ವಾರಣಾಸಿಯ ಹೋಟೆಲ್‌ನಲ್ಲಿ ನಟಿಯ ಶವ ಮತ್ತೆ: ಆಕಾಂಕ್ಷಾ ದುಬೆ ಸಾವಿನ ಸುತ್ತ ಅನುಮಾನದ ಹುತ್ತ, ಆತ್ಮಹತ್ಯೆ ಮಾಡಿಕೊಂಡರೇ ಭೋಜಪುರಿ ಚಿತ್ರರಂಗದ ಕನಸಿನ ರಾಣಿ

ವಾರಣಾಸಿಯ ಹೋಟೆಲ್‌ನಲ್ಲಿ ನಟಿಯ ಶವ ಮತ್ತೆ: ಆಕಾಂಕ್ಷಾ ದುಬೆ ಸಾವಿನ ಸುತ್ತ ಅನುಮಾನದ ಹುತ್ತ, ಆತ್ಮಹತ್ಯೆ ಮಾಡಿಕೊಂಡರೇ ಭೋಜಪುರಿ ಚಿತ್ರರಂಗದ ಕನಸಿನ ರಾಣಿ

ನ್ಯೂಸ್‌ ಆ್ಯರೋ : ಖ್ಯಾತ ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ (25) ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಉತ್ತರಪ್ರದೇಶದ ವಾರಣಾಸಿಯ ಸರ್ನಾಥ್​ ಹೋಟೆಲ್‌ನಲ್ಲಿ ಅವರ ಶವ ಪತ್ತೆಯಾಗಿದೆ.

ಜನಪ್ರಿಯ ನಟಿ ಹಾಗೂ ಡ್ಯಾನ್ಸರ್ ಆಗಿದ್ದ ಆಕಾಂಕ್ಷಾ ದುಬೆ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಾಥಮಿಕವಾಗಿ ಇದೊಂದು ಆತ್ಮಹತ್ಯೆ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಸಿನಿಮಾ ಮಾತ್ರವಲ್ಲದೆ ಆಕಾಂಕ್ಷಾ ಸಾಮಾಜಿಕ ಜಾಲತಾಣದಲ್ಲೂ ಪ್ರಖ್ಯಾತಿ ಹೊಂದಿದ್ದರು. ಡಾನ್ಸ್​ ರೀಲ್ಸ್​ಗಳನ್ನು ತಮ್ಮ ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಶೇರ್​ ಮಾಡುತ್ತಿದ್ದರು. ಸಾಯುವ ಕೆಲ ಹೊತ್ತಿಗೂ ಮುನ್ನ ಆಕಾಂಕ್ಷಾ ವಿಡಿಯೊವೊಂದನ್ನು ಶೇರ್​ ಮಾಡಿಕೊಂಡಿದ್ದು, ಅದರಲ್ಲಿ ಭೋಜ್​ಪುರಿ ಹಾಡೊಂದಕ್ಕೆ ಡಾನ್ಸ್​ ಮಾಡಿದ್ದಾರೆ.

ಆಕಾಂಕ್ಷಾ ತಮ್ಮ ಮುಂದಿನ ಚಿತ್ರಕ್ಕಾಗಿ ವಾರಣಾಸಿಯಲ್ಲಿ ಶೂಟಿಂಗ್‌ಗೆ ತೆರಳಿದ್ದರು. ತಮ್ಮ ಪಾಲಿನ ಶೂಟಿಂಗ್ ಮುಗಿಸಿ ವಾರಾಣಸಿಯ ಸಾರಾನಾಥ್ ಹೋಟೆಲ್‌ನಲ್ಲಿ ತಂಗಿದ್ದರು. ಭಾನುವಾರ ಬೆಳಿಗ್ಗೆ ಹೋಟೆಲ್ ಸಿಬ್ಬಂದಿ ರೂಮಿಗೆ ತೆರಳಿದಾಗ ನಟಿಯ ಶವ ಪತ್ತೆಯಾಗಿದೆ. ಅನುಮಾನಾಸ್ಪದ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಯಾರು ಈ ಆಕಾಂಕ್ಷಾ ದುಬೆ:

ಭೋಜಪುರಿ ಚಿತ್ರರಂಗದ ಕನಸಿನ ರಾಣಿಯಂದು ಗುರುತಿಸಿಕೊಂಡಿದ್ದ ಮಿರ್ಜಾಪುರ್ ಮೂಲದ ಆಕಾಂಕ್ಷಾ ಅವರು ಐಎಎಸ್ ಅಧಿಕಾರಿ ಆಗಬೇಕೆಂದುಕೊಂಡು ಮುಂಬೈ ಸೇರಿದ್ದರು. ಆದರೆ, ಅಲ್ಲಿಂದ ಭೋಜಪುರಿ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿ ಹೆಸರು ಮಾಡಿದ್ದರು.

ಶನಿವಾರ ಅವರು ಬೆಲ್ಲಿ ಡ್ಯಾನ್ಸ್‌ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದರು. ಭೋಜಪುರಿಯ ಮೇರಿ ಜಂಗ್, ಮೇರಿ ಪೈಸಲಾ, ಮುಜ್ಸೆ ಶಾದಿ ಕರೋಗೆ (ಭೋಜಪುರಿ), ವೀರೋನ್ ಕಿ ವೀರ, ಕಸಮ್ ಪೈದಾ ಕರನೇ ಕಿ 2 ಸಿನಿಮಾಗಳಲ್ಲಿ ಮಿಂಚಿದ್ದಲ್ಲದೇ ಆಕಾಂಕ್ಷಾ ಹಲವು ಭೋಜಪುರಿ ಮ್ಯುಸಿಕ್ ಅಲ್ಬಂಗಳಲ್ಲಿ ನಟಿಸಿ ಗಮನ ಸೆಳೆದಿದ್ದರು.

ಆಕಾಂಕ್ಷಾ ಅವರು ಇತ್ತೀಚೆಗೆ ಸಮರ್ ಸಿಂಗ್ ಎನ್ನುವ ನಟರೊಬ್ಬರ ಜೊತೆ ಡೇಟಿಂಗ್ ಮಾಡುತ್ತಿದ್ದರು. ಪ್ರೇಮಿಗಳ ದಿನದಂದು ಸಮರ್​ ಸಿಂಗ್​​ ಜತೆಗಿರುವ ಫೋಟೋವನ್ನು ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿಕೊಂಡು, ಪ್ರೇಮಿಗಳ ದಿನದ ಶುಭಾಶಯ ಎಂದು ಬರೆದು ತಮ್ಮ ಪ್ರೀತಿಯನ್ನು ಅಧಿಕೃತಗೊಳಿಸಿದ್ದರು.

ಸ್ಥಳೀಯ ಮಾಧ್ಯಮಗಳ ಪ್ರಕಾರ ಆಕಾಂಕ್ಷಾ 2018ರಿಂದ ಖಿನ್ನತೆಯಿಂದ ಬಳಲುತ್ತಿದ್ದರು ಮತ್ತು ಸಿನಿಮಾಗಳಿಂದ ಬಿಡುವು ಪಡೆದುಕೊಂಡಿದ್ದರು. ಕೆಲ ವರ್ಷಗಳ ಮತ್ತೆ ಸಿನಿಮಾಗೆ ಮರಳಿದ್ದರು ಮತ್ತು ಸಂಕಷ್ಟದ ಸಮಯದಲ್ಲಿ ನನ್ನ ಜತೆ ನಿಂತಿದ್ದು, ನನ್ನ ತಾಯಿ ಎಂದು ಸದಾ ಹೇಳುತ್ತಿದ್ದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *