ಪ್ರಿಯಕರನನ್ನೇ ವರಿಸಲು ಸಜ್ಜಾದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ – ಐಶ್ವರ್ಯ ಮನಕದ್ದ ಲವರ್ ಬಾಯ್ ಯಾರು ಗೊತ್ತಾ?

ಪ್ರಿಯಕರನನ್ನೇ ವರಿಸಲು ಸಜ್ಜಾದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ – ಐಶ್ವರ್ಯ ಮನಕದ್ದ ಲವರ್ ಬಾಯ್ ಯಾರು ಗೊತ್ತಾ?

ನ್ಯೂಸ್ ಆ್ಯರೋ : ಚಂದನವನದ ಸರ್ಜಾ ಫ್ಯಾಮಿಲಿ ಬಗ್ಗೆ ಬಿಸಿ ಬಿಸಿ ಸುದ್ದಿಯೊಂದು ಹೊರ ಬಿದ್ದಿದ್ದು, ಶೀಘ್ರದಲ್ಲೇ ಸರ್ಜಾ ಕುಟುಂಬದ ಕುಡಿ ಐಶ್ವರ್ಯ ಸರ್ಜಾ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.

ಹೌದು.. ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ಹಸೆಮಣೆ ಏರಲು ಸಿದ್ದರಾಗಿದ್ದು, ಸದ್ಯ ಸರ್ಜಾ ಮನೆಯಲ್ಲಿ ಮದುವೆಯ ಸಂಭ್ರಮ ಮನೆ ಮಾಡಿದೆ.

ಕಾಲಿವುಡ್ ನ ಖ್ಯಾತ ಹಾಸ್ಯನಟ ತಂಬಿ ರಾಮಯ್ಯರ ಪುತ್ರ ಉಮಾಪತಿ ರಾಮಯ್ಯರನ್ನು ಐಶ್ವರ್ಯ ಸರ್ಜಾ ವರಿಸಲಿದ್ದಾರೆ ಎನ್ನಲಾಗುತ್ತಿದ್ದು, ಸದ್ಯ ತಮಿಳು ಚಿತ್ರರಂಗದಲ್ಲಿ ಈ ಸುದ್ದಿ ಸಖತ್ ಸದ್ದು ಮಾಡುತ್ತಿದೆ. ಅಲ್ಲದೇ ಐಶ್ವರ್ಯ ಹಾಗೂ ಉಮಾಪತಿ ರಾಮಯ್ಯ ಸಾಕಷ್ಟು ಸಮಯದಿಂದ ಡೇಟಿಂಗ್ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಈ ಪ್ರಣಯಪಕ್ಷಿಗಳು ಸದ್ಯ ಹೆತ್ತವರ ಆಶೀರ್ವಾದ ಪಡೆದು ವೈವಾಹಿಕ ಜೀವನಕ್ಕೆ ಅಡಿ ಇಡಲು ಸಿದ್ದರಾಗಿದ್ದಾರೆ.

ಇನ್ನು ಎರಡು ಕುಟುಂಬಗಳು ಒಂದು ರೌಂಡ್ ಮದುವೆ ಮಾತುಕತೆ ನಡೆಸಿದ್ದು, ಈ ಶುಭ ಸಮಾಚಾರವನ್ನು ತಮಿಳು ಚಿತ್ರರಂಗದ ವರದಿಗಾರ ಕನಕರಾಜ್ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಮದುವೆಯ ದಿನಾಂಕವನ್ನು ಶೀಘ್ರದಲ್ಲೇ ಎರಡು ಕುಟುಂಬದಲ್ಲೇ ಘೋಷಿಸುವ ನಿರೀಕ್ಷೆಯಿದ್ದು, ಇಲ್ಲಿಯವರೆಗೂ ಅಧಿಕೃತವಾಗಿ ಮದುವೆ ಬಗ್ಗೆ ಸರ್ಜಾ ಕುಟುಂಬವಾಗಲಿ ರಾಮಯ್ಯ ಕುಟುಂಬವಾಗಲಿ ಮಾಹಿತಿ ನೀಡಿಲ್ಲ.

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ 2013 ರಲ್ಲಿ ವಿಶಾಲ್ ನಟನೆಯ ಪತ್ತು ಯಾನೈ ಸಿನಿಮಾ ಮೂಲಕ ಪದಾರ್ಪಣೆ ಮಾಡಿದರು. ಆದರೆ ಅದಾದ ಬಳಿಕ ಯಾವುದೇ ಸಿನಿಮಾದಲ್ಲಿ ನಟಿಸಿರಲಿಲ್ಲ. 2018ರಲ್ಲಿ ಕನ್ನಡದ ಪ್ರೇಮ ಬರಹ ಸಿನಿಮಾದ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದರು. ಈ ಸಿನಿಮಾವನ್ನು ಐಶ್ವರ್ಯಾರ ತಂದೆ ಅರ್ಜುನ್ ಸರ್ಜಾ ಅವರೇ ನಿರ್ದೇಶನ ಮಾಡಿದ್ದರು. ಕನ್ನಡದ ಪ್ರೇಮ ಬರಹ ಸಿನಿಮಾವನ್ನು ತಮಿಳಿನಲ್ಲಿ ಸೊಲ್ಲಿವಿಡಾವಾ ಹೆಸರಿನಲ್ಲಿ ಕೆಲ ದೃಶ್ಯಗಳನ್ನುಮರುಚಿತ್ರೀಕರಿಸಿ ಬಿಡುಗಡೆ ಮಾಡಲಾಗಿತ್ತು. ಎರಡೂ ಭಾಷೆಗಳಲ್ಲಿ ಸಿನಿಮಾ ಮ್ಯಾಜಿಕ್ ಮಾಡಲು ವಿಫಲವಾಯಿತು. ಆ ನಂತರ ಐಶ್ವರ್ಯಾಗೆ ಹೆಚ್ಚಿನ ಅವಕಾಶಗಳು ಲಭಿಸಲಿಲ್ಲ.

ರಾಷ್ಟ್ರಪ್ರಶಸ್ತಿ ವಿಜೇತ ನಟ – ನಿರ್ದೇಶಕ ತಂಬಿ ರಾಮಯ್ಯ ಅವರ ಪುತ್ರ ನಟ ಉಮಾಪತಿ ರಾಮಯ್ಯ ಕೂಡ ನಟನೆಯಲ್ಲಿ ಬ್ಯುಸಿಯಾಗಿದ್ದು, ಉಮಾಪತಿ ರಾಮಯ್ಯ ಈ ವರೆಗೆ ನಾಲ್ಕು ಸಿನಿಮಾಗಳಲ್ಲಿ ಮಾತ್ರವೇ ನಟಿಸಿದ್ದಾರೆ. ಅರ್ಜುನ್ ಸ್ವತಃ ಹೋಸ್ಟ್ ಮಾಡಿದ ರಿಯಾಲಿಟಿ ಟಿವಿ ಶೋ “ಸರ್ವೈವರ್ ತಮಿಳು” ನಲ್ಲಿ ಉಮಾಪತಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಅಲ್ಲಿಂದ ಅರ್ಜುನ್ ಕುಟುಂಬಕ್ಕೆ ಉಮಾಪತಿ ರಾಮಯ್ಯ ಹತ್ತಿರವಾಗಿದ್ದು, ಈ ಮೂಲಕ ಇವರಿಬ್ಬರ ನಡುವೆ ಸ್ನೇಹವಾಗಿ ಬಳಿಕ ಪ್ರೇಮಕ್ಕೆ ತಿರುಗಿದೆ ಎಂದು ವರದಿಯಾಗಿದೆ. ಇದೀಗ ಈ ಜೋಡಿಯ ಸಂಬಂಧಕ್ಕೆ ಹಿರಿಯರು ಗ್ರೀನ್ ಸಿಗ್ನಲ್‌ ನೀಡಿದ್ದಾರೆ ಎನ್ನಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *