‘ಘೋಸ್ಟ್’ ಚಿತ್ರತಂಡ ಸೇರಿದ ಅನುಪಮ್ ಖೇರ್ – ಶಿವಣ್ಣ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ ಬಾಲಿವುಡ್‌ ನಟ

‘ಘೋಸ್ಟ್’ ಚಿತ್ರತಂಡ ಸೇರಿದ ಅನುಪಮ್ ಖೇರ್ – ಶಿವಣ್ಣ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ ಬಾಲಿವುಡ್‌ ನಟ

ನ್ಯೂಸ್ ಆ್ಯರೋ : ಕನ್ನಡ ಚಿತ್ರರಂಗದಲ್ಲಿ ಸದಾ ಯಂಗ್ ಅಂಡ್ ಎನರ್ಜಿಟಿಕ್ ನಟ ಅಂದರೆ ಅದು ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್. ಸದಾ ಹೊಸ ರೀತಿಯ ಪಾತ್ರಗಳಲ್ಲಿ ನಟಿಸಲು ಇಷ್ಟ ಪಡುವ ಶಿವಣ್ಣ ಸದ್ಯ, ಶ್ರೀನಿ ನಿರ್ದೇಶನದ ‘ಘೋಸ್ಟ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಈ ಬಹುನಿರೀಕ್ಷಿತ ಚಿತ್ರಕ್ಕೆ ಇದೀಗ ಬಾಲಿವುಡ್ ನಟ ಅನುಪಮ್ ಖೇರ್ ಅವರ ಎಂಟ್ರಿಯಾಗಿದೆ.

ಬಾಲಿವುಡ್ ಸಿನಿಮಾ ರಂಗದ ಪ್ರಮುಖ ನಟರಲ್ಲಿ ಒಬ್ಬರೆನಿಸಿಕೊಂಡಿರುವ, ಅನುಪಮ್ ಖೇರ್ ಈಗಾಗಲೇ ದಕ್ಷಿಣ ಭಾರತದ ಹಲವು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಆದರೆ ಇದೇ‌ ಮೊದಲ ಬಾರಿಗೆ ಶಿವರಾಜ್ ಕುಮಾರ್ ಹಾಗೂ ಅನುಪಮ್ ಖೇರ್ ಜೊತೆಯಾಗಿ ನಟಿಸುತ್ತಿದ್ದಾರೆ.

‘ಘೋಸ್ಟ್’ ನಿರ್ದೇಶಕ ಶ್ರೀನಿ ಹೇಳಿದ್ದಿಷ್ಟು..

ಈ ಬಗ್ಗೆ ಮಾತನಾಡಿರುವ ‘ಘೋಸ್ಟ್’ ಸಿನಿಮಾದ ನಿರ್ದೇಶಕ ಶ್ರೀನಿ ಮಾತನಾಡಿ, ‘ಕೆಲ ದಿನಗಳ ಹಿಂದೆ ಚಿತ್ರಕ್ಕಾಗಿ ಬಾಲಿವುಡ್ ನಟ ಅನುಪಮ್ ಖೇರ್ ಅವರನ್ನು‌ ಸಂಪರ್ಕಿಸಿದ್ದೆವು. ಮೇಲ್ ಮೂಲಕ ಚಿತ್ರದ ಕತೆಯನ್ನು ಅವರಿಗೆ ಕಳುಹಿಸಲಾಗಿತ್ತು. ಕತೆ ಹಾಗೂ ಅವರ ಪಾತ್ರವನ್ನು ಅವರು ಇಷ್ಟ ಪಟ್ಟು ನಟಿಸಲು ಒಪ್ಪಿಕೊಂಡಿದ್ದಾರೆ. ಸಿನಿಮಾದಲ್ಲಿ ಅವರದ್ದು ಬಹಳ ಪ್ರಮುಖ ಪಾತ್ರವಾಗಿದ್ದು, ನಮ್ಮ ಚಿತ್ರದ‌ ಮೂಲಕ ಅನುಪಮ್ ಖೇರ್ ಕನ್ನಡಕ್ಕೆ ಬರುತ್ತಿರುವುದು ಖುಷಿಯ ವಿಚಾರ’ ಎಂದಿದ್ದಾರೆ.

‘ಘೋಸ್ಟ್’ ಸಿನಿಮಾದಲ್ಲಿದೆ ಪ್ಯಾನ್ ಇಂಡಿಯಾ ತಾರಾಂಗಣ

ಶಿವರಾಜ್ ಕುಮಾರ್ ನಟಿಸಿ, ಶ್ರೀನಿ ನಿರ್ದೇಶನ‌ ಮಾಡುತ್ತಿರುವ ‘ಘೋಸ್ಟ್’ ಸಿನಿಮಾ‌ ಫ್ಯಾನ್ ಇಂಡಿಯಾ ಮಾದರಿಯಲ್ಲಿ, ಹಲವು ಭಾಷೆಗಳಲ್ಲಿ ತಯಾರಾಗುತ್ತಿದೆ. ಈ ಕಾರಣಕ್ಕೆ ಹಲವು ಚಿತ್ರಂಗದ ಪ್ರಮುಖರ ಸಮಾಗಮವಾಗಿದೆ. ಇತ್ತೀಚೆಗೆ ಮಲೆಯಾಳಂ ಸ್ಟಾರ್ ನಟ ಜಯರಾಂ ಸಿನಿಮಾ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದರು, ಇದೀಗ ಅನುಪಮ್ ಖೇರ್ ಅವರ ಎಂಟ್ರಿಯಾಗಿದೆ‌. ಇನ್ನೂ ಕೂಡ ಹಲವು ಬಹುಭಾಷಾ ನಟರು ‘ಘೋಸ್ಟ್’ ಸಿನಿಮಾದಲ್ಲಿ ನಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ‌.

ಸದ್ಯ, ಸಿನಿಮಾದ 40 ಶೇಕಡಾ ಚಿತ್ರೀಕರಣ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಮುಂದಿನ ಶೆಡ್ಯೂಲ್ ಆರಂಭವಾಗಲಿದೆ. ಇದೊಂದು ಗ್ಯಾಂಗ್ ಸ್ಟರ್ ಸಿನಿಮಾವಾಗಿದ್ದು, ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಹಾಕಲಾಗಿರುವ ಬೃಹತ್ ಸೆಟ್ ನಲ್ಲಿ ಶೂಟಿಂಗ್ ನಡೆಯುತ್ತಿದೆ. ಈಗಾಗಲೇ ಚಿತ್ರದ ಆಡಿಯೋ ರೈಟ್ಸ್ ಪ್ರತಿಷ್ಟಿತ ಆಡಿಯೋ ಸಂಸ್ಥೆಗೆ ಮಾರಾಟವಾಗಿದೆ ಎನ್ನಲಾಗಿದೆ.

ಇನ್ನು, ಬಾಲಿವುಡ್ ನಟ ಅನುಪಮ್ ಖೇರ್ ಈ ಬಗ್ಗೆ, ‘ಉತ್ತಮ ಕಥೆ ಹಾಗೂ ತಂಡದ ಜೊತೆ ಕೆಲಸ ಮಾಡಲು ಕಾಯುತ್ತಿದ್ದೇನೆ. ‘ಘೋಸ್ಟ್’ ಸಿನಿಮಾದ ಕತೆ ನನಗೆ ಇಷ್ಟವಾಯಿತು’ ಎಂದು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *