ಬಂಧನದ ಭೀತಿಯಲ್ಲಿ ನಟಿ ರಚಿತಾ ರಾಮ್ – ಅಷ್ಟಕ್ಕೂ ಡಿಂಪಲ್ ಕ್ವೀನ್ ಮಾಡಿದ ಕೃತ್ಯವೇನು ಗೊತ್ತಾ?
- ಮನರಂಜನೆ
- January 21, 2023
- No Comment
- 122829
ನ್ಯೂಸ್ ಆ್ಯರೋ : ಸಿನಿಮಾ ರಂಗದ ತಾರೆಯರಂತೂ ದಿನಕ್ಕೊಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕುವುದು ಹೊಸದೇನಲ್ಲ. ಇತ್ತೀಚೆಗಷ್ಟೇ ನಟಿ ರಶ್ಮಿಕಾ ಮಂದಣ್ಣ ಅವರು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರ ನಿರ್ಮಾಣ ಸಂಸ್ಥೆಗೆ ಕೈ ಸನ್ನೆಯ ಮೂಲಕ ಅವಮಾನ ಮಾಡಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಇದೀಗ, ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿ ಪೇಚಿಗೆ ಸಿಲುಕಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಚಿತಾ ರಾಮ್ ನಟನೆಯ ‘ಕ್ರಾಂತಿ’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ವರ್ಷಗಳ ನಂತರ ದರ್ಶನ್ ಅವರನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಮುಂದಿನ ಗುರುವಾರ ಸಿನಿಮಾ ಬಿಡುಗಡೆಯಾಗಲಿದ್ದು, ಇದೇ ಹೊತ್ತಿಗೆ ಸಿನಿಮಾ ನಾಯಕಿ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
‘ಕ್ರಾಂತಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿಯಿರುವ ಹಿನ್ನೆಲೆಯಲ್ಲಿ, ರಾಜ್ಯದಾದ್ಯಂತ ಭರ್ಜರಿ ಪ್ರಚಾರ ನಡೆಯುತ್ತಿದೆ. ಸಿನಿಮಾ ಪ್ರಚಾರ ವೇಳೆಯಲ್ಲಿ ನಟಿ ರಚಿತಾ ರಾಮ್ ‘ಇಷ್ಟು ವರ್ಷ ಜನವರಿ 26 ಬಂದರೆ ಗಣರಾಜ್ಯೋತ್ಸವ ಆಚರಿಸುತ್ತಿದ್ದೀರಿ. ಆದರೆ ಈ ಸಲ ಗಣರಾಜ್ಯೋತ್ಸವ ಮರೆತುಬಿಡಿ. ಕ್ರಾಂತಿ ಉತ್ಸವ ಮಾಡಿ’ ಎಂದಿದ್ದಾರೆ. ಈ ಹೇಳಿಕೆಯ ಬಗ್ಗೆ ತೀವ್ರ ಟೀಕೆಗಳು ಕೇಳಿ ಬರುತ್ತಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಿನಿಮಾ ಬಿಡುಗಡೆ ವೇಳೆಯೇ ನಟಿ ರಚಿತಾರಾಮ್ ಅವರಿಗೆ ಬಂಧನದ ಭೀತಿ ಎದುರಾಗಿದೆ. ರಾಷ್ಟ್ರೀಯ ಹಬ್ಬಕ್ಕೆ ಅವಮಾನ ಮಾಡಿದ್ದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಟಿಯ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶಗೊಂಡಿದ್ದು, ಪರವಿರೋಧ ಚರ್ಚೆಗಳು ಆರಂಭವಾಗಿದೆ.