ಬಿಗ್ ಬಾಸ್ ಕನ್ನಡ ಸೀಸನ್ 10 ಶೀಘ್ರ ಆರಂಭ – ‘ಸಂಥಿಂಗ್ ಸ್ಪೆಶಲ್’ ಪ್ರೋಮೋ ಬಿಡುಗಡೆ

ಬಿಗ್ ಬಾಸ್ ಕನ್ನಡ ಸೀಸನ್ 10 ಶೀಘ್ರ ಆರಂಭ – ‘ಸಂಥಿಂಗ್ ಸ್ಪೆಶಲ್’ ಪ್ರೋಮೋ ಬಿಡುಗಡೆ

ನ್ಯೂಸ್ ಆ್ಯರೋ‌ : ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್. ಆರಂಭದಲ್ಲಿ ಹಿಂದಿಯಲ್ಲಿ ಕಾಣಿಸಿಕೊಂಡಿದ್ದ ಈ ಶೋ ಬಳಿಕ ಕನ್ನಡಕ್ಕೂ ಕಾಲಿಟ್ಟು ಪ್ರೇಕ್ಷಕರ ಗಮನ ಸೆಳೆದಿದೆ. ಯಶಸ್ವಿಯಾಗಿ 9 ಸೀಸನ್ ಮುಗಿಸಿರುವ ಬಿಗ್ ಬಾಸ್ ಕನ್ನಡ ಇದೀಗ 10ನೇ ಸೀಸನ್ ಗೆ ತಯಾರಾಗಿದೆ. ನಟ ಕಿಚ್ಚ ಸುದೀಪ್ ನಿರೂಪಣೆ ಈ ಶೋದ ಪ್ರಮುಖ ಆಕರ್ಷಣೆ.

ಪ್ರೋಮೋ ಬಿಡುಗಡೆ

ಪ್ರೇಕ್ಷಕರು ಹಲವು ದಿನಗಳಿಂದ ಬಿಗ್ ಬಾಸ್ ಕನ್ನಡ ಸೀಸನ್ 10ಕ್ಕಾಗಿ ಕಾಯುತ್ತಿದ್ದರು. ಶೀಘ್ರ ಆರಂಭವಾಗಲಿದೆ ಎಂದಿರುವ ಕಲರ್ಸ್ ಕನ್ನಡ ವಾಹಿನಿ ದಿನಾಂಕವನ್ನು ತಿಳಿಸಿಲ್ಲ. ಸದ್ಯ ಮೊದಲ ಪ್ರೋಮೋ ಬಿಡುಗಡೆ ಮಾಡಿ ವೀಕ್ಷಕರ ಕುತೂಹಲ ಕೆರಳಿಸಿದೆ.

ಸಮ್ ಥಿಂಗ್ ಸ್ಪೆಶಲ್

ಈ ಸೀಸನ್ ಬಹಳ ವಿಶೇಷವಾಗಿರಲಿದೆ ಎನ್ನುವುದಕ್ಕೆ ಪ್ರೋಮೋದಲ್ಲಿಯೇ ಸೂಚನೆ ಸಿಕ್ಕಿದೆ. ಈ ಬಾರಿ ಸಮ್ ಥಿಂಗ್ ಸ್ಪೆಶಲ್ ಇರಲಿದೆ ಎಂದು ಬಿಗ್ ಬಾಸ್ ಹಿನ್ನೆಲೆ ಧ್ವನಿ ಹೇಳಿರುವುದು ನಿರೀಕ್ಷೆ ಮತ್ತು ಕುತೂಹಲವನ್ನು ಹೆಚ್ಚಿಸಿದೆ. ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಈ ಪ್ರೋಮೋ ಸೆ. 2ರಂದು ಬಿಡುಗಡೆಯಾಗಿತ್ತು.

ಅಚ್ಚರಿ ಎಂದರೆ ಬಿಗ್ ಬಾಸ್ ನ 9 ಸೀಸನ್ ಗಳ ಹೊಣೆಯನ್ನು ವಾಹಿನಿ ಹೆಡ್ ಆಗಿದ್ದ ಪರಮೇಶ್ವರ್ ಗುಂಡ್ಕಲ್ ಹೊತ್ತಿದ್ದರು. ಆದರೆ ಈ ಬಾರಿ ಅವರ ಅನುಪಸ್ಥಿತಿಯಲ್ಲಿ ಶೋ ಆರಂಭವಾಗಲಿದೆ ಎನ್ನಲಾಗಿದೆ.

ಸೆಪ್ಟಂಬರ್ 24ರಂದು ಆರಂಭವಾಗುತ್ತಾ?

9ನೇ ಸೀಸನ್ ನ ಬಿಗ್ ಬಾಸ್ ಸೆಪ್ಟಂಬರ್ 24ರಂದು ಆರಂಭವಾಗಿತ್ತು. ಹೀಗಾಗಿ ಈ ಬಾರಿಯೂ ಅದೇ ದಿನಾಂಕದಂದು ಪ್ರಸಾರ ಆರಂಭಿಸಲಿದ್ಯಾ? ಎನ್ನುವ ಚರ್ಚೆ ನಡೆಯುತ್ತಿದೆ. ಜೊತೆಗೆ ಈ ಬಾರಿ ಯಾರೆಲ್ಲ ಸ್ಪರ್ಧಿಸಲಿದ್ದಾರೆ ಎನ್ನುವ ಪ್ರಶ್ನೆಯೂ ಕಾಡುತ್ತಿದೆ. ಶೀಘ್ರದಲ್ಲೇ ವಾಹಿನಿ ಎಲ್ಲಾ ಸಂಶಯಗಳಿಗೆ ಉತ್ತರ ನೀಡಲಿದೆ.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *