ತನ್ನ 60ನೇ ವಯಸ್ಸಿನಲ್ಲಿ 2ನೇ ವಿವಾಹವಾದ ಆಶಿಶ್ ವಿದ್ಯಾರ್ಥಿ – ಅಸ್ಸಾಮೀ ಮೂಲದ ಯುವತಿಯೊಂದಿಗೆ ಸೆಕೆಂಡ್ ಇನ್ನಿಂಗ್ಸ್ ಸ್ಟಾರ್ಟ್..!!

ತನ್ನ 60ನೇ ವಯಸ್ಸಿನಲ್ಲಿ 2ನೇ ವಿವಾಹವಾದ ಆಶಿಶ್ ವಿದ್ಯಾರ್ಥಿ – ಅಸ್ಸಾಮೀ ಮೂಲದ ಯುವತಿಯೊಂದಿಗೆ ಸೆಕೆಂಡ್ ಇನ್ನಿಂಗ್ಸ್ ಸ್ಟಾರ್ಟ್..!!

ನ್ಯೂಸ್ ಆ್ಯರೋ‌ : ಕನ್ನಡ ಸೇರಿದಂತೆ ಸುಮಾರು 11 ಭಾಷೆಗಳ ಅಂದಾಜು 200 ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟ ಆಶಿಶ್ ವಿದ್ಯಾರ್ಥಿ ತಮ್ಮ 60ನೇ ವಯಸ್ಸಿನಲ್ಲಿ 2ನೇ ವಿವಾಹವಾಗಿದ್ದಾರೆ.

ಇಂದು ಅಸ್ಸಾಮಿ ಮೂಲದ ಫ್ಯಾಷನ್ ಉದ್ಯಮದಲ್ಲಿ ಕೆಲಸ ಮಾಡುವ ರೂಪಾಲಿ ಬರುವ ಅವರನ್ನು ಕೊಲ್ಕತ್ತದಲ್ಲಿ ಸರಳವಾಗಿ ಆಶಿಷ್ ವಿದ್ಯಾರ್ಥಿ ವಿವಾಹವಾಗಿದ್ದಾರೆ. ಇಬ್ಬರು ಪರಸ್ಪರ ಹಾರಗಳನ್ನು ಬದಲಾಯಿಸಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ಹಿಂದೆ ಹಿರಿಯ ನಟಿ ಶಕುಂತಲಾ ಅವರ ಪುತ್ರಿ ರಜೋಶಿ ಜೊತೆಗೆ ಆಶಿಶ್ ವಿದ್ಯಾರ್ಥಿ ವಿವಾಹವಾಗಿದ್ದರು. ಹಲವು ವರ್ಷಗಳ ದಾಂಪತ್ಯದ ಬಳಿಕ ಇಬ್ಬರೂ ದೂರಾವಾಗಿದ್ದಾರೆ.

”ಜೀವನದ ಈ ಹಂತದಲ್ಲಿ ನಾನು ರೂಪಾಲಿಯೊಟ್ಟಿಗೆ ವಿವಾಹವಾಗಿರುವುದು ಅದ್ಭುತವಾದ ಅನುಭವ. ನಾವು ಸರಳವಾಗಿ ರಿಜಿಸ್ಟರ್ ಮದುವೆ ಆಗಿದ್ದೇವೆ. ಇಂದು ಸಂಜೆ ಆಪ್ತೇಷ್ಟರಿಗೆ ರಿಸೆಪ್ಷನ್ ಹಮ್ಮಿಕೊಂಡಿದ್ದೇವೆ” ಎಂದು ಆಶಿಶ್ ವಿದ್ಯಾರ್ಥಿ ಹೇಳಿದ್ದಾರೆ.

”ನಾವು ಕೆಲವು ತಿಂಗಳ ಮುಂಚೆ ಭೇಟಿಯಾದೆವು. ಇಬ್ಬರಿಗೂ ಪರಸ್ಪರರ ವ್ಯಕ್ತಿತ್ವ ಇಷ್ಟವಾಯಿತು. ಹಾಗಾಗಿ ನಮ್ಮ ಗೆಳೆತನವನ್ನು ಇನ್ನೊಂದು ಹಂತ ಮೇಲಕ್ಕೆ ಕೊಂಡೊಯ್ಯಲು ನಿಶ್ಚಿಯಿಸಿದೆವು. ನಮ್ಮ ಮದುವೆ ಸರಳವಾಗಿರಬೇಕೆಂದು ನಾವು ಮೊದಲೇ ನಿಶ್ಚಯ ಮಾಡಿದ್ದೆವು” ಎಂದು ರೂಪಾಲಿ ಹೇಳಿದ್ದಾರೆ.

ಫುಡ್ ವ್ಲಾಗಿಂಗ್

‘ದ್ರೋಕಾಲ್’ ಚಿತ್ರದಲ್ಲಿನ ಮನೋಜ್ಞ ಅಭಿನಯಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದ ಆಶಿಶ್ ವಿದ್ಯಾರ್ಥಿ ಪೋಷಕ ಪಾತ್ರ, ಖಳ ನಾಯಕನ ಪಾತ್ರಗಳಿಂದ ಜನಪ್ರಿಯ. ಕೋವಿಡ್ ಬಳಿಕ ವ್ಲಾಗಿಂಗ್ ಸಹ ಆರಂಭಿಸಿದರು. ಅವರು ಹಲವು ನಗರಗಳಿಗೆ ತೆರಳಿ ಅಲ್ಲಿನ ಜನಪ್ರಿಯ ಖಾದ್ಯಗಳನ್ನು ಸವಿಯುತ್ತಾ ಫುಡ್ ವ್ಲಾಗಿಂಗ್ ಮಾಡುತ್ತಿದ್ದಾರೆ.

Related post

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ನ್ಯೂಸ್ ಆ್ಯರೋ‌ : ನಾವು ಪ್ರೀತಿಸುವ ಜೀವಗಳು ನಮ್ಮನ್ನು ದೂರ ಮಾಡಿದರೆ, ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ಅದರಿಂದಾಗುವ ನೋವು ಅಪಾರ. ಅದರಲ್ಲೂ ಪ್ರೇಯಸಿ ದೂರ ಮಾಡುತ್ತಿದ್ದರೆ ಅದನ್ನು ಸಹಿಸಲು…
ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ – ಸಿಸಿಟಿವಿಯಲ್ಲಿ ಘೋರ ಕೃತ್ಯ ಸೆರೆ, ವಿಡಿಯೋ ವೈರಲ್…!!

ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ…

ನ್ಯೂಸ್ ಆ್ಯರೋ : ಮಲಗುವ ವಿಚಾರಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ಸೂರತ್‌ನ ವ್ಯಕ್ತಿಯೊಬ್ಬ ತನ್ನ ಮಗಳಿಗೆ 25 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಇಡೀ ಕೃತ್ಯ ಸಿಸಿಟಿವಿಯಲ್ಲಿ…
ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ ಕಾರಣಿಕದಿಂದಾಗಿಯೇ ಇಲ್ಲಿಗೆ ಬಂದೆ ಎಂದ ಗುಳಿಕೆನ್ನೆ ಬೆಡಗಿ..

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ…

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಬೆಡಗಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಬುಧವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ…

Leave a Reply

Your email address will not be published. Required fields are marked *