‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಇನ್ನೊಂದು ರಾಜ್ಯ

‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಇನ್ನೊಂದು ರಾಜ್ಯ

ನ್ಯೂಸ್ ಆ್ಯರೋ‌ : ‘ದಿ ಕೇರಳ ಸ್ಟೋರಿ’-ಮತಾಂತರ ಮತ್ತು ಭಯೋತ್ಪಾದನೆಯ ವಿಷ ವರ್ತುಲ ಬಿಚ್ಚಿಡುವ ಈ ಚಿತ್ರ ಎಲ್ಲಾ ಅಡೆ ತಡೆಗಳನ್ನು ಮೀರಿ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈಗಾಗಲೆ ಈ ಚಿತ್ರವನ್ನು ಮಧ್ಯ ಪ್ರದೇಶ ಸರ್ಕಾರ ತೆರಿಗೆ ಮುಕ್ತ ಮಾಡಿದ್ದು, ಈಗ ಉತ್ತರ ಪ್ರದೇಶ ಈ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ.

ಯುಪಿಯಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ತೆರಿಗೆ ಮುಕ್ತಗೊಳಿಸಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ. ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಲೋಕಭವನದಲ್ಲಿ ಆಯೋಜಿಸಲಾಗಿರುವ ವಿಶೇಷ ಪ್ರದರ್ಶನದಲ್ಲಿ ಚಲನಚಿತ್ರವನ್ನು ವೀಕ್ಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ. ಯುಪಿ ಬಿಜೆಪಿ ಕಾರ್ಯದರ್ಶಿ ರಾಘವೇಂದ್ರ ಮಿಶ್ರಾ ಇತ್ತೀಚೆಗೆ ಲಕ್ನೋದಲ್ಲಿ 100 ವಿದ್ಯಾರ್ಥಿನಿಯರಿಗೆ ಚಿತ್ರವನ್ನು ತೋರಿಸಿದ್ದರು.

ಮಧ್ಯಪ್ರದೇಶ, ಉತ್ತರ ಪ್ರದೇಶ ಸರ್ಕಾರಗಳು ಚಿತ್ರಕ್ಕೆ ತೆರಿಗೆ ಮುಕ್ತ ಮಾಡಿದೆ. ರಾಜ್ಯದಲ್ಲಿಯೂ ಈ ಚಿತ್ರಕ್ಕೆ ಸರ್ಕಾರ ತೆರಿಗೆ ಮುಕ್ತ ಸೌಲಭ್ಯ ನೀಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ್‌ ಗೌಡ ಒತ್ತಾಯಿಸಿದ್ದಾರೆ.

ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ಸಿನಿಮಾ ನಿಷೇಧ

ಇತ್ತ ‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದರೆ ಅತ್ತ ಪಶ್ಚಿಮ ಬಂಗಾಳದಲ್ಲಿ ಸಿನಿಮಾ ಪ್ರದರ್ಶನವನ್ನು ನಿಷೇಧಿಸಲಾಗಿದೆ . ಸಿನಿಮಾ ಪ್ರದರ್ಶನ ರದ್ದುಗೊಳಿಸುತ್ತಿರುವುದಾಗಿ ಸೋಮವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ಕಾರಣ ನೀಡಿ ತಮಿಳುನಾಡು ಸರ್ಕಾರವು ರಾಜ್ಯದ ಮಲ್ಟಿಪ್ಲೆಕ್ಸ್‌ಗಳಲ್ಲಿ ‘ದಿ ಕೇರಳ ಸ್ಟೋರಿ ’ ಸಿನಿಮಾ ಪ್ರದರ್ಶನವನ್ನು ಭಾನುವಾರದಿಂದ ಸ್ಥಗಿತಗೊಳಿಸಿದೆ.

Related post

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…
ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…

Leave a Reply

Your email address will not be published. Required fields are marked *