ಕರಿಕೋಟು ಧರಿಸಿದ ನಟಿ ವೈಷ್ಣವಿ ಗೌಡ ತಾಯಿ – ಭಾನು ರವಿಕುಮಾರ್‌ ಸಾಧನೆಗೆ ಪ್ರೀತಿಯ ಮಗಳ ಮೆಚ್ಚುಗೆ

ಕರಿಕೋಟು ಧರಿಸಿದ ನಟಿ ವೈಷ್ಣವಿ ಗೌಡ ತಾಯಿ – ಭಾನು ರವಿಕುಮಾರ್‌ ಸಾಧನೆಗೆ ಪ್ರೀತಿಯ ಮಗಳ ಮೆಚ್ಚುಗೆ

ನ್ಯೂಸ್‌ ಆ್ಯರೋ : ಧಾರಾವಾಹಿ ನಟಿ ವೈಷ್ಣವಿ ಗೌಡ ಅವರ ತಾಯಿ ಭಾನು ರವಿಕುಮಾರ್ ಅವರು ವಕೀಲರಾಗಿ ಬಡ್ತಿ ಪಡೆಯುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈಷ್ಣವಿ ಅವರು ಈ ವಿಚಾರವನ್ನು ಹಂಚಿಕೊಂಡು, ತಾಯಿಯ ಸಾಧನೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ತಾಯಿ ಜತೆ ನಿಂತುಕೊಂಡಿರುವ ಫೋಟೋವನ್ನು ವೈಷ್ಣವಿ ಹಂಚಿಕೊಂಡಿದ್ದಾರೆ. ಅದರಲ್ಲಿ “ಮನೆಯಲ್ಲೀಗ ವಕೀಲರು. ನೀವು ಯಾವಾಗಲೂ ವಯಸ್ಸು ಕೇವಲ ನಂಬರ್ ಎಂದು ಕಲಿಸಿದ್ದೀರಿ. ಈ ವಯಸ್ಸಿನಲ್ಲಿ ನೀವು ಏನು ಸಾಧನೆ ಮಾಡಿದ್ದೀರೋ ನಾನು ಹೆಮ್ಮೆ ಪಡುವೆ” ಎಂದು ಬರೆದುಕೊಂಡಿದ್ದಾರೆ. ಪೋಸ್ಟ್ ನೋಡಿದ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರ ತಾಯಿ ಭಾನು ರವಿಕುಮಾರ್ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಈ ಹಿಂದೆ ತಾಯಿ ಬಗ್ಗೆ ಮಾತನಾಡಿದ್ದ ವೈಷ್ಣವಿ ಗೌಡ ಅವರು, “ನನ್ನ ತಾಯಿ ಯೋಗ ಮಾಡಿ ತೂಕ ಇಳಿಸಿಕೊಂಡಿದ್ದಾರೆ” ಎಂದು ಹೇಳಿದ್ದರು.

ಈ ಹಿಂದೆ ವೈಷ್ಣವಿ ಗೌಡ ಅವರ ಮದುವೆ ವಿಚಾರ ಸುದ್ದಿಯಾಗಿತ್ತು. ಆದಾದ ಕೆಲ ದಿನಗಳ ನಂತರ ಅವೆಲ್ಲವನ್ನೂ ಮರೆತು ತಮ್ಮ ಯೂಟ್ಯೂಬ್‌ ಚಾನೆಲ್‌ ಅನ್ನು ಮುನ್ನಡೆಸುತ್ತಾ ಹೋಗುತ್ತಿದ್ದಾರೆ. ಇದೀಗ ಹೊಸ ಧಾರವಾಹಿಯ ಚಿತ್ರೀಕರಣದಲ್ಲೂ ಬ್ಯುಸಿಯಾಗಿದ್ದಾರೆ.

ಅಂದಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 8 ಶೋ ಮೂಲಕ ಜನರ ಮನಸ್ಸು ಗೆದ್ದಿದ್ದ ವೈಷ್ಣವಿ ಗೌಡ ಅವರು ಈಗ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ‘ಸೀತಾ ರಾಮಂ’ ಧಾರಾವಾಹಿಯಲ್ಲಿ ನಾಯಕಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸೀರಿಯಲ್‌ನಲ್ಲಿ ಗಗನ್ ಚಿನ್ನಪ್ಪ ನಾಯಕನಾಗಿ ನಟಿಸುತ್ತಿದ್ದಾರೆ. ಈಗಾಗಲೇ ಧಾರಾವಾಹಿ ಪ್ರೋಮೋಗಳು ಗಮನ ಸೆಳೆದಿದ್ದು ಆದಷ್ಟು ಬೇಗ ಸೀರಿಯಲ್ ಪ್ರಸಾರ ಆಗಲಿವೆಯಂತೆ.

ಕೆಲವು ದಿನಗಳ ಹಿಂದೆ ವೈಷ್ಣವಿ ಗೌಡ ಅವರು ಕೈಮೇಲೆ ‘ದಿ ರೈಸಿಂಗ್ ವುಮನ್ ಚಿಹ್ನೆ’ಯನ್ನು ಟ್ಯಾಟೂ ಹಾಕಿಸಿಕೊಂಡು, ತಾಯಿ ಕೈಯಿಂದ ಬೈಸಿಕೊಂಡಿದ್ದರು. ತಾಯಿಗೆ ಸರ್ಪ್ರೈಸ್‌ ನೀಡುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಟ್ಯಾಟೂ “ಸ್ವಲ್ಪವೂ ಚೆನ್ನಾಗಿಲ್ಲ” ಎಂದು ಭಾನು ಅವರು ಹೇಳಿದ್ದರು.

Related post

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ನ್ಯೂಸ್ ಆ್ಯರೋ‌ : ನಾವು ಪ್ರೀತಿಸುವ ಜೀವಗಳು ನಮ್ಮನ್ನು ದೂರ ಮಾಡಿದರೆ, ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ಅದರಿಂದಾಗುವ ನೋವು ಅಪಾರ. ಅದರಲ್ಲೂ ಪ್ರೇಯಸಿ ದೂರ ಮಾಡುತ್ತಿದ್ದರೆ ಅದನ್ನು ಸಹಿಸಲು…
ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ – ಸಿಸಿಟಿವಿಯಲ್ಲಿ ಘೋರ ಕೃತ್ಯ ಸೆರೆ, ವಿಡಿಯೋ ವೈರಲ್…!!

ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ…

ನ್ಯೂಸ್ ಆ್ಯರೋ : ಮಲಗುವ ವಿಚಾರಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ಸೂರತ್‌ನ ವ್ಯಕ್ತಿಯೊಬ್ಬ ತನ್ನ ಮಗಳಿಗೆ 25 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಇಡೀ ಕೃತ್ಯ ಸಿಸಿಟಿವಿಯಲ್ಲಿ…
ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ ಕಾರಣಿಕದಿಂದಾಗಿಯೇ ಇಲ್ಲಿಗೆ ಬಂದೆ ಎಂದ ಗುಳಿಕೆನ್ನೆ ಬೆಡಗಿ..

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ…

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಬೆಡಗಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಬುಧವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ…

Leave a Reply

Your email address will not be published. Required fields are marked *