ಒಂದು ಚಿತ್ರದಿಂದಲೇ 1800 ಕೋಟಿ ಗಳಿಸಿದ್ದ ನಟ ಸದ್ಯ ಪ್ಲಾಪ್ ಸ್ಟಾರ್..! – ಆರು ವರ್ಷಗಳಲ್ಲಿ ಒಂದೇ ಒಂದು ಹಿಟ್ ಚಿತ್ರ ಕೊಟ್ಟಿಲ್ಲ..!

ಒಂದು ಚಿತ್ರದಿಂದಲೇ 1800 ಕೋಟಿ ಗಳಿಸಿದ್ದ ನಟ ಸದ್ಯ ಪ್ಲಾಪ್ ಸ್ಟಾರ್..! – ಆರು ವರ್ಷಗಳಲ್ಲಿ ಒಂದೇ ಒಂದು ಹಿಟ್ ಚಿತ್ರ ಕೊಟ್ಟಿಲ್ಲ..!

ನ್ಯೂಸ್ ಆ್ಯರೋ : ವಿಶ್ವದಾದ್ಯಂತ ದಕ್ಷಿಣ ಭಾರತದ ಚಿತ್ರರಂಗದ ಬಗ್ಗೆ ಗಮನ ಸೆಳೆಯುವಂತೆ ಮಾಡಿದ್ದು ಆ ಒಂದು ಚಿತ್ರ. ಆ ಚಿತ್ರದಿಂದಲೇ ನಟ ಬರೋಬ್ಬರಿ 1800 ಕೋಟಿ ಗಳಿಸಿದ್ದರು. ಆ ಸಿನಿಮಾ ಬ್ಲಾಕ್ ಬಸ್ಟರ್ ಆದರೂ ಬಳಿಕ ಆರು ವರ್ಷದಿಂದ ಆ ನಟನಿಗೆ ಒಂದೇ ಒಂದು ಹಿಟ್ ಸಿನಿಮಾ ನೀಡಲು ಸಾಧ್ಯವಾಗಲಿಲ್ಲ.

ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಆ ನಟ ಬೇರಾರೂ ಅಲ್ಲ. ಬಾಹುಬಲಿಯಾಗಿ ಎಲ್ಲರ ಮನ ಗೆದ್ದ ಪ್ರಭಾಸ್‌.

ಬಾಹುಬಲಿ ಚಿತ್ರದ ಯಶಸ್ಸಿನ ಬಳಿಕ ಕಳೆದ ಆರು ವರ್ಷಗಳಲ್ಲಿ ಪ್ರಭಾಸ್ ಅವರ ಯಾವುದೇ ಸಿನಿಮಾ ಹಿಟ್ ಆಗಿಲ್ಲ. ಉಪ್ಪಲಪತಿ ವೆಂಕಟ ಸೂರ್ಯನಾರಾಯಣ ಪ್ರಭಾಸ್ ರಾಜು ಅವರು ತೆಲುಗು ಚಿತ್ರ ರಂಗದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಭಾರತದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾದ ಇವರು 2015 ರಿಂದ ಫೋರ್ಬ್ಸ್ ಇಂಡಿಯಾ ಸೆಲೆಬ್ರಿಟಿ 100 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

2002 ರಲ್ಲಿ ಈಶ್ವರ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಪಡೆದ ಇವರ ಎರಡನೇ ಚಿತ್ರ ‘ರಾಘವೇಂದ್ರ’ ಬಾಕ್ಸ್ ಆಫೀಸ್‌ನಲ್ಲಿ ಸೋತಿತು. ಸಾಹಸ ಪ್ರಣಯ ವರ್ಷಮ್ (2004) ಚಿತ್ರದ ಮೂಲಕ ಯಶಸ್ಸು ಪಡೆದ 2015ರಲ್ಲಿ ‘ಬಾಹುಬಲಿ: ದಿ ಬಿಗಿನಿಂಗ್’ ಅನ್ನು ಮಾಡಿದರು. ಇದು ಸಾರ್ವಕಾಲಿಕ ದಾಖಲೆ ನಿರ್ಮಿಸಿತ್ತು. ಅತೀ ಹೆಚ್ಚು ಗಳಿಕೆಯ ಹದಿಮೂರನೇ ಭಾರತೀಯ ಚಲನಚಿತ್ರವಾಗಿ ಗುರುತಿಸಿಕೊಂಡಿತು.

ಇನ್ನು ಬಾಹುಬಲಿ 2: ದಿ ಕನ್‌ಕ್ಲೂಷನ್ (2017) ಸಾರ್ವಕಾಲಿಕವಾಗಿ ಎರಡನೇ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಗುರುತಿಸಿಕೊಂಡಿತು.

ಇದರ ಯಶಸ್ಸಿನ ಬಳಿಕ ಪ್ರಭಾಸ್ ಕಳೆದ ಆರು ವರ್ಷಗಳಿಂದ ಒಂದೇ ಒಂದು ಹಿಟ್ ಚಿತ್ರವನ್ನು ಕೊಟ್ಟಿಲ್ಲ. ಆದಿಪುರುಷ, ರಾಧೆ ಶ್ಯಾಮ್, ಸಾಹೋ.. ಹೀಗೆ ಸಾಲುಸಾಲು ಪ್ಲಾಪ್ ಸಿನಿಮಾಗಳೇ ಸೂಪರ್ ಸ್ಟಾರ್ ನ ಪಟ್ಟಿಯಲ್ಲಿದೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *