ಕೊನೆಗೂ ಪತ್ನಿ ಸಾವಿನ ನಿಗೂಢ ರಹಸ್ಯ ಬಿಚ್ಚಿಟ್ಟ ಬೋನಿ ಕಪೂರ್ – ಅತಿಲೋಕ ಸುಂದರಿ ಶ್ರೀದೇವಿ ಸತ್ತಿದ್ದು ಹೇಗೆ ಗೊತ್ತಾ?

ಕೊನೆಗೂ ಪತ್ನಿ ಸಾವಿನ ನಿಗೂಢ ರಹಸ್ಯ ಬಿಚ್ಚಿಟ್ಟ ಬೋನಿ ಕಪೂರ್ – ಅತಿಲೋಕ ಸುಂದರಿ ಶ್ರೀದೇವಿ ಸತ್ತಿದ್ದು ಹೇಗೆ ಗೊತ್ತಾ?

ನ್ಯೂಸ್‌ ಆ್ಯರೋ : ತಮ್ಮ ಅದ್ಭುತ ಅಭಿನಯದ ಮೂಲಕ ರಂಜಿಸಿದ ಅತಿಲೋಕ ಸುಂದರಿ ಶ್ರೀದೇವಿ ಅವರು ಐದು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಪತಿ ಜತೆ ದುಬೈಗೆ ತೆರಳಿದ್ದ ಶ್ರೀದೇವಿ ಅವರು ಆಕಸ್ಮಿಕವಾಗಿ ಬಾತ್‌ ಟಬ್‌ಗೆ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು ಎಂದು ಮರಣೋತ್ತರ ಪರೀಕ್ಷೆಯಲ್ಲಿ ಹೇಳಲಾಗಿತ್ತು.

ಇನ್ನೂ ಶ್ರೀದೇವಿಯದ್ದು ಸಹಜ ಸಾವಲ್ಲ, ಅನುಮಾನಾಸ್ಪದವಾಗಿ ನಿಧನರಾಗಿದ್ದಾರೆ ಎಂದು ಕೆಲವರು ಪತಿ ಬೋನಿ ಕಪೂರ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲಿನ ಪೊಲೀಸರು ಕೂಡ ಬೋನಿ ಕಪೂರ್ ಮೇಲೆ ಅನುಮಾನಗೊಂಡು ಭಾರೀ ವಿಚಾರಣೆ ನಡೆಸಿದ್ದರು. ಇದೀಗ 5 ವರ್ಷಗಳ ಬಳಿಕ ಸಂದರ್ಶನವೊಂದರಲ್ಲಿ ಬೋನಿ ಕಪೂರ್ ಪತ್ನಿ ಶ್ರೀದೇವಿ ಸಾವಿನ ಬಗ್ಗೆ ಮಾತನಾಡಿದ್ದಾರೆ.

“ಶ್ರೀದೇವಿ ಸಾವಿನ ಬಗ್ಗೆ ಮಾತನಾಡದಿರಲು ನಿರ್ಧರಿಸಿದೆ. ಏಕೆಂದರೆ ಆಕೆ ಸಾವಿನ ಸಂಬಂಧ ನನ್ನನ್ನು 48 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಇಲ್ಲಿ ಯಾವುದೇ ಮೋಸದಾಟ ಇರಲಿಲ್ಲ. ನಾನು ಸುಳ್ಳು ಪತ್ತೆ ಪರೀಕ್ಷೆ ಸೇರಿದಂತೆ ಎಲ್ಲಾ ತರಹದ ವಿಚಾರಣೆ ಎದುರಿಸಿದೆ. ಕೊನೆಗೆ ಬಂದ ವರದಿಯಲ್ಲಿ ಶ್ರೀದೇವಿ ಸಾವು ಆಕಸ್ಮಿಕ ಎಂದು ಸ್ಪಷ್ಟವಾಯಿತು.

ಇನ್ನೂ ಶ್ರೀದೇವಿ ಅವರಿಗೆ ಸೌಂದರ್ಯ ಮೇಲಿದ್ದ ಹೆಚ್ಚಿನ ಕಾಳಜಿ ಅವರ ಸಾವಿಗೆ ಕಾರಣವಾಯಿತು ಎಂದು ಬೋನಿ ಕಪೂರ್ ಹೇಳಿದರು..

ಉಪ್ಪು ಇಲ್ಲದ ಆಹಾರ ಸೇವನೆ ಮಾಡುತ್ತಿದ್ದ ಶ್ರೀದೇವಿ:

“ತೆರೆಮೇಲೆ ಅಂದವಾಗಿ ಕಾಣಿಸಬೇಕು ಎಂದು ಶ್ರೀದೇವಿ ಸ್ಟ್ರಿಕ್ಟ್ ಡಯೆಟ್ ಅನುಸರಿಸುತ್ತಿದ್ದಳು. ಮದುವೆ ನಂತರ ಈ ವಿಷಯ ನನಗೆ ತಿಳಿಯಿತು. ಉಪ್ಪು ಇಲ್ಲದೆ ಆಹಾರ ಸೇವನೆ ಮಾಡುತ್ತಿದ್ದರಿಂದ ಅನೇಕ ಬಾರಿ ಲೋ ಬಿಪಿಯಿಂದ ನಿತ್ರಾಣಗೊಳ್ಳುತ್ತಿದ್ದಳು. ವೈದ್ಯರು ಜಾಗೃತೆಯಿಂದ ಇರಲು ಹೇಳಿದ್ದರು. ಆದರೆ ಆಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ಶ್ರೀದೇವಿಯದ್ದು ಸಹಜ ಸಾವಲ್ಲ. ಆಕಸ್ಮಿಕ ಸಾವು” ಎಂದಿದ್ದಾರೆ.

ಇನ್ನೂ ಶ್ರೀದೇವಿ ನಿಧನದ ಬಳಿಕ ನಟ ನಾಗಾರ್ಜುನ್‌ ಸಾಂತ್ವನ ಹೇಳಲು ಮನೆಗೆ ಬಂದಿದ್ದರು. ಈ ವೇಳೆ ತಮ್ಮ ಸಿನಿಮಾವೊಂದರ ಚಿತ್ರೀಕರಣದ ವೇಳೆಯೂ ಇದೇ ರೀತಿ ಶ್ರೀದೇವಿ ಡಯೆಟ್ ಮಾಡಿ ಬಾತ್ರೂಮ್‌ನಲ್ಲಿ ಬಿದ್ದು ಹಲ್ಲು ಮುರಿದುಕೊಂಡಿದ್ದಳು ಎಂದು ಅವರು ಹೇಳಿದ್ದರು” ಎಂದರು.

ಇನ್ನೂ ವೈದ್ಯರ ಬಳಿ ನಾನು ಆಕೆಗೆ ಕೊಂಚ ಉಪ್ಪು ತಿನ್ನುವಂತೆ ಶಿಫಾರಸ್ಸು ಮಾಡುವಂತೆ ಮಾಡಿದ್ದೆ. ಊಟದ ಸಮಯದಲ್ಲಿ ನಾನು ಕೂಡ ಉಪ್ಪು ಬೆರಸಿ ಕೊಡುತ್ತಿದ್ದೆ. ಆದರೆ ಆಕೆ ಇದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ.

ದುಬೈನಲ್ಲಿ ಕೊನೆಯುಸಿರೆಳೆದ ಶ್ರೀದೇವಿ

ದುಬೈನ ಎಮಿರೇಟ್ಸ್‌ ಟವರ್‌ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ನಟಿ ಶ್ರೀದೇವಿ ಬಾತ್‌ರೂಮ್‌ಗೆ ತೆರಳಿದಾಗ ಹೃದಯ ಸ್ತಂಭನವಾಗಿದ್ದು, ಬಾತ್‌ಟಬ್‌ಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಫೋರೆನ್ಸಿಕ್ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ದುಬೈನ ಜನರಲ್‌ ಡಿಪಾರ್ಟ್‌ಮೆಂಟ್‌ ಆಫ್‌ ಫೋರೆನ್ಸಿಕ್‌ನಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಪಾರ್ಥೀವ ಶರೀರವನ್ನು ಮುಂಬೈಗೆ ತಂದು ಅಂತ್ಯಕ್ರಿಯೆ ನಡೆಸಲಾಗಿತ್ತು.

2018 ಫೆಬ್ರವರಿಯಲ್ಲಿ ಶ್ರೀದೇವಿ ಒಂದು ಮದುವೆಯಲ್ಲಿ ಭಾಗಿ ಆಗಲು ದುಬೈಗೆ ಹೋಗಿದ್ದರು. ಪತ್ನಿ ಶ್ರೀದೇವಿಗೆ ಸರ್‌ಪ್ರೈಸ್‌ ನೀಡಲು ಬಳಿಕ ಬೋನಿ ಕಪೂರ್ ಭಾರತದಿಂದ ದುಬೈಗೆ ತೆರಳಿದ್ದರು. ಇಬ್ಬರು ಹೊರಗೆ ಊಟಕ್ಕೆ ಹೋಗಲು ತಯಾರಾಗುತ್ತಿದ್ದರು. ಸ್ಥಳೀಯ ಕಾಲಮಾನ ಸಂಜೆ 5.30ರ ಸುಮಾರಿಗೆ, ತಯಾರಾಗಿ ಬರುತ್ತೇನೆಂದು ಶ್ರೀದೇವಿ ಬಾತ್ ರೂಮಿಗೆ ತೆರಳಿದ್ದಾರೆ.

ಎಷ್ಟೆ ಹೊತ್ತು ಆದರೂ ಆಕೆ ಹೊರಗೆ ಬರದಿದ್ದಾಗ ಅನುಮಾನಗೊಂಡ ಬೋನಿ, ಬಲವಂತವಾಗಿ ಬಾಗಿಲು ತೆರೆದಾಗ ನಿಶ್ಚಲರಾಗಿ ನೀರು ತುಂಬಿದ್ದ ಬಾತ್ ಟಬ್‌ನಲ್ಲಿ ಬಿದ್ದಿದ್ದರು. ಬಳಿಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಆಕೆಯ ಪ್ರಾಣ ಪಕ್ಷಿ ಹಾರಿಹೋಗಿತ್ತು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *