರ್ ನಡಿಯಲ್ಲಿ ಮೊದಲ ಹಾರರ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.
ಈ ಚಿತ್ರದಲ್ಲಿ ದೊಡ್ಡದೊಡ್ಡ ಸ್ಟಾರ್ ನಟರು ಕಾಣಿಸಿಕೊಂಡಿದ್ದು, ಸದ್ಯ ಎಲ್ಲವನ್ನೂ ಗೌಪ್ಯವಾಗಿ ಇಟ್ಟಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ಇವರ ಈ ಚಿತ್ರ ಶೀಘ್ರದಲ್ಲೇ ತೆರೆ ಮೇಲೆ ಬರಲಿದೆ. ಈ ಕುರಿತು ರವಿರಾಜ್ ಸದ್ಯದಲ್ಲೇ ಅಭಿಮಾನಿಗಳ ಮುಂದೆ ಬರಲಿದ್ದಾರೆ ಎನ್ನಲಾಗಿದೆ.