ಕಾಂತಾರ–2 ಸಿನಿಮಾಕ್ಕೆ ಖಾವಂದರ ಅನುಮತಿಗೆ ಸೂಚಿಸಿದ ಅಣ್ಣಪ್ಪ ಪಂಜುರ್ಲಿ– ನೂರು ಬಾರಿ ಯೋಚನೆ ಮಾಡಿ ಹೆಜ್ಜೆಯಿಡಲು ಅಭಯ

ಕಾಂತಾರ–2 ಸಿನಿಮಾಕ್ಕೆ ಖಾವಂದರ ಅನುಮತಿಗೆ ಸೂಚಿಸಿದ ಅಣ್ಣಪ್ಪ ಪಂಜುರ್ಲಿ– ನೂರು ಬಾರಿ ಯೋಚನೆ ಮಾಡಿ ಹೆಜ್ಜೆಯಿಡಲು ಅಭಯ

ನ್ಯೂಸ್‌ ಆ್ಯರೋ: ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿದೆ. ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ಜನಮೆಚ್ಚುಗೆ ಗಳಿಸಿದೆ. ಕಾಂತಾರ ಸಿನಿಮಾ ನೋಡಿದ ಬಹುತೇಕ ನಟ– ನಟಿಯರು ಚಿತ್ರವನ್ನು ಹಾಡಿಹೊಗಲಿದ್ದರು. ಕೇವಲ 15 ಕೋಟಿ ಬಜೆಟ್‌ನ ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲೂ ₹ 400 ಕೋಟಿಗೂ ಅಧಿಕ ಗಳಿಕೆ ಮಾಡಿತ್ತು.

ಕಾಂತಾರ ಸಿನಿಮಾ ಯಶಸ್ಸಿನ ಬಳಿಕ ರಿಷಭ್‌ ಶೆಟ್ಟಿ ತಂಡವು ಕಾಂತಾರ–2 ಮಾಡುತ್ತದೆ ಎಂಬ ಮಾತು ಕೇಳಿಬಂದಿತ್ತು. ಅದಕ್ಕೆ ಪೂರಕವೆಂಬಂತೆ ರಿಷಭ್‌ ಶೆಟ್ಟಿ ಅವರು ಇತ್ತೀಚೆಗೆ ಮಂಗಳೂರಿನ ಪಚ್ಚನಾಡಿಯಲ್ಲಿ ನಡೆದ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದರು.

ಕಾಂತಾರ– 2 ಬಗ್ಗೆ ರಿಷಭ್‌ ಶೆಟ್ಟಿ ಅವರು ದೈವದ ಮುಂದೆ ಪ್ರಶ್ನೆಯಿಟ್ಟಿದ್ದರು. ಈ ವೇಳೆ ದೈವವು ಚಿತ್ರ ತಂಡಕ್ಕೆ ಹಲವು ಷರತ್ತಿನೊಂದಿಗೆ ಅಭಯ ನೀಡಿದೆ.
ಮೊದಲು ಚಿತ್ರ ಮಾಡುವಾಗ ಹತ್ತು ಬಾರಿ ಯೋಚನೆ ಮಾಡಿದ್ದೀರಿ, ಈ ಬಾರಿ ಮಾತ್ರ ನೂರು ಬಾರಿ ಯೋಚನೆ ಮಾಡಿ ಹೆಜ್ಜೆ ಇಡಬೇಕು. ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಅನುಮತಿ ಪಡೆಯಲು ದೈವ ಸೂಚನೆ ನೀಡಿದೆ.

ದೈವದ ಅಭಯ ಕುರಿತಂತೆ ದೈವ ನರ್ತಕ ಉಮೇಶ್ ಮಾಧ್ಯಮದವರ ಜತೆ ಮಾಹಿತಿ ಹಂಚಿಕೊಂಡಿದ್ದಾರೆ. ಕಾಂತಾರ–2 ಸಿನಿಮಾ ಮಾಡುವ ಬಗ್ಗೆ ರಿಷಭ್‌ ಶೆಟ್ಟಿ ಅವರು ದೈವದ ಅಪ್ಪಣೆ ಕೇಳಿದ್ದರು. ಈ ವೇಳೆ ಮೊದಲು ಧರ್ಮಸ್ಥಳ ಮಂಜುನಾಥೇಶ್ವರನ ಅನುಮತಿ ಕೇಳಲು ದೈವ ತಿಳಿಸಿದೆ. ಜೊತೆಗೆ ಕಾಂತಾರದಲ್ಲಿ ಕೆಲಸ ಮಾಡಿದ ಅದೇ ತಂಡದೊಂದಿಗೆ ಅಷ್ಟೇ ಶುದ್ಧಾಚಾರದಿಂದ ಮುಂದುವರಿಯಲು ಅಣ್ಣಪ್ಪ ಪಂಜುರ್ಲಿ ದೈವದ ನುಡಿಯಲ್ಲಿ ಬಂದಿದೆ ಎಂದು ಉಮೇಶ್ ತಿಳಿಸಿದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *