ಏಕಾಏಕಿ ಪ್ರೆಗ್ನೆಂಟ್ ಆದ್ರಂತೆ ಬಿಗ್ ಬಾಸ್ ಸ್ಪರ್ಧಿ – ಮನೆಗೆ ಕಳಿಸಲು ನಡೆಯುತ್ತಿದೆ ತುರ್ತು ತಯಾರಿ!

ಏಕಾಏಕಿ ಪ್ರೆಗ್ನೆಂಟ್ ಆದ್ರಂತೆ ಬಿಗ್ ಬಾಸ್ ಸ್ಪರ್ಧಿ – ಮನೆಗೆ ಕಳಿಸಲು ನಡೆಯುತ್ತಿದೆ ತುರ್ತು ತಯಾರಿ!

ನ್ಯೂಸ್ ಆ್ಯರೋ : ಒಂದು ದೊಡ್ಡ ಮನೆ ಅಲ್ಲಿ ಸಿನಿಮಾ, ಸೀರಿಯಲ್, ಸೋಶಿಯಲ್ ಮೀಡಿಯಾದಲ್ಲಿ ಹೆಸರು ಮಾಡಿದ ಸೆಲೆಬ್ರಿಟಿಗಳು ನೂರು ದಿನ ಒಟ್ಟಾಗಿ ಕಳೆಯಬೇಕು. ಈ ನಡುವೆ ಅಲ್ಲಿರುವ ಸೆಲೆಬ್ರಿಟಿಗಳ ಮಧ್ಯೆ ಗಲಾಟೆ, ಪ್ರೀತಿ-ಪ್ರೇಮ, ಹೊಡೆದಾಟ, ಟಾಸ್ಕ್ ಇನ್ನೂ ಏನೇನೋ ನಡೆಯುತ್ತದೆ. ಇದು ಫೇಮಸ್ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮದ ಸಣ್ಣ ಝಲಕ್. ಸದ್ಯ, ಎಲ್ಲಾ ಭಾಷೆಗಳಲ್ಲೂ ಬಿಗ್ ಬಾಸ್ ಸೀಸನ್ ಮತ್ತೆ ಆರಂಭವಾಗಿದೆ. ಇದೀಗ ಈ ಕಾರ್ಯಕ್ರಮದ ಸ್ಪರ್ಧಿ ಒಬ್ಬರು ಪ್ರೆಗ್ನೆಂಟ್ ಆಗಿದ್ದು, ಅವರನ್ನು ಮನೆಗೆ ಕಳುಹಿಸಲು ತಯಾರಿ ನಡೆಸಲಾಗುತ್ತಿದೆ ಎನ್ನಲಾಗಿದೆ!

ನಾನು ಪ್ರೆಗ್ನೆಂಟ್ ಆಗಿದ್ದೇನೆ ಎಂದ ಸ್ಪರ್ಧಿ!

ಇಂತಹದ್ದೊಂದು ವಿಚಿತ್ರ ಘಟನೆ ನಡೆದಿರುವುದು ಬಾಲಿವುಡ್ ಕಿಂಗ್ ಸಲ್ಮಾನ್ ಖಾನ್ ನಡೆಸಿ ಕೊಡುತ್ತಿರುವ ಹಿಂದಿ ಬಿಗ್ ಬಾಸ್ ಕಾರ್ಯಕ್ರಮದಲ್ಲಿ. ಇತ್ತೀಚೆಗಷ್ಟೇ ಬಿಗ್ ಬಾಸ್ ಸ್ಪರ್ಧಿ ಅಂಕಿತಾ ಲೋಖಂಡೆ, ‘ನನಗೆ ಪಿರಿಯಡ್ಸ್ ಆಗಿಲ್ಲ, ಗರ್ಭಿಣಿಯೇ ಎಂದು ತಿಳಿದುಕೊಳ್ಳುವುದಕ್ಕಾಗಿ ರಕ್ತ ಪರೀಕ್ಷೆ ಮಾಡಿಸಿದ್ದೇನೆ. ನಾನು ಪ್ರಗ್ನೆಂಟ್ ಆಗಿದ್ದೇನೆ, ದಯವಿಟ್ಟು ಮನೆಯಿಂದ ನನ್ನ ಆಚೆ ಕಳುಹಿಸಿ’ ಎಂದಿದ್ದು ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಗಂಡ-ಹೆಂಡತಿ ಬಿಗ್ ಬಾಸ್ ಮನೆಯಲ್ಲಿ!

ಹಿಂದಿ ಬಿಗ್ ಬಾಸ್ ಶೋನಲ್ಲಿ ನಾನಾ ರೀತಿಯ ಪ್ರಯೋಗಗಳನ್ನು ಮಾಡಲಾಗುತ್ತಿದೆ. ಈ ಬಾರಿ ಮದುವೆಯಾದ ಎರಡು ಜೋಡಿಗಳನ್ನು ಬಿಗ್ ಬಾಸ್ ಮನೆಗೆ ಕಳುಹಿಸಲಾಗಿತ್ತು. ಆ ಕಾರಣದಿಂದ ಅಂಕಿತಾ ಲೋಖಂಡೆ ಮತ್ತು ಪತಿ ವಿಕ್ಕಿ ಜೈನ್ ಇಬ್ಬರೂ ಬಿಗ್ ಬಾಸ್ ಮನೆಯೊಳಗೆ ಇದ್ದಾರೆ. ಅಂಕಿತಾ ಲೋಖಂಡೆ ಪ್ರೆಗ್ನೆಂಟ್ ಆಗಿರುವ ಬಗ್ಗೆ ಬಿಗ್ ಬಾಸ್ ಟೀಮ್ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಗಂಡ-ಹೆಂಡತಿ ಒಟ್ಟಿಗೇ ಇರುವ ಕಾರಣ ಈ ಪ್ರೆಗ್ನೆನ್ಸಿ ವಿಚಾರ ನಿಜವಾಗಿರಬಹುದು ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿದೆ.

ಮನೆಗೆ ಕಳುಹಿಸಲು ತಯಾರಿ!

ಹೌದು, ಸಲ್ಮಾನ್ ಖಾನ್ ನಡೆಸಿಕೊಡುತ್ತಿರುವ ಹಿಂದಿ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಹೊಸ ಹೊಸ ಪ್ರಯೋಗಳನ್ನು ನಡೆಸು ಕಾರಣ ಸಾಕಷ್ಟು ಜನಪ್ರಿಯತೆ ಗಳಿಸಿದೆ. ಇದೀಗ ಅಂಕಿತಾ ಲೋಖಂಡೆ ಪ್ರೆಗ್ನೆಂಟ್ ಎಂಬ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದ್ದು, ಬಿಗ್ ಬಾಸ್ ನಿಂದ ಮನೆಗೆ ಕಳುಹಿಸಲು ತಯಾರಿ‌ ನಡೆಸಲಾಗುತ್ತಿದೆ ಎನ್ನಲಾಗಿದೆ. ಒಂದು ವೇಳೆ ಈ ವಿಚಾರ ನಿಜವೇ ಆಗಿದ್ದರೆ ಅಂಕಿತಾ ಮನೆಗೆ ತೆರಳುವುದು ನಿಶ್ಚಿತ..!

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *