ಸ್ಯಾಂಡಲ್ ವುಡ್ ನಟ ಉಪೇಂದ್ರ ವಿರುದ್ಧ ಪ್ರಕರಣ ದಾಖಲು – ಫೇಸ್ಬುಕ್ ಲೈವ್ ನಲ್ಲಿ ಸಮುದಾಯವನ್ನು ನಿಂದಿಸಿದ ಆರೋಪ..!
- ಮನರಂಜನೆ
- August 13, 2023
- No Comment
- 193
ನ್ಯೂಸ್ ಆ್ಯರೋ : ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ಉಪೇಂದ್ರ ವಿರುದ್ಧ ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪೇಂದ್ರ ಅವರ ವಿರುದ್ಧ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಮಧುಸೂದನ್ ದೂರು ನೀಡಿದ್ದಾರೆ. ಎಫ್ಐಆರ್ ದಾಖಲಾಗಿದ್ದು, ಪೋಲಿಸರು ಉಪೇಂದ್ರ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಉಪೇಂದ್ರ ಅವರು ಫೇಸ್ಬುಕ್ ನಲ್ಲಿ ಮಾತನಾಡಿರುವ ವಿಡಿಯೋವೊಂದರಲ್ಲಿ ಊರು ಅಂದ್ಮೇಲೆ ಹೊಲ್ಗೇರಿ ಇರುತ್ತಲ್ಲಾ ಹಾಗೆ ಅಂತ ಎಂದು ಹೇಳಿದ್ದರು. ಇದರಿಂದ ಉಪೇಂದ್ರ ಅವರ ವಿರುದ್ಧ ವಿವಿಧ ವರ್ಗದ ಜನತೆ ಆಕ್ರೋಶ ವ್ಯಕ್ತಪಡಿಸಿದ್ದರು.
ವಿಡಿಯೋ ವೈರಲ್ ಆಗುತ್ತಲೇ ಎಚ್ಚೆತ್ತುಕೊಂಡ ಉಪೇಂದ್ರ ತಮ್ಮ ಮಾತಿನಿಂದ ಆಗಿರುವ ನೋವಿಗೆ ಫೇಸ್ಬುಕ್ ಪೋಸ್ಟ್ ನಲ್ಲಿ ಸಾರಿ ಕೇಳಿದ್ದು, ವಿಡಿಯೋ ಡಿಲೀಟ್ ಮಾಡಿದ್ದಾರೆ.