ನಟಿ ಆಕಾಂಕ್ಷಾ ದುಬೆ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ – ಒಳ ಉಡುಪಿನಲ್ಲಿ ವೀರ್ಯ ಪತ್ತೆ, ನಿಜವಾಗುತ್ತಾ ಅನುಮಾನ?

ನಟಿ ಆಕಾಂಕ್ಷಾ ದುಬೆ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ – ಒಳ ಉಡುಪಿನಲ್ಲಿ ವೀರ್ಯ ಪತ್ತೆ, ನಿಜವಾಗುತ್ತಾ ಅನುಮಾನ?

ನ್ಯೂಸ್ ಆ್ಯರೋ‌ : ಭೋಜ್‌ ಪುರಿ ನಟಿ ಆಕಾಂಕ್ಷಾ ದುಬೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಯುತ್ತಿದ್ದು, ಮಹತ್ವದ ಸುಳಿವು ಪೊಲೀಸರಿಗೆ ಸಿಕ್ಕಿದೆ. ನಟಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ನಟಿಯ ಮರಣೋತ್ತರ ಪರೀಕ್ಷೆಯ ವರದಿ ಹೊರಬಿದ್ದಿತ್ತು. ಆಕೆಯ ಹೊಟ್ಟೆಯಲ್ಲಿ ಆಹಾರ ಇರಲಿಲ್ಲ. ಮತ್ತು ಮದ್ಯದ ಯಾವುದೇ ಅಂಶಗಳು ಹೊಟ್ಟೆಯಲ್ಲಿ ಕಂಡುಬಂದಿರಲಿಲ್ಲ. ಆದರೆ ಅಪರಿಚಿತ ಕಂದು ದ್ರವ 20ml ನಷ್ಟು ಇತ್ತು ಎಂದು ವರದಿಯಲ್ಲಿ ಗೊತ್ತಾಗಿತ್ತು.

ಮಾ. 26 ರಂದು ಸಿನಿಮಾದ ಶೂಟಿಂಗ್‌ ಗಾಗಿ ವಾರಣಾಸಿಯ ಖಾಸಗಿ ಹೊಟೇಲ್‌ ನಲ್ಲಿ ತಂಗಿದ್ದ ಆಕಾಂಕ್ಷಾ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಸಂಬಂಧ ಭೋಜ್‌ ಪುರಿ ಗಾಯಕ ಸಮರ್ ಸಿಂಗ್, ಅವರ ಸಹೋದರ ಸಂಜಯ್ ಸಿಂಗ್, ಸಂದೀಪ್ ಸಿಂಗ್ ಮತ್ತು ಅರುಣ್ ಪಾಂಡೆ ಅವರನ್ನು ಬಂಧಿಸಲಾಗಿತ್ತು.

ಸಾವನ್ನಪ್ಪಿದ ದಿನ ಆಕಾಂಕ್ಷಾ ಧರಿಸಿದ್ದ ಉಡುಗೆಯನ್ನು ಪರೀಕ್ಷೆ ಮಾಡಲಾಗಿದ್ದು, ಇದರಲ್ಲಿ ವೀರ್ಯ ಪತ್ತೆಯಾಗಿರುವುದು ಮಹತ್ವದ ಸುಳಿವು ಎಂದು ಪೊಲೀಸರು ಹೇಳಿದ್ದಾರೆ. ಹೆಚ್ಚಿನ ಪರೀಕ್ಷೆಗಳಿಗಾಗಿ ಇದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ವರುಣಾ ವಲಯದ ಡಿಸಿಪಿ ಅಮಿತ್ ಕುಮಾರ್ ತಿಳಿಸಿದ್ದಾರೆ. ಆರೋಪಿಗಳಾದ ಸಮರ್ ಸಿಂಗ್, ಸಂಜಯ್ ಸಿಂಗ್, ಸಂದೀಪ್ ಸಿಂಗ್ ಮತ್ತು ಅರುಣ್ ಪಾಂಡೆ ಅವರ ಮಾದರಿಗಳನ್ನು ಡಿಎನ್‌ಎ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು “ಸಂಶಯಾಸ್ಪದವಾಗಿ ವರ್ತಿಸುತ್ತಿದ್ದಾರೆ” ಎಂಬ ಆರೋಪವೂ ಕೇಳಿ ಬಂದಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *